ಚಿತ್ರದುರ್ಗದಲ್ಲಿ ಸರಳವಾಗಿ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆ
ಚಿತ್ರದುರ್ಗ, ಸೆಪ್ಟೆಂಬರ್ 13: ಕೋಟೆನಾಡು ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮ ಅತ್ಯಂತ ಸರಳವಾಗಿ, ಯಶಸ್ವಿಯಾಗಿ ನಡೆದಿದೆ.
ಪ್ರತಿ ವರ್ಷ ಬೆಳಿಗ್ಗೆ 11 ಕ್ಕೆ ಆರಂಭವಾಗಬೇಕಿದ್ದ ಶೋಭಾಯಾತ್ರೆ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಶೋಭಾಯಾತ್ರೆ ಪ್ರಾರಂಭವಾಯಿತು. ಈ ಶೋಭಾಯಾತ್ರೆಗೆ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಗರದ ಓಬವ್ವ ಮೈದಾನ ರಸ್ತೆಯ ಎಂ.ಎಂ ಪ್ರೌಢಶಾಲೆ ಆವರಣದ ವೇದಿಕೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ವೇದಿಕೆಯಿಂದ ಆರಂಭವಾದ ಶೋಭಾಯಾತ್ರೆ ನಗರದ ಮುಖ್ಯ ರಸ್ತೆಯಾದ ಬಿಡಿ ರಸ್ತೆ, ಆಸ್ಪತ್ರೆ ಮುಂಭಾಗ, ಮದಕರಿ ಸರ್ಕಲ್, ಅಂಬೇಡ್ಕರ್ ಸರ್ಕಲ್, ಎಸ್.ಜೆ.ಎಂ ಸರ್ಕಲ್, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತದ ಮೂಲಕ ಕನಕ ಸರ್ಕಲ್ ನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು.

ಪ್ರತಿ ವರ್ಷ ಡಿಜೆ ಸೌಂಡ್, ಕರಡಿ ವಾದ್ಯ, ವೀರಗಾಸೆ, ಕೋಲಾಟ, ನೃತ್ಯ ಹೊಲಗ, ತಮಟೆ ವಾದ್ಯ ಮತ್ತಿತರ ವಾದ್ಯಗಳು ತುಂಬಿ ತುಳುಕುತ್ತಿದ್ದವು. ಆದರೆ ಈ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ನಾದಸ್ವರ ಅಳವಡಿಸಲಾಗಿತ್ತು.
ವಿವಿಧ ವಾದ್ಯ ವೃಂದ ಮತ್ತು ಡಿಜೆ ಸೌಂಡ್ ಗೆ ಕುಣಿದು ಕುಪ್ಪಳಿಸಿ ಬೇಕಾಗಿದ್ದ ಹುಡುಗ, ಹುಡುಗರಿಗೆ ಭಾರಿ ನಿರಾಸೆ ಉಂಟಾಗಿತ್ತು. ಲಕ್ಷ ಲಕ್ಷ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕಿದ್ದ ಕಾರ್ಯಕ್ರಮದ ಅತಿ ಕಡಿಮೆ ಜನಸಂಖ್ಯೆ ಭಾಗವಹಿಸಿದ್ದರು. ಜೊತೆಗೆ ಈ ವರ್ಷ ಅತ್ಯಂತ ಸರಳವಾಗಿ ಶೋಭಾಯಾತ್ರೆ ನಡೆಸುವುದಾಗಿ ಆಯೋಜಕರು ತಿಳಿಸಿದ್ದರು.

ಈ ಸಲ ಪ್ರಮುಖ ರಸ್ತೆಯ ವಿವಿಧ ಸರ್ಕಲ್ ಗಳಲ್ಲಿ ಇರುವ ಪ್ರತಿಮೆಗಳಿಗೆ ಮಾತ್ರ ಕೇಸರಿ ಬಾವುಟ ಮತ್ತು ಹೂವುಗಳಿಂದ ಅಲಂಕರಿಸಲಾಗಿತ್ತು. ರಾತ್ರಿ ಸುಮಾರು 8 ಗಂಟೆಯ ನಂತರ ಚಂದ್ರವಳ್ಳಿ ಕೆರೆಯಲ್ಲಿ ಗಣೇಶನ ವಿಸರ್ಜನೆ ಮಾಡಲಾಯಿತು. ಶೋಭಾಯಾತ್ರೆಗೆ ಸೇರಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ನಗರದ ಎಲ್ಲಡೆ ಬ್ಯಾರಿಕೇಡ್ ನಿರ್ಮಿಸಿ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸರು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಒಟ್ಟಾರೆ ಕೋಟೆನಾಡು ಚಿತ್ರದುರ್ಗದಲ್ಲಿ ಅದ್ಧೂರಿಯಾಗಿ ನಡೆಯಬೇಕಿದ್ದ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ, ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಶೋಭಾಯಾತ್ರೆ ಜರುಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಶಾಸಕರುಗಳು, ಜನಪ್ರತಿನಿಧಿಗಳು, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಸೇರಿದಂತೆ ಭಕ್ತಾಧಿಗಳು ಭಾಗವಹಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications