Ration card: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮುಗಿಬಿದ್ದ ಮಹಿಳೆಯರು, ಮುಂದಾಗಿದ್ದೇನು ಗೊತ್ತಾ?
ಹಿರಿಯೂರು, ಡಿಸೆಂಬರ್, 03: ಹೊಸದಾಗಿ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದರೆಂಬ ಮಾಹಿತಿ ತಿಳಿದ ಮಹಿಳೆಯರು ಮಧ್ಯರಾತ್ರಿಯಿಂದಲೇ ಸಾಲು ಸಾಲಾಗಿ ನಿಂತು ಬರಿಗೈಲಿ ಹಿಂತಿರುಗಿದ ಘಟನೆ ಭಾನುವಾರ ನಗರದಲ್ಲಿ ನಡೆದಿದೆ.
ನಗರದ ಕರೂರು ವೈಶ್ಯ ಬ್ಯಾಂಕ್ ಹಿಂಭಾಗದ ಕರ್ನಾಟಕ ಒನ್ ಸಮಗ್ರ ನಾಗರೀಕ ಕೇಂದ್ರ ಹಾಗೂ ತಾಲೂಕಿನಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಸಮಸ್ಯೆ ಸಂಭವಿಸಿದೆ. ಹೊಸದಾಗಿ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದರೆಂಬ ನಕಲಿ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದನ್ನು ನೋಡಿದ ಮಹಿಳೆಯರು ಶನಿವಾರ ಮಧ್ಯರಾತ್ರಿಯಿಂದಲೇ ಅರ್ಜಿ ಸಲ್ಲಿಸುವ ಕರ್ನಾಟಕ ಒನ್ ಕೇಂದ್ರದ ಮುಂಭಾಗದಲ್ಲಿ ಚಾಪೆ ಹಾಸಿ ಕುಳಿತು ಕಾಯುಲು ಮುಂದಾಗಿ ಈ ವೇಳೆ ನೂಕುನುಗ್ಗಲು ಉಂಟಾಯಿತು.

ಬೆಳಗ್ಗೆ 11 ಗಂಟೆಯವರೆಗೂ ಕಾದು ಕುಳಿತರು ಅಂಗಡಿಯವರು ಬಾಗಿಲು ತೆರೆಯಲಿಲ್ಲ. ಈ ವೇಳೆ ಇದನ್ನು ಗಮನಿಸಿದ ಕೆಲವು ಸಾರ್ವಜನಿಕರು ಇದು ಫೇಕ್ ಸುದ್ದಿಯಾಗಿದ್ದು, ಇಲಾಖೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಆದ್ದರಿಂದ ತಾವುಗಳು ಕಾದು ಕುಳಿತರು ಪ್ರಯೋಜನವಿಲ್ಲ ಎಂದು ತಿಳಿ ಹೇಳಿದಾಗ ಮಹಿಳೆಯರು ಬೇಸರಗೊಂಡು ಅಲ್ಲಿಂದ ಬರಿಗೈಯಲ್ಲಿ ಮನೆಗೆ ಹಿಂದಿರುಗಿದ್ದಾರೆ.
ಈ ನಕಲಿ ಪೋಸ್ಟರ್ ಹರಿದಾಡುತ್ತಿದ್ದರೂ ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಗೆ ಯಾವುದೇ ಸರಿಯಾದ ಮಾಹಿತಿ ನೀಡದೇ ಇರುವುದು ಇಂತಹ ಅಸಮಾಧಾನ ಘಟನೆಗೆ ಕಾರಣರಾಗಿದ್ದಾರೆ. ಹೊಸದಾಗಿ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದರೆಂದು ತಿಳಿದು ನಾನು ಅರ್ಜಿ ಸಲ್ಲಿಸಲು ಬೆಂಗಳೂರಿನಿಂದ ಬಂದು ಬೆಳಗ್ಗೆ 6 ಗಂಟೆಯಿಂದ ಕ್ಯೂನಲ್ಲಿ ನಿಂತಿಕೊಂಡೆ ಎಂದು ವ್ಯಕ್ತಿ ಮಂಜುನಾಥ್ ಅಸಮಾಧಾನ ಹೊರಹಾಕಿದರು.
12 ಗಂಟೆಯಾದರೂ ಸಹ ಗ್ರಾಮ ಒನ್ ಕೇಂದ್ರ ಬಾಗಿಲು ತೆರೆಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನಿಂದ ಬಂದಿದ್ದ ವ್ಯಕ್ತಿ ಮಂಜುನಾಥ್ ಸರ್ಕಾರವನ್ನು ಆಗ್ರಹಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications