ಚಿತ್ರದುರ್ಗದ ಡಿ.ಆರ್.ಡಿ.ಒ ಘಟಕದಲ್ಲಿ ರುಸ್ತುಂ-2 ಡ್ರೋನ್ ಯಶಸ್ವಿ ಪ್ರಯೋಗ: ಚೀನಾಗೆ ಸೆಡ್ಡು
ಚಿತ್ರದುರ್ಗ, ಅಕ್ಟೋಬರ್ 11: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಆರ್.ಡಿ.ಒ) ತಯಾರಿಸಿರುವ ರುಸ್ತುಂ-2 ಡ್ರೋನ್ ಪ್ರಯೋಗ ಯಶಸ್ವಿಯಾಗಿದೆ. ಚಿತ್ರದುರ್ಗದ ಡಿ.ಆರ್.ಡಿ.ಓ ಘಟಕದಲ್ಲಿ ಶುಕ್ರವಾರ ಈ ಪ್ರಯೋಗ ನಡೆದಿದೆ.
ಮಧ್ಯಮ ಎತ್ತರದಲ್ಲಿ ಹಾರಾಟ ನಡೆಸುವ ಸಾಮರ್ಥ್ಯದ ಈ ಡ್ರೋನ್, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಬಳಿ ಇರುವ ಡಿ.ಆರ್.ಡಿ.ಒ ಸಂಸ್ಥೆ ವೈಮಾನಿಕ ಪರೀಕ್ಷಾ ಕೇಂದ್ರದಲ್ಲಿ 16,000 ಅಡಿ ಎತ್ತರದಲ್ಲಿ ಎಂಟು ಗಂಟೆಗಳ ಕಾಲ ಹಾರಾಟ ನಡೆಸುವ ಮೂಲಕ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ.
ಒಂದು ಗಂಟೆ ಕಾಲ ಹಾರಾಟ ನಡೆಸುವಷ್ಟು ಇಂಧನ ಅದರಲ್ಲಿ ಉಳಿದಿತ್ತು ಎಂದು ತಿಳಿದು ಬಂದಿದೆ. ಚೀನಾ ದೇಶಕ್ಕೆ ಪ್ರಬಲ ಪೈಪೋಟಿ ಮೂಲಕ ಎದಿರೇಟು ನೀಡಲು ಇದನ್ನು ಅಭಿವೃದ್ಧಿ ಪಡಿಸಲಾಗಿದೆ.

ಈ ವರ್ಷದ ಕೊನೆಯಲ್ಲಿ ಡ್ರೋನ್ 26,000 ಅಡಿ ಎತ್ತರದಲ್ಲಿ 18 ಗಂಟೆ ಕಾಲ ಹಾರಾಟ ನಡೆಸುವ ಸಾಮರ್ಥ್ಯವನ್ನು ಹೊಂದಿದೆ. ಕಾರ್ಯಾಚರಣೆಯನ್ನು ಆಧರಿಸಿ ವಿವಿಧ ಪ್ರಮಾಣದ ತೂಕದ ಸಾಧನ-ಸಲಕರಣೆಗಳನ್ನು ಒಯ್ಯುವ ಶಕ್ತಿ ರುಸ್ತಂಗಿದೆ.
Recommended Video
ಡಿ.ಆರ್.ಡಿ.ಒ ತಯಾರಿಸಿರುವ ರುದ್ರಂ ಹೆಸರಿನ ವಿಕಿರಣ ಪ್ರತಿಬಂಧಕ ಕ್ಷಿಪಣಿಯ ಪರೀಕ್ಷೆಯನ್ನು ಶುಕ್ರವಾರ ನಡೆಸಲಾಗಿತ್ತು. ರುಸ್ತುಂ ಕೂಡ ಶುಕ್ರವಾರ ಪರೀಕ್ಷೆಗೆ ಒಳಪಟ್ಟಿತ್ತು. ಒಂದೇ ದಿನ ಎರಡು ರಕ್ಷಣಾ ಮಹತ್ವದ ಪರಿಕ್ಷಾರ್ಥ ಪ್ರಯೋಗ ನಡೆದಂತಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications