ಮಹಿಳೆಯರು ಸ್ವಾಮಿಗಳ ಬಳಿ ಹೋಗದಂತಹ ಸ್ಥಿತಿ ನಿರ್ಮಾಣವಾಗಿದೆ: ಶಾಮನೂರು ಶಿವಶಂಕರಪ್ಪ
ಚಿತ್ರದುರ್ಗ, ನವೆಂಬರ್, 09: ಮುರುಘಾ ಶ್ರೀಗಳು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸಾಣೇಹಳ್ಳಿಯಲ್ಲಿ ಹೇಳಿದರು.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳ ಬಗ್ಗೆ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿ ಬಹಿರಂಗವಾದ ಬಳಿಕ ಲಿಂಗಾಯತ-ವೀರಶೈವ ಸಮಾಜದ ಮುಖಂಡರು ಪ್ರತಿಕ್ರಿಯಿಸಿದ್ದಾರೆ. ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ನಾಟಕೋತ್ಸವ ಸಮಾರಂಭದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪ ಮಾತನಾಡಿ, "ಹೆಣ್ಣು ಮಕ್ಕಳು ಸ್ವಾಮೀಜಿ ಬಳಿ ಹೋಗದಂತಹ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿ ಬರಬಾರದು. ನಮ್ಮ ಹೆಣ್ಣು ಮಕ್ಕಳು ಕೂಡ ಎಚ್ಚರವಾಗಿ ಇರಬೇಕು. ಪ್ರಕರಣದ ಬಗ್ಗೆ ವೀರಶೈವ ಮಹಾಸಭಾ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ" ಎಂದರು.
ಮುರುಘಾಶ್ರೀ ವಿರುದ್ಧ ತಿರುಗಿಬಿದ್ದ ಶಾಮನೂರು
ಪೋಕ್ಸೊ ಕೇಸ್ನಲ್ಲಿ ಮುರುಘಾಶ್ರೀ ಜೈಲುಪಾಲಾಗಿದ್ದಾರೆ. ಹೀಗಾಗಿ ಈ ಪ್ರಕರಣದ ಬಗ್ಗೆ ವೀರಶೈವ ಮಹಾಸಭಾ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದರು. ಹಾಗೆಯೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅನೇಕರು ಪರೋಕ್ಷವಾಗಿ ಮುರುಘಾಶ್ರೀ ವಿರುದ್ಧ ಆಕ್ರೋಶ ಹೊರಹಾಕಿದರು. ಅಲ್ಲದೇ ಚಾರ್ಜ್ ಶೀಟ್ನಲ್ಲಿನ ಅಂಶಗಳು ಬಯಲಾದ ಬಳಿಕ ಮುಖಂಡರು ಸಿಡಿಮಿಡಿಗೊಂಡರು.

ಮುರುಘಾ ಶ್ರೀಗಳಿಂದ ಕ್ಷಮಿಸಲಾರದ ಅಪರಾಧ
ಇನ್ನು ಈ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಯಡಿಯೂರಪ್ಪ, ಮುರುಘಾ ಶರಣರು ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಅವರಿಗೆ ಕಾನೂನು ಪ್ರಕಾರ ತಕ್ಕ ಶಿಕ್ಷೆ ಆಗಬೇಕು ಎಂದು ಹೇಳಿದ್ದರು. ಉಡುಪಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಈ ಕುರಿತು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮುರುಘಾ ಶರಣರಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣದ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು "ಮುರುಘಾ ಶ್ರೀ ಕ್ಷಮಿಸಲಾರದ ಅಕ್ಷಮ್ಯ ಅಪರಾಧವನ್ನು ಮಾಡಿದ್ದಾರೆ. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಅವರ ಕೃತ್ಯವನ್ನು ಖಂಡಿಸಬೇಕು. ಅವರಿಗೆ ತಕ್ಕ ಶಿಕ್ಷೆ ಆಗಬೇಕು" ಎಂದು ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ಯಪಡಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications