ಶ್ರೀರಂಗಪಟ್ಟಣದಲ್ಲಿ ಮದಕರಿ ನಾಯಕ ಸ್ಮಾರಕ ನಿರ್ಮಾಣಕ್ಕೆ ಕಾಳಿಸ್ವಾಮಿ ಆಗ್ರಹ
ಚಿತ್ರದುರ್ಗ, ಜೂನ್ 9 : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮದಕರಿ ನಾಯಕ ಸ್ಮಾರಕ ನಿರ್ಮಾಣ ಮಾಡುವಂತೆ ರಿಷಿಕುಮಾರ ಸ್ವಾಮೀಜಿ ಆಗ್ರಹಿಸಿದ್ದಾರೆ.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೈದರಾಲಿಯು ಮದಕರಿ ನಾಯಕನಿಗೆ ವಿಷವಿಟ್ಟು ಮೋಸದಿಂದ ಹತ್ಯೆ ಮಾಡಿದ್ದಾನೆ. ಶ್ರೀರಂಗಪಟ್ಟಣ ಮಸೀದಿ ಅಲ್ಲ, ಅದು ಆಂಜನೇಯ ದೇಗುಲವಾಗಿತ್ತು. ಈಗಿರುವ ಮಸೀದಿಯಲ್ಲಿರುವ ಮದರಸಾ ಖಾಲಿ ಮಾಡಿಸಬೇಕು. ಇಲ್ಲವಾದರೆ ಬೆಂಗಳೂರಿನಿಂದ ಶ್ರೀರಂಗಪಟ್ಟಣವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ರಿಷಿಕುಮಾರ ಸ್ವಾಮಿ ತಿಳಿಸಿದರು.
ಮೊನ್ನೆ ನೆಡೆದ ಶ್ರೀರಂಗಪಟ್ಟಣ ಪಾದಯಾತ್ರೆಯಲ್ಲಿ ನಮ್ಮ ಹುಡುಗರು ಏನು ಮಾಡಿದ್ದರು ಅಂತ ತಡೆದಿದ್ದೀರಾ ? ಇದು ಆಗಲ್ಲ. ಎಲ್ಲೂ ಹಿಂದೂಪರ ಸ್ವಾಮಿಜಿಗಳು ಸಹಿತವಾಗಿ ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬರುತ್ತೇವೆ. ಬೆಂಗಳೂರಿನ ಅಣ್ಣಮ್ಮ ದೇವಾಲಯದಿಂದ ಶ್ರೀರಂಗಪಟ್ಟಣ ರಂಗನಾಥ ಸ್ವಾಮಿ ದೇಗುಲಕ್ಕೆ ಪಾದಯಾತ್ರೆ ನಡೆಸಲಾಗುತ್ತದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಹಿಂದೂ ಹನುಮ ಮಾಲಾದಾರಿಗಳೊಂದಿಗೆ ಶ್ರೀರಂಗಪಟ್ಟಣ ಪ್ರವೇಶಿಸಲಾಗುವುದು ಎಂದು ತಿಳಿಸಿದರು.

ಕೆಪಿಸಿಸಿ ಮುಂದೆ ನೇತಾಡಿದ ಚಡ್ಡಿಗಳು :
RSS ಕಾರ್ಯಕರ್ತರು ಸೀಳುನಾಯಿಗಳಂತೆ ಬರುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯಿಸಿದ ಸ್ವಾಮೀಜಿ " ಒಂದು ಚಡ್ಡಿ ಸುಟ್ಟಿದ್ದಕ್ಕೆ ಕೆಪಿಸಿಸಿ ಕಚೇರಿ ತುಂಬ ಚಡ್ಡಿ ನೇತಾಡುತ್ತಿವೆ. ಚಡ್ಡಿ ಭಯಕ್ಕೆ ಯಾರು ಸುದ್ದಿಗೂ ಹೋಗಲ್ಲ ಎನ್ನುತ್ತಿರೋದು. ಸೀಳನಾಯಿ ಬಂದಂಗೆ ಬರ್ತವೆ ಅನ್ನೋದು ನಿಮ್ಮ ಭಾಷೆ . ನಿಜ, ಆರ್ ಎಸ್ ಎಸ್ ನವರು ಶತೃಗಳಿಗೆ ಸೀಳು ನಾಯಿಗಳೇ, ಆದರೆ ನೀನು ಯಾಕೆ ಶತೃತ್ವ ಕಟ್ಟಿಕೊಳ್ಳೋಕೆ ಹೋಗ್ತೀದಿಯಾ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.
ಚಡ್ಡಿ ಸುಡ್ತೀನಿ ಅಂದಿದ್ದಕ್ಕೆ ನೀನು ತರೋದು ಬೇಡ ಅಂತ ಚಡ್ಡಿ ಕಳಿಹಿಸುತ್ತಿರೋದು. ನಮ್ಮವರು ಮನೆ ಮನೆಗೆ ಹೋಗಿ ಚಡ್ಡಿ ಸಂಗ್ರಹ ಮಾಡಿ ಕೆಪಿಸಿಸಿ ಕಚೇರಿಗೆ ಕಳುಹಿಸಿದ್ದಾರೆ. ಚಡ್ಡಿ ವಾಸನೆ ತಡೆಯಲು ಆಗದೆ ಸೀಳುನಾಯಿಯಂತೆ ಬರ್ತಾರೆ ಎನ್ನುತ್ತೀರಾ ಎಂದು ಪ್ರಶ್ನೆ ಮಾಡಿದರು. ಈಗಾಗಲೇ ಚಡ್ಡಿ ವಾಸನೆ ಸಿದ್ಧರಾಮಯ್ಯ ಮೂಗಿಗೆ ಹೋಗಿದೆ. ಸಿದ್ಧರಾಮಯ್ಯ ಗಿಲಿಬಿಲಿ ಆಟಗಳನ್ನು ಬಿಟ್ಟು ದೇಶಕ್ಕಾಗಿ , ಧರ್ಮಕ್ಕಾಗಿ, ಜಗತ್ತಿನ ಒಳಿತಾಗಿ ಚಿಂತಿಸಿ ಎಂದು ಸಲಹೆ ನೀಡಿದರು.

ದೇಗುಲಕ್ಕೆ ಭೇಟಿ
ನಗರದ ಕೋಟೆ ರಸ್ತೆಯಲ್ಲಿರುವ ರಾಜ ಉತ್ಸವಾಂಬ ದೇಗುಲಕ್ಕೆ ರಿಷಿಕುಮಾರ ಸ್ವಾಮಿ ಭೇಟಿ ದೇವಿಗೆ ಪೂಜೆ ಸಲ್ಲಿಸಿದರು. ಪಾಳೇಗಾರ ವಂಶಸ್ಥರಾದ ಪರಶುರಾಮ್ ನಾಯಕ್ ಗೆ ಮಾಲೆ ಹಾಕಿ ಆಶೀರ್ವಾದ ಮಾಡಿದರು. ರಾಜ ವೀರಮದಕರಿ ನಾಯಕ ಸ್ಮಾರಕ ಟ್ರಸ್ಟ್ ರಚನೆಗೆ ನಿರ್ಧಾರ ಕೈಗೊಂಡಿದ್ದು, ರಿಷಿಕುಮಾರ್ ಸ್ವಾಮಿ ಗೌರವಧ್ಯಕ್ಷತೆಯಲ್ಲಿ ಶುಕ್ರವಾರ ಟ್ರಸ್ಟ್ ರಚನೆಯಾಗಲಿದೆ ಎಂದು ತಿಳಿದುಬಂದಿದೆ.
(ಒನ್ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications