ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪರ್ಕ್ ಫಾರ್ ಸಮರ್ಥನ್ : ಮುರುಘಾ ಶ್ರೀ ಭೇಟಿಯಾದ ಶ್ರೀನಿವಾಸ ಪೂಜಾರಿ

By Gururaj
|
Google Oneindia Kannada News

ಚಿತ್ರದುರ್ಗ, ಜುಲೈ 30 : 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಂಪರ್ಕ್ ಫಾರ್ ಸಮರ್ಥನ್ ಎಂಬ ಅಭಿಯಾನವನ್ನು ಆರಂಭಿಸಿದೆ. ಕರ್ನಾಟಕದ ಹಲವು ಗಣ್ಯರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಅಭಿಯಾನದ ಬುಕ್‌ ಲೆಟ್ ನೀಡುತ್ತಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ಸೋಮವಾರ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಭೇಟಿ ಮಾಡಿದರು.

ಸಂಪರ್ಕ್ ಫಾರ್ ಸಮರ್ಥನ್ : ಕೇಂದ್ರ ಯೋಜನೆ ಶ್ಲಾಘಿಸಿದ ಸುಧಾಮೂರ್ತಿಸಂಪರ್ಕ್ ಫಾರ್ ಸಮರ್ಥನ್ : ಕೇಂದ್ರ ಯೋಜನೆ ಶ್ಲಾಘಿಸಿದ ಸುಧಾಮೂರ್ತಿ

Sampark For Samarthan Kota Srinivas Poojary meets Shivamurthy Swamiji

ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಬುಕ್ ಲೆಟ್ ನೀಡಿ, ಅಭಿಯಾನದ ಬಗ್ಗೆ ವಿವರಣೆಯನ್ನು ನೀಡಿದರು. ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪುನೀತ್ ರಾಜ್‌ಕುಮಾರ್‌ರನ್ನು ಭೇಟಿಯಾದ ಕೆ.ಮುರಳೀಧರ್ ರಾವ್ಪುನೀತ್ ರಾಜ್‌ಕುಮಾರ್‌ರನ್ನು ಭೇಟಿಯಾದ ಕೆ.ಮುರಳೀಧರ್ ರಾವ್

ಚಂಪಾ ಭೇಟಿ : ಮತ್ತೊಂದು ಕಡೆ ಬಿಜೆಪಿ ನಾಯಕರು ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ (ಚಂಪಾ) ಅವರನ್ನು ಭೇಟಿ ಮಾಡಿ ಅಭಿಯಾನದ ಬುಕ್ ಲೆಟ್ ನೀಡಿದ್ದಾರೆ.

champa

ಬಿಜೆಪಿ 2019ರ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಸಂಪರ್ಕ್ ಫಾರ್ ಸಮರ್ಥನ್ ಎಂಬ ಅಭಿಯಾನವನ್ನು ಪಕ್ಷ ಹಮ್ಮಿಕೊಂಡಿದೆ. 4000 ಬಿಜೆಪಿ ನಾಯಕರು ಸುಮಾರು 1 ಲಕ್ಷ ಗಣ್ಯರನ್ನು ಭೇಟಿ ಮಾಡಿ, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಕರ್ನಾಟಕದಲ್ಲಿಯೂ ವಿವಿಧ ಗಣ್ಯರನ್ನು ಪಕ್ಷದ ನಾಯಕರು ಭೇಟಿಯಾಗುತ್ತಿದ್ದಾರೆ. ಡಾ.ಸುಧಾಮೂರ್ತಿ, ಡಾ.ಶಿವರಾಜ್ ಕುಮಾರ್, ಪುನೀತ್ ರಾಜ್‌ಕುಮಾರ್, ನಟ, ನಿರ್ದೇಶಕ ಸುದೀಪ್, ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ, ಕಿರಣ್ ಮಜುಂದಾರ್ ಷಾ, ಪ್ರಮೋದಾ ದೇವಿ ಒಡೆಯರ್ ಮುಂತಾದ ಗಣ್ಯರನ್ನು ಭೇಟಿಯಾಗಿ ಅಭಿಯಾನದ ಬಗ್ಗೆ ವಿವರಣೆ ನೀಡಲಾಗಿದೆ.

English summary
Leader of the Opposition in the Karnataka Legislative Council Kota Srinivas Poojary met Shivamurthy Muruga Sharanaru of Murugarajendra mutt, Chitradurga and hand over the booklet of the Sampark For Samarthan campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X