ದಲಿತರಿಗೆ ಹಿಂದೂಗಳಲ್ಲ ಎನ್ನುವ ಮನಸ್ಥಿತಿ ತುಂಬಲಾಗುತ್ತಿದೆ: ಭಗವತ್
ಚಿತ್ರದುರ್ಗ, ಜುಲೈ 12: "ರಾಷ್ಟ್ರದಲ್ಲಿ ಮತಾಂತರ ಮಾಡುವ ಕಾರ್ಯ ನಡೆಯುತ್ತಿದೆ ಅದನ್ನು ತಡೆಗಟ್ಟುವ ಕೆಲಸ ಮಾಡಬೇಕಾಗಿದೆ" ಎಂದು ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.
ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದಲ್ಲಿ ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಾಧೀಶರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
"ಮಾದಾರ ಚನ್ನಯ್ಯ ಸ್ವಾಮೀಜಿಗಳು ನನಗೆ ಹಲವು ಆಹ್ವಾನ ನೀಡಿದ್ದರು. ಬಂದಿರಲಿಲ್ಲ ಇದೀಗ ಯೋಗ ಈಗ ಕೂಡಿ ಬಂದಿದೆ. ಹಿಂದುಳಿದ, ದಲಿತ ಎಂಬ ಪಿಡುಗುಗಳು ಹುಟ್ಟಬೇಕು ಎಂಬುದು ಇರಲಿಲ್ಲ ಇವರೆಡರಲ್ಲಿ ಸಂಪರ್ಕ ತಪ್ಪಿ ಹೋದ ಪರಿಣಾಮ ದಲಿತ ಹಿಂದುಳಿದ ವರ್ಗಗಳು ಬದಲಾಗಿವೆ" ಎಂದರು.

"ರಾಷ್ಟ್ರದಲ್ಲಿ ಈಡೀ ಸಮಾಜ ಒಂದಾಗಿ ಹೋಗಬೇಕು. ಅದು ಏನಾದರೂ ತಪ್ಪು ದಾರಿಯಲ್ಲಿ ಹೋದರೆ ಅದನ್ನು ತಿದ್ದುವ ಕೆಲಸವನ್ನು ನಾವು ಮಾಡಬೇಕು. ಪರಸ್ಪರ ಪ್ರೀತಿಯಿಂದ ಬಾಳುವುದರ ಮೂಲಕ ನಮ್ಮಲ್ಲಿನ ಅಂತರ ಹೋಗಲಾಡಿಸಬೇಕು. ಸಮಾಜವನ್ನು, ರಾಷ್ಟ್ರವನ್ನು ಕಟ್ಟುವ ಕೆಲಸವನ್ನು ನಾವು ಮಾಡಬೇಕಿದೆ" ಎಂದು ಹೇಳಿದರು.
"ರಾಷ್ಟ್ರ ಕಟ್ಟುವ ದೃಷ್ಟಿಯಿಂದ ಚಿಂತನೆ ನಡೆಸಲು ನಾವು ಇಲ್ಲಿ ಸೇರಿದ್ದೇವೆ. ನಮ್ಮ ನೀತಿ ಎಲ್ಲರಿಗೂ ಅನುಕೂಲವಾಗುವಂತಹ ದೃಷ್ಟಿಯಿಂದ ಕೆಲಸ ಮಾಡಬೇಕು ಬದಲಾಗಿ ನಮಗೆ ಲಾಭದ ಲೆಕ್ಕಾಚಾರವಿಲ್ಲ. ಸಂಘ ಪ್ರಾರಂಭವಾದ ಮೊದಲ ದಿನಗಳಲ್ಲಿ ಪರಿಸ್ಥಿತಿ ಸರಿಯಿರಲಿಲ್ಲ, ಆದರೆ ಈಗ ಕಾಲ ಬದಲಾಗಿದೆ. ಎಲ್ಲಾ ಕಡೆ ಹೋಗಲು ಅನುಮತಿ ಇದೆ. ನಮ್ಮ ಆಚಾರ ವಿಚಾರ ಪೂಜಾ ವಿಧಾನ ಬೇರೆ-ಬೇರೆ ಇರಬಹುದು. ಆದರೆ ನಾವೆಲ್ಲ ಒಂದೇ, ನಾವೆಲ್ಲ ಸೇರಿ ಬಲಿಷ್ಠ ರಾಷ್ಟ್ರವನ್ನು ಕಟ್ಟಬೇಕಾಗಿದೆ. ನಮ್ಮ ರಾಷ್ಟ್ರ ವಿವಿಧತೆಯಿಂದ ಕೂಡಿದ ರಾಷ್ಟ್ರ ಆದರೆ ನಮ್ಮಲ್ಲಿರುವ ಆತ್ಮ ಒಂದೇ ಒಂದೇ ಧರ್ಮ" ಎಂದು ತಿಳಿಸಿದರು.
"ಮತಾಂತರದಿಂದ ಕೇವಲ ಪೂಜಾ ಕಾರ್ಯಕ್ರಮದಿಂದ ದೂರವಾಗಲ್ಲ, ನಮ್ಮಿಂದಲೇ ದೂರವಾಗುತ್ತಾರೆ. ನಮ್ಮ ಜನರಿಗೆ ಉತ್ತಮ ಸಂಸ್ಕಾರ ಬರಬೇಕಾಗಿದೆ. ಆಧುನಿಕ ಶಿಕ್ಷಣ ವ್ಯವಸ್ಥೆ ಶಿಕ್ಷಣ ನೀಡುತ್ತಿದೆ. ಆದರೆ ಸಂಸ್ಕಾರವನ್ನು, ಜೀವನ ಮೌಲ್ಯವನ್ನು ಕಲಿಸಲ್ಲ. ಕೆಲವರು ದಲಿತರಲ್ಲಿ ನಾವು ಹಿಂದುಗಳಲ್ಲ ಎಂದು ಹೇಳುವ ಮನಸ್ಥಿತಿಯನ್ನು ತುಂಬುತ್ತಿದ್ದಾರೆ ಇದನ್ನು ಹೋಗಲಾಡಿಸಬೇಕಾಗಿದೆ" ಎಂದು ಕರೆ ನೀಡಿದರು.
"ಸಾಧನೆ ತಪಸ್ಸಿನಿಂದ ಸಮಾಜವನ್ನು ಕಟ್ಟುವ ಕೆಲಸವನ್ನು ನಾವು ಪಡೆದಿದ್ದೇವೆ. ನಾವೆಲ್ಲ ಒಂದಾಗಿ ಕೆಲಸ ಮಾಡಿದರೆ, ಭಾರತಕ್ಕೆ ಉತ್ತಮ ಭವಿಷ್ಯವಿದೆ. ಆಗಾಗಿ ಸಮಾಜದಲ್ಲಿ ಭಕ್ತಿಭಾವ ಬರಬೇಕು. ಅದು ಬಂದರೆ ಸುಳ್ಳು ಸಮಾಜ ಹೋಗುತ್ತದೆ . ನಾವು ಪರಮಾರ್ಥವನ್ನು ಹೇಳಲು ಬಂದಿಲ್ಲ, ನಿಮ್ಮೊಂದಿಗೆ ಕೆಲಸ ಮಾಡಲು ಬಂದಿದ್ದೇನೆ. ಸಂಘ ಹಾಗೂ ಸಮಾಜದಲ್ಲಿನ ಸಮಸ್ಯೆಗಳನ್ನು ಚರ್ಚಿಸಲು ಇಲ್ಲಿಗೆ ಬಂದಿದ್ದೇನೆ" ಎಂದು ಭಾಗವತ್ ತಿಳಿಸಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications