Gold coins: ಮೊಳಕಾಲ್ಮೂರು ತಾಲೂಕಿನ ಈ ಊರಲ್ಲಿ ಬಂಗಾರದ ನಾಣ್ಯಗಳಿಗಾಗಿ ಜನರಿಂದ ತೀವ್ರ ಶೋಧ
ಚಿತ್ರದುರ್ಗ, ಡಿಸೆಂಬರ್, 24: ಬಂಗಾರದ ನಾಣ್ಯಗಳ ಹುಡುಕಾಟಕ್ಕಾಗಿ ಜನರು ತಾ ಮುಂದು ನಾ ಮುಂದು ಎಂದು ಮುಗಿಬಿದ್ದು ತೀವ್ರ ಹುಡುಕಾಟ ನಡೆಸಿರುವ ಘಟನೆ ಮೊಳಕಾಲ್ಮೂರು ತಾಲೂಕಿನಲ್ಲಿ ಘಟನೆ ನಡೆದಿದೆ.
ಮೊಳಕಾಲ್ಮೂರು ತಾಲೂಕಿನ ಕೆಳಗಳಹಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಜನರು ತಂಡೋಪತಂಡವಾಗಿ ನಾಣ್ಯವನ್ನು ಆಯ್ದುಕೊಳ್ಳಲು ಮುಗಿಬಿದ್ದಿದ್ದಾರೆ. ಭಾನುವಾರ ಬೆಳಗ್ಗೆಯಿಂದಲೇ ಜನರು ಈ ನಾಣ್ಯಗಳನ್ನು ಪಡೆಯಲು ತೀವ್ರ ಶೋಧ ನಡೆಸುತ್ತಿದ್ದು, ಬಂಗಾರದ ನಾಣ್ಯಗಳು ಸಿಗುತ್ತವೆ ಎಂಬ ವದಂತಿಯನ್ನು ತಿಳಿಯುತ್ತಿದ್ದಂತೆ ನಾನಾ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಸ್ಥಳಕ್ಕೆ ಆಗಮಿಸಿ, ಜನ ಮರಳೋ ಜಾತ್ರೆ ಮರಳೋ ಎನ್ನುವಂತೆ ಹುಡುಕಾಟ ನಡೆಸಿದರು.

ಸ್ಥಳದಲ್ಲಿ ಈಗಾಗಲೇ ಕೆಲವು ನಾಣ್ಯಗಳು ಸಿಕ್ಕಿದ್ದು, ಈ ನಾಣ್ಯಗಳು ಬಂಗಾರ ಅಥವಾ ತಾಮ್ರದ ನಾಣ್ಯಗಳು ಎಂದು ಇನ್ನು ಕೂಡ ದೃಢಪಟ್ಟಿಲ್ಲ. ನಾಣ್ಯದ ಅಸಲಿಯತ್ತು ತಿಳಿಯದ ಜನರು ನಾ ಮುಂದು ತಾ ಮುಂದು ಎನ್ನುವಂತೆ ಬಂಗಾರದ ನಾಣ್ಯಗಳನ್ನು ಹುಡುಕಲು ಮುಗಿಬಿದ್ದಿದ್ದಾರೆ.
ಮಾರ್ಗ ಮಧ್ಯದಲ್ಲೇ ಹೆಲಿಕಾಪ್ಟರ್ ಲ್ಯಾಂಡ್
ಸಚಿವ ಬೈರತಿ ಸುರೇಶ್ ಪ್ರಮಾಣಿಸುತಿದ್ದ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಮಾರ್ಗ ಮಧ್ಯದಲ್ಲಿ ಲ್ಯಾಂಡ್ ಆದ ಘಟನೆ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ.
ತಾಲೂಕಿನ ಆರನಕಟ್ಟಿ ಗ್ರಾಮದ ಹೈಸ್ಕೂಲ್ ಮೈದಾನದಲ್ಲಿ ಬೆಳಗ್ಗೆ 11:30ರ ಸಮಯಕ್ಕೆ ಹೆಲಿಕ್ಯಾಪ್ಟರ್ ಲ್ಯಾಂಡ್ ಆಗಿದೆ. ಸಚಿವ ಭೈರತಿ ಸುರೇಶ್ ಅವರು ಕಾರ್ಯಕ್ರಮ ನಿಮಿತ್ತ ಬೆಂಗಳೂರಿನಿಂದ ಗದಗ ಜಿಲ್ಲೆಯ ಸಂಕೇಶ್ವರ ಕಡೆಗೆ ಪ್ರಯಾಣಿಸುತ್ತಿದ್ದಾಗ ಹೆಲಿಕ್ಯಾಪ್ಟರ್ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆ ಆರನಕಟ್ಟೆ ಗ್ರಾಮದ ಹೈಸ್ಕೂಲ್ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಅನ್ನು ಲ್ಯಾಂಡ್ ಮಾಡಲಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಯ ಹಾಗೂ ದುರ್ಘಟನೆ ಸಂಭವಿಸಿಲ್ಲ. ಇನ್ನು ಸಚಿವರು ಹೆಲಿಕ್ಯಾಪ್ಟರ್ ಅರ್ಧಕ್ಕೆ ಬಿಟ್ಟು ಕಾರಿನ ಮೂಲಕ ಸಂಕೇಶ್ವರ ಕಡೆಗೆ ತೆರಳಿದ್ದಾರೆ ಎನ್ನಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆಲಿಕ್ಯಾಪ್ಟರ್ ನೋಡಲು ಗ್ರಾಮದ ಸುತ್ತಮುತ್ತಲಿನ ಜನರು ಬಂದು ಹೆಲಿಕಾಪ್ಟರ್ ವೀಕ್ಷಣೆ ಮಾಡಿದರು.
-
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications