Get Updates
Get notified of breaking news, exclusive insights, and must-see stories!

Ration: ಹೊಳಲ್ಕೆರೆ ಕೆರೆಯೊಂದರ ಪಕ್ಕದಲ್ಲಿ 50ಕ್ಕೂ ಹೆಚ್ಚು ಗೋಧಿ ಚೀಲಗಳು ಪತ್ತೆ.!

ಚಿತ್ರದುರ್ಗ, ನವೆಂಬರ್‌, 24: 50ಕ್ಕೂ ಹೆಚ್ಚು ಗೋಧಿ ಚೀಲಗಳನ್ನು ಕರೆಯೊಂದರ ಪಕ್ಕದಲ್ಲಿ ಬಿಸಾಡಿ ಹೋಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಅಂದಹಾಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಅವಳಿ ಜಟ್ಟಿ ರಸ್ತೆಯ ಕೆಸರುಕಟ್ಟೆ ಕೊಡಿಯ ಸೇತುವೆ ಕೆಳಭಾಗದಲ್ಲಿ ಮೂಟೆ ಮೂಟೆಯ ಚೀಲಗಳನ್ನು ಬಿಸಾಡಿ ಹೋಗಿದ್ದಾರೆ. ಪಡಿತರ ಕಾರ್ಡ್‌ದಾರರಿಗೆ ವಿತರಣೆ ಮಾಡಲು ಚೀಲಗಟ್ಟಲೇ ಗೋಧಿಯನ್ನು ತರಲಾಗಿದೆ ಎನ್ನಲಾಗುತ್ತಿದೆ. ಗೋಧಿ ಹುಳ ಹಿಡಿದಿದ್ದರಿಂದ ಗೋಡೌನ್‌ನಿಂದ ತಂದು ಬಿಸಾಡಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

Ration: More than 50 wheat bags found near lake of Holalkere

ಇಂದು ಬೆಳಗ್ಗೆ ಸಾರ್ವಜನಿಕರ ಕಣ್ಣಿಗೆ ಬಿದ್ದಿದ್ದು ಬೆಳಕಿಗೆ ಬಂದಿದೆ. ಬಿಸಾಡಿರುವ ಗೋಧಿಯನ್ನು ಕುರಿ, ಮೇಕೆ, ಜಾನುವಾರುಗಳು ತಿಂದಿದ್ದರೆ ಅನಾಹುತ ಸಂಭವಿಸಿದ್ರೆ ಇದಕ್ಕೆ ಯಾರು ಹೊಣೆಗಾರರು ಎಂದು ರೈತರು ಪ್ರಶ್ನೆ ಮಾಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಮಳೆ ಇಲ್ಲದೆ ಬೆಳೆಗಳ ಇಳುವರಿ ಕಡಿಮೆಯಾಗಿದ್ದು, ಅನ್ನಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಇಷ್ಟೊಂದು ಚೀಲದ ಗೋಧಿಯನ್ನು ಬಿಸಾಡಿರುವುದು ಅನುಮಾನ ಮೂಡಿಸಿದೆ. ಇದರ ವಿರುದ್ಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಶೀಘ್ರವೇ ಸ್ಮಾರ್ಟ್‌ ಕಾರ್ಡ್‌ ವಿತರಣೆ

ಬೆಂಗಳೂರು, ನವೆಂಬರ್‌, 23: ಅನ್ನಭಾಗ್ಯ ಯೋಜನೆ ಜಾರಿಯಾಗಿನಿಂದ ರೇಷನ್‌ ಕಾರ್ಡ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಲವಾರು ಬದಲಾವಣೆಗಳನ್ನು ತರುತ್ತಲೇ ಇದೆ. ಇದೀಗ ಪಡಿತರದಾರರಿಗೆ ಚೀಟಿ ಜೊತೆಗೆ ಶೀಘ್ರವೇ ಅನ್ನಭಾಗ್ಯದ ಸ್ಮಾರ್ಟ್‌ ಕಾರ್ಡ್‌ ಕೊಡಲಾಗುವುದು. ಬಿಪಿಎಲ್‌ ಹಾಗೂ ಎಪಿಎಲ್‌ ಚೀಟಿದಾರರಿಗೆ ಇದನ್ನು ವಿತರಣೆ ಮಾಡಲಾಗುವುದು ಎಂದು ಕೋಲಾರದಲ್ಲಿ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಈ ಸ್ಮಾರ್ಟ್‌ ಕಾರ್ಡ್‌ ಬಹು ಉಪಯೋಗಿ ಕಾರ್ಡ್‌ ಆಗಲಿದೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ಇನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಡಿ 1.13 ಕೋಟಿ ಕಾರ್ಡ್‌ದಾರರಿಗೆ ಅಂದರೆ ಸುಮಾರು ₹4 ಕೋಟಿ ಜನರಿಗೆ ಹಣ ಸಂದಾಯ ಮಾಡಿದ್ದೇವೆ.
2.66 ಲಕ್ಷ ಕಾರ್ಡ್‌ದಾರರು ಪೋಸ್ಟಲ್‌ ಇಲಾಖೆಯಲ್ಲಿ ಖಾತೆ ತೆರೆದಿದ್ದು, ಅವರಿಗೂ ಹಣ ಸಂದಾಯ ಆಗುತ್ತಿದೆ ಎಂದರು.

ಶೇಕಡಾ 90ರಷ್ಟು ಅಧಿಕ ಕಾರ್ಡ್‌ದಾರರಿಗೆ ಈಗಾಗಲೇ ಹಣ ತಲುಪಿದೆ. ಇನ್ನೂ 7 ಲಕ್ಷ ಕಾರ್ಡ್‌ದಾರರು ಬ್ಯಾಂಕ್‌ ಖಾತೆ ತೆರೆಯದಿರುವುದು ಸೇರಿದಂತೆ ವಿವಿಧ ಸಮಸ್ಯೆಯಿದೆ. ಅಂತಹವರಿಗೆ ಹಣ ಸಂದಾಯ ಆಗಿಲ್ಲ. ಅವರಿಗೂ ಹಣ ಸಂದಾಯ ಮಾಡಲು ಇಲಾಖೆ ಅಧಿಕಾರಿಗಳೇ ಖುದ್ದಾಗಿ ಕಾರ್ಡ್‌ಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಮೂಲಕ ಶೇಕಡಾ 100 ಸಾಧನೆ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

ವಿದ್ಯುತ್‌ ಯೋಜನೆಗಳ ಫಲಾನುಭವಿಗಳ ಬಾಕಿ ಮನ್ನಾಗೆ ನಿರ್ಧಾರ

3 ವಿದ್ಯುತ್‌ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳಿಗೆ ಹೆಚ್ಚಿನ ಸಬ್ಸಿಡಿ ದರದಲ್ಲಿ ವಿದ್ಯುತ್ ನೀಡಲಾಗುತ್ತಿದ್ದು. ಇದೀಗ 3 ವಿದ್ಯುತ್ ಯೋಜನೆಗಳ ಫಲಾನುಭವಿಗಳ 389 ಕೋಟಿ ರೂಪಾಯಿ ಬಾಕಿ ಮನ್ನಾ ಮಾಡಲು ರಾಜ್ಯದ ಸರ್ಕಾರ ನಿರ್ಧಾರ ಮಾಡಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಮಾಹಿತಿ ನೀಡಿದ್ದಾರೆ. ಹಾಗಾದರೆ ಈ ಮೂರು ಯೋಜನೆಗಳು ಯಾವುವು, ಯಾರೆಲ್ಲ ವಿದ್ಯುತ್‌ ಬಿಲ್‌ ಬಾಕಿ ಮನ್ನಾ ಆಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್ ಅವರು, "ಕುಟೀರ ಭಾಗ್ಯ", "ಭಾಗ್ಯಜ್ಯೋತಿ" ಮತ್ತು "ಅಮೃತ ಜ್ಯೋತಿ" ಯೋಜನೆ ಫಲಾನುಭವಿಗಳಿಗೆ ಉಚಿತವಾಗಿ ಅಥವಾ ಹೆಚ್ಚಿನ ಸಬ್ಸಿಡಿ ದರದಲ್ಲಿ ವಿದ್ಯುತ್ ಪಡೆಯುತ್ತಿದ್ದ ಫಲಾನುಭವಿಗಳ 389 ಕೋಟಿ ರೂಪಾಯಿಗಳ ಬಾಕಿ ಮನ್ನಾ ಮಾಡಲು ರಾಜ್ಯದ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು ಎಂದು ಕನ್ನಡ ಪ್ರಭ ವರದಿ ಮಾಡಿದೆ.

ಹಾಗೆಯೇ ಇದು ಈಗಾಗಲೇ ಈ ಮೂರು ಯೋಜನೆಗಳನ್ನು ತನ್ನ ಮಹತ್ವಾಕಾಂಕ್ಷೆಯ "ಗೃಹ ಜ್ಯೋತಿ" ಯೋಜನೆಯೊಂದಿಗೆ ವಿಲೀನಗೊಳಿಸಲಾಗಿದ್ದು, ವಸತಿ ವಿದ್ಯುತ್ ಸಂಪರ್ಕಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುತ್ತದೆ ಎಂದರು.

ಈ ಹಿಂದೆ 'ಕುಟೀರ ಭಾಗ್ಯ' ಮತ್ತು 'ಭಾಗ್ಯ ಜ್ಯೋತಿ' ಫಲಾನುಭವಿಗಳು 40 ಹಾಗೂ 'ಅಮೃತ ಜ್ಯೋತಿ' ಫಲಾನುಭವಿಗಳು 75 ಯೂನಿಟ್‌ ವಿದ್ಯುತ್ ಪಡೆಯುತ್ತಿದ್ದರು. 40 ಯೂನಿಟ್ ಪಡೆದವರಿಗೆ ಈಗ 50 ಯೂನಿಟ್ ಜೊತೆಗೆ 10 ಯೂನಿಟ್ ಮತ್ತು 75 ಯೂನಿಟ್ ಪಡೆಯುವವರಿಗೆ ಶೇಕಡಾ 10ರಷ್ಟು ಹೆಚ್ಚುವರಿಯಾಗಿ ನೀಡಲಾಗುವುದು ಎಂದು ತಿಳಿಸಿದರು.

"ಕುಟೀರ ಭಾಗ್ಯ", "ಭಾಗ್ಯಜ್ಯೋತಿ" ಹಾಗೂ "ಅಮೃತ ಜ್ಯೋತಿ" ಯೋಜನೆಗಳ ಫಲಾನುಭವಿಗಳ 389 ಕೋಟಿ ರೂಪಾಯಿಗಳ ಹಣ ಬಾಕಿ ಇತ್ತು. ನಾನು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ. ಮತ್ತು ಅದನ್ನು ಮನ್ನಾ ಮಾಡಲು ನಿರ್ಧಾರ ಮಾಡಿದ್ದೇವೆ. ಸೋಲಾರ್ ಸಬ್‌ಸ್ಟೇಷನ್‌ಗಳಿಗೆ ಸರ್ಕಾರ ಟೆಂಡರ್ ಕರೆದಿದ್ದು, 750 ಮೆಗಾ ವ್ಯಾಟ್ ಉತ್ಪಾದಿಸುವ 7 ಬಿಡ್‌ದಾರರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+