ಚಿತ್ರದುರ್ಗದಲ್ಲಿ ವರುಣನ ಸಿಂಚನ, ಎಲ್ಲೆಲ್ಲಿ ಎಷ್ಟು ಮಳೆಯಾಯಿತು?
ಚಿತ್ರದುರ್ಗ, ಸೆಪ್ಟೆಂಬರ್ 4: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಹದವಾದ ಮಳೆಯಾಗುತ್ತಿದೆ. ಬಿಸಿಲಿಗೆ ಬಾಡುತ್ತಿದ್ದ ಬೆಳೆಗಳು ಇದೀಗ ಮಳೆಯಿಂದ ಕಂಗೊಳಿಸುತ್ತಿವೆ. ವರುಣನ ಆಗಮನ ರೈತರಲ್ಲಿ ಸಮಾಧಾನ ತಂದಿದೆ. ಜಿಲ್ಲೆಯಾದ್ಯಂತ ಮಳೆಯಾಗಿದ್ದು ಕೃಷಿ ಚಟುವಟಿಕೆ ಗರಿಗೆದರಿದೆ.
Recommended Video
ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದ ಹಿನ್ನೆಲೆ ಜಿಲ್ಲೆಯಾದ್ಯಂತ ಬೆಳೆಗಳು ಬಾಡುತ್ತಿದ್ದು, ಸಾವಿರಾರು ರೈತರು ಆತಂಕಕ್ಕೆ ಒಳಗಾಗಿದ್ದರು. ಆದರೆ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಬೆಳೆಗಳು ಚಿಗುರೊಡೆಯುತ್ತಿವೆ. ರೈತರಲ್ಲಿ ಇದೀಗ ಮತ್ತೆ ಆಶಾಭಾವನೆ ಮೂಡಿದೆ.

ರಾಗಿ, ಶೇಂಗಾ, ಮೆಕ್ಕೆಜೋಳ ಬೆಳೆದಿದ್ದ ರೈತರು
ರೈತರು ಸಾಲ ಸೂಲ ಮಾಡಿಕೊಂಡು ಬೀಜ, ಗೊಬ್ಬರ ಖರೀದಿಸಿ ಹತ್ತಾರು ಸಾವಿರ ಖರ್ಚು ಮಾಡಿ ರಾಗಿ, ಜೋಳ, ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಬಿತ್ತನೆ ಮಾಡಿದ್ದರು. ರಾಗಿ, ಶೇಂಗಾ, ಮೆಕ್ಕೆಜೋಳಕ್ಕೆ ಎಡೆಕುಂಟೆ ಹೊಡೆದು, ಕಳೆ ತೆಗೆದು ಗೊಬ್ಬರ ಹಾಕಿದ್ದರು. ಆ ಸಮಯದಲ್ಲಿ ಬೆಳೆಗಳಿಗೆ ಮಳೆ ಬೇಕಿತ್ತು. ಆದರೆ ಮಳೆಯಿಲ್ಲದೇ ರೈತರು ಕಂಗಾಲಾಗಿದ್ದರು.

ಒಂದು ತಿಂಗಳಿಂದ ಮಳೆಯಿಲ್ಲ
ಕಳೆದ ಒಂದು ತಿಂಗಳಿನಿಂದ ಮಳೆ ಬಾರದ ಕಾರಣ ಬಿಸಿಲಿಗೆ ಈ ಬೆಳೆಗಳು ಬಾಡುತ್ತಿದ್ದವು. ಈ ಬೆಳೆಗಳಿಗೆ ಮಳೆಯ ಅವಶ್ಯಕತೆ ತುಂಬಾ ಇತ್ತು. ಜಿಲ್ಲೆಯ ರೈತರು ಫಸಲು ಕೈಕೊಡುವ ಆತಂಕದಲ್ಲಿದ್ದರು. ಇದೀಗ ಜಿಲ್ಲೆಯ ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು, ಹೊಳಲ್ಕೆರೆ ಸೇರಿದಂತೆ ಹೊಸದುರ್ಗ ತಾಲ್ಲೂಕಿನಲ್ಲೂ ಹದವಾದ ಮಳೆಯಾಗಿದ್ದು ಅನ್ನದಾತರು ನಿಟ್ಟುಸಿರು ಬಿಟ್ಟಿದ್ದಾರೆ.

ಜೂನ್ ನಲ್ಲಿ ತುಂಬಿಹರಿದಿದ್ದ ಹಳ್ಳಕೊಳ್ಳಗಳು
ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿದಿದ್ದು ಯಾವುದೇ ಹಾನಿಯಾಗಿರುವುದು ವರದಿಯಾಗಿಲ್ಲ. ಜೂನ್ ತಿಂಗಳಲ್ಲಿ ಮಳೆಯಾಗಿದ್ದರಿಂದ ಜಿಲ್ಲೆಯಲ್ಲಿ ಕೆರೆ ಕಟ್ಟೆ ತುಂಬಿ ಹರಿಯುತ್ತಿದ್ದವು. ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಕೆರೆ ತುಂಬಿ ಕೊಡಿ ಬಿದ್ದು ಗ್ರಾಮದ ಕೆಲವು ಮನೆಗಳು ಜಲಾವೃತವಾಗಿದ್ದವು. ಇಂದು ಕೂಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಿತ್ರದುರ್ಗದಲ್ಲಿ ಎಷ್ಟು ಪ್ರಮಾಣದ ಮಳೆ?
ಚಿತ್ರದುರ್ಗ ಜಿಲ್ಲೆಯಲ್ಲಿ 19.8 ಮಿ.ಮೀ ಮಳೆಯಾಗಿರುವುದಾಗಿ ದಾಖಲಾಗಿದೆ. ಚಳ್ಳಕೆರೆಯಲ್ಲಿ 26.6 ಮಿ.ಮೀ., ಹಿರಿಯೂರು 52.0, ಹೊಸದುರ್ಗ 3.2, ಹಿರೆಗೂಂಟನೂರು 3.2, ಭರಮಸಾಗರ 16.0, ಸಿರಿಗೆರೆ 7.4, ತುರುವನೂರು 48.2, ಐನಹಳ್ಳಿ 13.4, ಒಟ್ಟು 135.8 ಮಿ.ಮೀ ಮಳೆ ದಾಖಲಾಗಿದೆ. ಸರಾಸರಿ 19.4 ಮಿ.ಮೀ ಮಳೆ ದಾಖಲಾಗಿದೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್












Click it and Unblock the Notifications