ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಪ್ರತಿಭಟನೆ
ಚಿತ್ರದುರ್ಗ, ಜುಲೈ 15: ಸಾಸ್ವೆಹಳ್ಳಿ ಏತ ನೀರಾವರಿ ಎರಡನೇ ಹಂತದ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ, ಅಖಂಡ ಕರ್ನಾಟಕ ರೈತ ಸಂಘದ ಸಾವಿರಾರು ರೈತರು ಒನಕೆ ಓಬವ್ವ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.
"ನಾವು ನೀರಿಗಾಗಿ ನಿರಂತರ ಹೋರಾಟ ನಡೆಸಿಕೊಂಡು ಬರುತ್ತಿದ್ದೇವೆ. ಮೊದಲು ರೈತರು ಸಂಘಟಿತರಾಗಬೇಕು. ಮುಂದೊಂದು ದಿನ ನೀರು ಬರುತ್ತದೆಂದು ಸುಮ್ಮನೆ ಕೂತರೆ ಪ್ರಯೋಜನವಿಲ್ಲ. ಹಿರಿಯೂರಿನ ವಾಣಿವಿಲಾಸ ಸಾಗರಕ್ಕೂ ನೀರು ಬರಬೇಕು. ರಾಜಕಾರಣಿಗಳೇ, ಜನರಿಗೆ ನೀವು ನೀಡಿರುವ ವಾಗ್ದಾನ ಪೂರೈಸಿಕೊಳ್ಳುವುದಕ್ಕಾದರೂ ನೀರು ಕೊಡಿ" ಎಂದು ಆಗ್ರಹಿಸಿದರು.
"ನಾನು ನೀರಿಗಾಗಿ ಬೀದಿಗಿಳಿದು ಹೋರಾಡೋಣ ಎಂದು ಕರೆದಾಗ ನೀವ್ಯಾರೂ ಬರಲಿಲ್ಲ. ಈಗ ಸಮಯ ಬಂದಿದೆ. ನೀರಿಗಾಗಿ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡೋಣ. ಇಲ್ಲವಾದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸೋಣ. ಇದಕ್ಕೆ ನಿಮ್ಮೆಲ್ಲರ ಬೆಂಬಲ ಇರಬೇಕು. ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರದಿಂದ ತತ್ತರಿಸಿವೆ. ಸಾಂಘಿಕ ಹೋರಾಟ ಮಾಡೋಣ. ರೈತರೆಲ್ಲಾ ಒಟ್ಟಾಗಿದ್ದರೆ ಖಂಡಿತ ನೀರು ಬಂದೇ ಬರುತ್ತದೆ" ಎಂದು ಆತ್ಮಸ್ಥೈರ್ಯ ತುಂಬಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಸದಸ್ಯೆ ಜಯಪ್ರತಿಭಾ, ತಾ.ಪಂ.ಅಧ್ಯಕ್ಷ ಡಿ.ಎಂ.ಲಿಂಗರಾಜು, ರೈತ ಮುಖಂಡರಾದ ಬಸ್ತಿಹಳ್ಳಿ ಸುರೇಶ್ಬಾಬು, ಮಂಜಣ್ಣ, ರವಿಕುಮಾರ್, ನಾಗರಾಜ್, ಎಂ.ಬಿ.ತಿಪ್ಪೇಸ್ವಾಮಿ, ಸಿ.ಆರ್.ತಿಮ್ಮಣ್ಣ, ಭೀಮರೆಡ್ಡಿ, ಕುರುಬರಹಳ್ಳಿ ಶಿವಣ್ಣ ಮುಂತಾದವರು ವೇದಿಕೆಯಲ್ಲಿದ್ದರು. ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications