ಹಿರಿಯೂರು: ರಾತ್ರೋರಾತ್ರಿ ಕುವೆಂಪು & ಪುನೀತ್ ರಾಜ್ಕುಮಾರ್ ಪ್ರತಿಮೆ ತೆರವು
ಚಿತ್ರದುರ್ಗ, ಅಕ್ಟೋಬರ್ 27: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಇತ್ತೀಚೆಗಷ್ಟೇ ರಾತ್ರೋರಾತ್ರಿ ಮಹನೀಯರಿಬ್ಬರ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ, ನಾಲ್ಕೈದು ದಿನಗಳ ಹಿಂದಷ್ಟೇ ಅನಾವರಣಗೊಳಿಸಲಾಗಿತ್ತು. ಆದರೆ ಇದೀಗ ರಾತ್ರೋರಾತ್ರಿ ನಗರಸಭೆ ಅಧಿಕಾರಿಗಳು ಪ್ರತಿಮೆಗಳನ್ನು ತೆರವುಗೊಳಿಸಿದ್ದಾರೆ.
ಹಿರಿಯೂರು ನಗರದ ರಂಜಿತಾ ಹೋಟೆಲ್ ಮುಂಭಾಗದಲ್ಲಿ ರಾಷ್ಟ್ರಕವಿ ಕುವೆಂಪು ಪ್ರತಿಮೆ ಹಾಗೂ ಹಿರಿಯೂರು ಇಂದಿರಾ ಕ್ಯಾಂಟೀನ್ ಬಳಿ ಕರ್ನಾಟಕ ರತ್ನ ನಟ ಪುನೀತ್ ರಾಜ್ಕುಮಾರ್ ಅವರ ಪ್ರತಿಮೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಷ್ಠಾಪಿಸಿದ್ದರು. ಇದೀಗ ಅಧಿಕಾರಿಗಳು ಏಕಾಏಕಿ ಪುತ್ಥಳಿಗಳನ್ನು ತೆರವುಗೊಳಿಸಿದ್ದಾರೆ.

ಮಾಹಿತಿ ತಿಳಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಅಧಿಕಾರಿಗಳ ಜೊತೆ ಕೆಲಕಾಲ ವಾಗ್ವಾದ ನಡೆಸಿದ್ದಾರೆ. ಆದರೆ ಅಧಿಕಾರಿಗಳು ಯಾರಿಗೂ ಕ್ಯಾರೇ ಎನ್ನದೇ ಪ್ರತಿಮೆಗಳನ್ನು ತೆರವುಗೊಳಿಸಿದ್ದಾರೆ. ಹೀಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಮಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ಥಳಿಗಳ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಕರವೇ ಪ್ರಧಾನ ಕಾರ್ಯದರ್ಶಿ ದಾದಾಪಿರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಅಧಿಕಾರಿಗಳಿಂದಲೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹಿರಿಯೂರು ನಗರದಲ್ಲಿ ರಾತ್ರೋರಾತ್ರಿ ಪ್ರತಿಮೆಗಳ ನಿರ್ಮಾಣ
ಅಕ್ಟೋಬರ್ 2ರಂದು ಹಿರಿಯೂರು ನಗರದಲ್ಲಿ ರಾತ್ರೋರಾತ್ರಿ ಎರಡು ಪ್ರತಿಮೆ ನಿರ್ಮಾಣ ಮಾಡಲಾಗಿತ್ತು. ಹಿರಿಯೂರು ನಗರದ ಇಂದಿರಾ ಕ್ಯಾಂಟೀನ್ ಬಳಿ ಇರುವ ನೂತನ ಬಿಇಓ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರತ್ನ ನಟ ಪುನೀತ್ ರಾಜ್ ಕುಮಾರ್ ಅವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿತ್ತು. ಮತ್ತೊಂದು ಕಡೆ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಯನ್ನು ಕೂಡ ನಿರ್ಮಾಣ ಮಾಡಲಾಗಿತ್ತು.
ರಾತ್ರೋರಾತ್ರಿ ನಿರ್ಮಾಣವಾದ ಈ ಪ್ರತಿಮೆಗಳಿಗೆ ಕೆಂಪು ಹಾಗೂ ಹಳದಿ ಬಣ್ಣದ ಬಟ್ಟೆಯನ್ನು ಸುತ್ತಲಾಗಿತ್ತು. ಪ್ರತಿಮೆಗಳ ಕೆಳ ಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಎಂದು ಬರೆಯಲಾಗಿತ್ತು. ಈ ಎರಡು ಪ್ರತಿಮೆಗಳನ್ನು ಬೆಂಗಳೂರಿನಿಂದ ಸಿದ್ಧಪಡಿಸಿ ಹಿರಿಯೂರಿಗೆ ತರಲಾಗಿದ್ದು, ಕಳೆದ ನಾಲ್ಕೈದು ದಿನಗಳ ಹಿಂದೆ ಅನಾವರಣಗೊಳಿಸಲಾಗಿತ್ತು. ಒಂದೇ ನಗರದಲ್ಲಿ ಎರಡು ಪ್ರತಿಮೆಗಳು ನಿರ್ಮಾಣವಾಗಿದ್ದು ತೀವ್ರ ಕುತೂಹಕ್ಕೆ ಕಾರಣವಾಗಿತ್ತು. ಆದರೆ ಇದೀಗ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications