Ration card: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮುಗಿಬಿದ್ದ ಮಹಿಳೆಯರು, ಮುಂದಾಗಿದ್ದೇನು ಗೊತ್ತಾ?
ಹಿರಿಯೂರು, ಡಿಸೆಂಬರ್, 03: ಹೊಸದಾಗಿ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದರೆಂಬ ಮಾಹಿತಿ ತಿಳಿದ ಮಹಿಳೆಯರು ಮಧ್ಯರಾತ್ರಿಯಿಂದಲೇ ಸಾಲು ಸಾಲಾಗಿ ನಿಂತು ಬರಿಗೈಲಿ ಹಿಂತಿರುಗಿದ ಘಟನೆ ಭಾನುವಾರ ನಗರದಲ್ಲಿ ನಡೆದಿದೆ.
ನಗರದ ಕರೂರು ವೈಶ್ಯ ಬ್ಯಾಂಕ್ ಹಿಂಭಾಗದ ಕರ್ನಾಟಕ ಒನ್ ಸಮಗ್ರ ನಾಗರೀಕ ಕೇಂದ್ರ ಹಾಗೂ ತಾಲೂಕಿನಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಸಮಸ್ಯೆ ಸಂಭವಿಸಿದೆ. ಹೊಸದಾಗಿ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದರೆಂಬ ನಕಲಿ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದನ್ನು ನೋಡಿದ ಮಹಿಳೆಯರು ಶನಿವಾರ ಮಧ್ಯರಾತ್ರಿಯಿಂದಲೇ ಅರ್ಜಿ ಸಲ್ಲಿಸುವ ಕರ್ನಾಟಕ ಒನ್ ಕೇಂದ್ರದ ಮುಂಭಾಗದಲ್ಲಿ ಚಾಪೆ ಹಾಸಿ ಕುಳಿತು ಕಾಯುಲು ಮುಂದಾಗಿ ಈ ವೇಳೆ ನೂಕುನುಗ್ಗಲು ಉಂಟಾಯಿತು.

ಬೆಳಗ್ಗೆ 11 ಗಂಟೆಯವರೆಗೂ ಕಾದು ಕುಳಿತರು ಅಂಗಡಿಯವರು ಬಾಗಿಲು ತೆರೆಯಲಿಲ್ಲ. ಈ ವೇಳೆ ಇದನ್ನು ಗಮನಿಸಿದ ಕೆಲವು ಸಾರ್ವಜನಿಕರು ಇದು ಫೇಕ್ ಸುದ್ದಿಯಾಗಿದ್ದು, ಇಲಾಖೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಆದ್ದರಿಂದ ತಾವುಗಳು ಕಾದು ಕುಳಿತರು ಪ್ರಯೋಜನವಿಲ್ಲ ಎಂದು ತಿಳಿ ಹೇಳಿದಾಗ ಮಹಿಳೆಯರು ಬೇಸರಗೊಂಡು ಅಲ್ಲಿಂದ ಬರಿಗೈಯಲ್ಲಿ ಮನೆಗೆ ಹಿಂದಿರುಗಿದ್ದಾರೆ.
ಈ ನಕಲಿ ಪೋಸ್ಟರ್ ಹರಿದಾಡುತ್ತಿದ್ದರೂ ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಗೆ ಯಾವುದೇ ಸರಿಯಾದ ಮಾಹಿತಿ ನೀಡದೇ ಇರುವುದು ಇಂತಹ ಅಸಮಾಧಾನ ಘಟನೆಗೆ ಕಾರಣರಾಗಿದ್ದಾರೆ. ಹೊಸದಾಗಿ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದರೆಂದು ತಿಳಿದು ನಾನು ಅರ್ಜಿ ಸಲ್ಲಿಸಲು ಬೆಂಗಳೂರಿನಿಂದ ಬಂದು ಬೆಳಗ್ಗೆ 6 ಗಂಟೆಯಿಂದ ಕ್ಯೂನಲ್ಲಿ ನಿಂತಿಕೊಂಡೆ ಎಂದು ವ್ಯಕ್ತಿ ಮಂಜುನಾಥ್ ಅಸಮಾಧಾನ ಹೊರಹಾಕಿದರು.
12 ಗಂಟೆಯಾದರೂ ಸಹ ಗ್ರಾಮ ಒನ್ ಕೇಂದ್ರ ಬಾಗಿಲು ತೆರೆಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನಿಂದ ಬಂದಿದ್ದ ವ್ಯಕ್ತಿ ಮಂಜುನಾಥ್ ಸರ್ಕಾರವನ್ನು ಆಗ್ರಹಿಸಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications