ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒನ್ ಇಂಡಿಯಾ ವರದಿ ಇಂಪ್ಯಾಕ್ಟ್; ಹಿರಿಯೂರಿನಲ್ಲಿ ರಿಪೇರಿಯಾಯ್ತು ಕುಡಿಯುವ ನೀರಿನ ಘಟಕ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಫೆಬ್ರವರಿ 22: ಹಿರಿಯೂರಿನ ಗ್ರಾಮವೊಂದರಲ್ಲಿ ಕುಡಿಯುವ ನೀರಿನ ಘಟಕಗಳು ಪ್ರಯೋಜನಕ್ಕೆ ಬಾರದೇ ಕುಡುಕರ ತಾಣವಾಗಿರುವ ಕುರಿತು ಪ್ರಕಟವಾಗಿದ್ದ ವರದಿಯಿಂದ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕೊನೆಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಪೇರಿ ಮಾಡಿದ್ದಾರೆ.

ಫೆಬ್ರವರಿ 20ರಂದು "ಒನ್ಇಂಡಿಯಾ ಕನ್ನಡ"ದಲ್ಲಿ "ಕುಡುಕರ ತಾಣವಾದ ಶುದ್ಧ ಕುಡಿಯುವ ನೀರಿನ ಘಟಕ" ಎಂಬ ಶೀರ್ಷಿಕೆಯಲ್ಲಿ ವರದಿಯನ್ನು ಪ್ರಕಟಿಸಲಾಗಿತ್ತು.

ಚಿತ್ರದುರ್ಗದಲ್ಲಿ ಕುಡುಕರ ತಾಣವಾದ ಶುದ್ಧ ಕುಡಿಯುವ ನೀರಿನ ಘಟಕಚಿತ್ರದುರ್ಗದಲ್ಲಿ ಕುಡುಕರ ತಾಣವಾದ ಶುದ್ಧ ಕುಡಿಯುವ ನೀರಿನ ಘಟಕ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ದೊಡ್ಡಗಟ್ಟ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಕಾರ್ಯನಿರ್ವಹಿಸದೆ ಕುಡುಕರ ತಾಣವಾಗಿತ್ತು. ಘಟಕದಲ್ಲಿ ಸಾರಾಯಿ ಪಾಕೆಟ್ ಗಳು ಬಿದ್ದಿರುವುದು ಕಂಡುಬಂದಿತ್ತು. ಈ ಕುರಿತು ವರದಿಯನ್ನು ಪ್ರಕಟಿಸಲಾಗಿತ್ತು.

Report Impact Authorities Repaired Drinking Water Unit at Hiriyur

ವರದಿಯಿಂದ ತಕ್ಷಣ ಎಚ್ಚೆತ್ತುಕೊಂಡ ಅಧಿಕಾರಿಗಳು ಒಂದೇ ದಿನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಪೇರಿ ಮಾಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅಮ್ಮನಹಟ್ಟಿ ಪಾರ್ಥ ಮೀಸೆ ಎಂಬ ಯುವಕ, "ಅಧಿಕಾರಿಗಳು ತಕ್ಷಣ ಎಚ್ಚೆತ್ತು ಕೆಟ್ಟು ನಿಂತಿದ್ದ ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಪೇರಿ ಮಾಡಿ, ನೀರಿನ ವ್ಯವಸ್ಥೆ ಮಾಡಿದ್ದಾರೆ. ತಾಲೂಕಿನಲ್ಲಿ ಇನ್ನೂ ಕೆಲವು ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಎಲ್ಲಾ ಘಟಕಗಳೂ ಕಾರ್ಯ ನಿರ್ವಹಿಸುವಂತಾಗಬೇಕು. ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು" ಎಂದಿದ್ದಾರೆ.

Report Impact Authorities Repaired Drinking Water Unit at Hiriyur

ದೊಡ್ಡಗಟ್ಟ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕವನ್ನು ರಿಪೇರಿ ಮಾಡಿದಂತೆ ಬಬ್ಬೂರು ಭೋವಿ ಕಾಲೋನಿ, ಬಬ್ಬೂರು ಫಾರಂ, ಹೂವಿನಹೊಳೆ ಜನತಾ ಕಾಲೋನಿ, ಮತ್ತಿತರ ಕಡೆಗಳಲ್ಲಿ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ತಕ್ಷಣ ರಿಪೇರಿ ಮಾಡಬೇಕಿದೆ.

English summary
Authorities have repaired a clean drinking water unit after a report published in one india kannada regarding drinking water unit in a village in Hiriyur was found to be a drunkers spot without benefits,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X