ರೇಣುಕಾಸ್ವಾಮಿ ಕೊಲೆ ಪ್ರಕರಣ ಸಿಬಿಐಗೆ ವಹಿಸುವ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್
ಚಿತ್ರದುರ್ಗ, ಜೂನ್ 18: ಪವಿತ್ರ ಗೌಡ ಹಾಗೂ ನಟ ದರ್ಶನ್ ಮತ್ತು ಗ್ಯಾಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದಲ್ಲಿ ವಿಚಾರರಣೆ ನಡೆಯುತ್ತಿದೆ. ಮತ್ತೊಂದು ಕಡೆ ಕೊಲೆಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ಮಠಾಧೀಶರು ಸೇರಿದಂತೆ ರಾಜಕೀಯ ಗಣ್ಯರು, ಚಿತ್ರರಂಗದ ಗಣ್ಯರು ಭೇಟಿ ನೀಡುತ್ತಿದ್ದಾರೆ.
ಇಂದು ಗೃಹ ಸಚಿವ ಜಿ. ಪರಮೇಶ್ವರ್ ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿರುವ ಮೃತ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದರು. ರೇಣುಕಾಸ್ವಾಮಿ ತಂದೆ, ತಾಯಿ ಹಾಗೂ ಪತ್ನಿಯ ಜೊತೆ ಮಾತನಾಡಿದ ಸಚಿವರು ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ರೇಣುಕಾಸ್ವಾಮಿ ಕೊಲೆ ಪ್ರಕರಣ ಕುಟುಂಬದವರಿಗೆ ಅಲ್ಲದೇ ನಮಗೂ ಸಹ ನೋವು ತಂದಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಸರ್ಕಾರ ಯಾವುದೇ ಮುಲಾಜಿಲ್ಲದೆ, ಯಾರ ಒತ್ತಡಕ್ಕೆ ಮಣಿಯದೆ ತನಿಖೆ ಮಾಡುತ್ತಿದೆ. ಈಗಾಗಲೇ 17 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಕುಟುಂಬದಲ್ಲಿ ಗಂಡನನ್ನು ಕಳೆದುಕೊಂಡ ಅವರ ಪತ್ನಿ ಮದುವೆಯಾಗಿ ಒಂದು ವರ್ಷ ಆಗಿದೆ. ಅವರು ನಮಗೆ ಮನವಿ ಮಾಡಿದ್ದಾರೆ. ಅವರ ಮನವಿಗೆ ನ್ಯಾಯ ಒದಗಿಸಬೇಕು. ಜೀವನ ಸಾಗಿಸಲು ಸರ್ಕಾರಿ ನೌಕರಿ ಕೊಡಬೇಕು ಎಂಬುದು ಅವರ ಆಗ್ರಹವಾಗಿದೆ.
ಇದರ ಬಗ್ಗೆ ಸಿಎಂ ಬಳಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಇದರಲ್ಲಿ ಯಾವುದು ರಾಜಕೀಯ ಮಾಡಬಾರದು. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಅದನ್ನು ಮಾಧ್ಯಮಗಳ ಮೂಲಕ ಕೇಳಿದ್ದೇನೆ. ಇದರಲ್ಲಿ ರಾಜಕೀಯ ಸಲ್ಲದು. ಎಲ್ಲದಕ್ಕೂ ರಾಜಕೀಯ ಬೆರೆಸುವುದು ಸರಿಯಲ್ಲ ಎಂದರು. ಕಾನೂನು ಇದೆ. ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎನ್ನುವ ಕುಟುಂಬಸ್ಥರ ಮನವಿ ಬಗ್ಗೆ ಮಾತನಾಡಿದ ಗೃಹ ಸಚಿವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಅಗತ್ಯವಿಲ್ಲ. ಈಗಾಗಲೇ ಘಟನೆಯಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಬಹುಬೇಗನೆ ಕ್ರಮ ಕೈಗೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ. ನಮ್ಮ ಪೊಲೀಸರು ಉತ್ತಮವಾಗಿ, ಯಾವುದೇ ಒತ್ತಡಕ್ಕೆ ಮಣಿಯದೆ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ರೇಣುಕಾಸ್ವಾಮಿ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ನೀಡಿದ ಸಚಿವ ಡಿ. ಸುಧಾಕರ್
ಚಿತ್ರದುರ್ಗ ನಗರದಲ್ಲಿರುವ ಮೃತ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಸಾಂತ್ವನ ಹೇಳಿ, ಎರಡು ಲಕ್ಷ ರೂಪಾಯಿ ಹಣದ ಚೆಕ್ಅನ್ನು ವೈಯಕ್ತಿಕವಾಗಿ ಧನಸಹಾಯ ವಿತರಣೆ ಮಾಡಿದರು.
ಈ ಕುರಿತು ಮಾತನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಸರ್ಕಾರದ ಪರವಾಗಿ ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿ ಧೈರ್ಯ ಹೇಳಿದ್ದಾರೆ. ಅಲ್ಲದೇ ಎರಡು ಲಕ್ಷ ರೂಪಾಯಿ ಹಣದ ಚೆಕ್ಅನ್ನು ವೈಯಕ್ತಿಕವಾಗಿ ನೀಡಿದ್ದಾರೆ.
ಇನ್ನು ಮೃತ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ಕೊಡುಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರ ಸಹಾನುಭೂತಿ ರೀತಿಯಲ್ಲಿ ತೀರ್ಮಾನ ಮಾಡಲಾಗುತ್ತದೆ. ಮೃತ ರೇಣುಕಾ ಸ್ವಾಮಿ ಕುಟುಂಬದ ಜೊತೆ ಸರ್ಕಾರ ಇರುತ್ತದೆ. ಮುಖ್ಯಮಂತ್ರಿ ಪರವಾಗಿ ನಾನು ಮೃತರ ಮನೆಗೆ ಭೇಟಿ ನೀಡಿದ್ದೇನೆ. ಸಮಯ ಬಂದಾಗ ಮುಖ್ಯಮಂತ್ರಿಗಳು ಸಹ ಅಮೃತ ರೇಣುಕಾ ಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
-
Chandan Shetty: ವಯಸ್ಸಾದ್ಮೇಲೆ ಒಂಟಿತನ ಕಾಡುತ್ತೆ, ಆಗ ಕೊರಗುವ ಬದಲು ಈಗಲೇ ಒಳ್ಳೆಯ ಸಂಗಾತಿ ಹುಡುಕುವೆ: ಚಂದನ್ ಶೆಟ್ಟಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications