ಚಿತ್ರದುರ್ಗದ ಕೋಟೆ, ಸ್ಮಾರಕಗಳನ್ನು ರಕ್ಷಿಸಲು ಮುರುಘಾ ಶ್ರೀಗಳ ಕರೆ
ಚಿತ್ರದುರ್ಗ, ಜೂನ್ 19: ಕೋಟೆ ನಾಡು ಚಿತ್ರದುರ್ಗದ ಇತಿಹಾಸ ಉಳಿಸಿ-ಸ್ಮಾರಕಗಳನ್ನು ರಕ್ಷಿಸಿ. ಅಂದಿನ ಕೋಟೆಯನ್ನು ಇಂದು ಕಟ್ಟಲು ಸಾಧ್ಯವಿಲ್ಲ, ಕಟ್ಟಿರುವ ಕೋಟೆಯನ್ನು ನಾವು ನಮ್ಮ ಮುಂದಿನ ಪೀಳಿಗೆಗೆ ರಕ್ಷಿಸಿಕೊಂಡು ಹೋಗೋಣ ಎಂದು ಚಿತ್ರದುರ್ಗದ ಮುರುಘಾ ಶ್ರೀಗಳು ಹೇಳಿದರು.
ಇಂದು ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ, ಚಿತ್ರದುರ್ಗದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 'ನಮ್ಮ ನಡಿಗೆ ಕೋಟೆ ಸಂರಕ್ಷಣೆ ಕಡೆಗೆ' ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೋಟೆ ಮುಂಬಾಗಿಲಿನಿಂದ ಜಾಥಾ ಹೊರಟಿತು. ಮುರುಘಾ ಶರಣರು ಬಿಚ್ಚುಗತ್ತಿ ಭರಮಣ್ಣ ನಾಯಕರ ಸಮಾಧಿಗೆ ಹಾರಹಾಕಿ, ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಸುಮಾರು 400 ವರ್ಷಗಳ ಇತಿಹಾಸ ಹೊಂದಿರುವ ಚಿತ್ರದುರ್ಗದ ಈ ಕೋಟೆ ಅತ್ಯಂತ ಪ್ರಸಿದ್ಧವಾದುದು. ಇದನ್ನು ಹೊರತುಪಡಿಸಿ ಮತ್ತೆಲ್ಲಿಯೂ ಈ 7 ಸುತ್ತಿನ ಕೋಟೆಯ ಬಗೆಯನ್ನು ಕಾಣಲು ಸಾಧ್ಯವಿಲ್ಲ. ಇದು ಅಪರೂಪದ ಸುಂದರ ಐತಿಹಾಸಿಕ ತಾಣ. ಈ ಕೋಟೆ ಆವರಣದಲ್ಲಿ ಪ್ರಾಚೀನವಾದ ಸ್ಮಾರಕಗಳು, ದೇವಾಲಯಗಳು, ಜಗತ್ತಿನ ಗಮನ ಸೆಳೆಯುವ ಬುರುಜುಗಳು, ಬತೇರಿಗಳು, ಇಗರ್ಜಿಗಳು ಇವೆ. ಇದೊಂದು ಪ್ರವಾಸಿ ತಾಣ. ಕೂಡಲೇ ಶಿಥಿಲಗೊಂಡಿರುವ ಗೋಡೆಗಳನ್ನು, ಸ್ಮಾರಕಗಳನ್ನು ರಕ್ಷಿಸಲು ಸೂಕ್ತ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆ ಮಾಡಬೇಕು. ಇದನ್ನು ವಿಶ್ವಪರಂಪರೆಯ ಪಟ್ಟಿಗೆ ಸೇರಿಸಲು ಹಕ್ಕೊತ್ತಾಯ ಮಾಡುತ್ತೇವೆ ಎಂದರು.

ಮೊದಲು ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ವಿದ್ಯುತ್ ವ್ಯವಸ್ಥೆ ಮಾಡಬೇಕು. ರಸ್ತೆ ಅಗಲೀಕರಣ, ಗೋಡೆಗಳ ಕುಸಿತ ತಡೆಯುವಿಕೆ ಮತ್ತು ಕುಸಿದ ಗೋಡೆಗಳ ದುರಸ್ತೀಕರಣ ಆಗಬೇಕು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇದರೆಡೆ ಗಮನ ಹರಿಸಬೇಕು. ಈ ಹಿನ್ನೆಲೆಯಲ್ಲಿ ನಾವು 'ನಮ್ಮ ನಡಿಗೆ- ಕೋಟೆ ಸಂರಕ್ಷಣೆ ಕಡೆಗೆ' ಎಂಬ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ಸ್ವದೇಶಿ ದರ್ಶನ ಯೋಜನೆಯಲ್ಲಿ ಆಗಿರುವ ಬೆಳವಣಿಗೆಯ ಮಾಹಿತಿ ಪಡೆದು ಮುಂದಿನ ಪ್ರಗತಿಯ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಶರಣರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಕಾರ್ಯಕ್ರಮದಲ್ಲಿ ಹಲವು ಮುಖಂಡರು ಭಾಗವಹಿಸಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications