ಲಾರಿಗಳ ನಡುವೆ ಸರಣಿ ಅಪಘಾತ: ಓರ್ವ ಸಾವು, 7 ಮಂದಿಗೆ ಗಾಯ
ಚಿತ್ರದುರ್ಗ, ಡಿಸೆಂಬರ್ 11: ಚಲಿಸುತ್ತಿದ್ದ ಮೂರು ಲಾರಿಗಳ ನಡುವೆ ಸರಣಿ ಅಪಘಾತವಾಗಿದ್ದು, ಸ್ಥಳದಲ್ಲೇ ಲಾರಿ ಚಾಲಕ ಸಾವನ್ನಪ್ಪಿದ್ದು, ಏಳು ಜನ ಗಾಯಾಳಾಗಿರುವ ಘಟನೆ ಚಿತ್ರದುರ್ಗ ಸಮೀಪ ನಡೆದಿದೆ.
ಚಿತ್ರದುರ್ಗ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಹರಿಯಾಣ ಕಡೆಗೆ ಸಾಗುತ್ತಿದ್ದ ಲಾರಿ ಹಾಗೂ ಹೊಸಪೇಟೆಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಲಾರಿಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಅಪಘಾತವಾಗಿವೆ.

ಈರುಳ್ಳಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ 7 ಜನರು ಗಾಯಾಳಾಗಿದ್ದು, ಎಲ್ಲರನ್ನೂ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುರವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications