"ಸಿರಿಗೆರೆ ತರಳಬಾಳು ಮಠದ ₹2,000 ಕೋಟಿ ಮೌಲ್ಯದ ಆಸ್ತಿ ಗುಳುಂ"
ಚಿತ್ರದುರ್ಗ, ಸೆಪ್ಟೆಂಬರ್, 1: ಸಿರಿಗೆರೆಯ ತರಳಬಾಳು ಮಠ ಇಡೀ ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿರುವ ಮಠಗಳಲ್ಲಿ ಒಂದಾಗಿದೆ. ಇಂತಹ ಮಠದಲ್ಲಿ ಪೀಠಾಧಿಪತಿ ಮಠಕ್ಕೆ ಸೇರಿದ ಆಸ್ತಿಯನ್ನು ಕಬಳಿಸಿದ್ದಾರೆ ಎನ್ನುವ ಗಂಭೀರ ಆರೋಪ ಬಂದಿದೆ. ಹಾಗಾದರೆ ಈ ಆರೋಪವನ್ನು ಮಾಡಿದ್ಯಾರು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
"ಏಕವ್ಯಕ್ತಿ ಟ್ರಸ್ಟ್ ನಿರ್ಮಾಣ ಮಾಡಿಕೊಂಡು ತರಳಬಾಳು ಮಠಕ್ಕೆ ಸೇರಿದ ಅಂದಾಜು 2,000 ಕೋಟಿ ಮೌಲ್ಯದ ಆಸ್ತಿಯನ್ನು ಪೀಠಾಧಿಪತಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಮಠವನ್ನು ಖಾಸಗಿ ಸ್ವತ್ತಾಗಿ ಪರಿವರ್ತಿಸಿಕೊಂಡಿದ್ದಾರೆ," ಎಂದು ಸಾದರ ಲಿಂಗಾಯತ ಸಮುದಾಯದ ಮುಖಂಡರು ಆರೋಪ ಮಾಡಿದರು ಅಂತಾ ಪ್ರಜಾವಾಣಿ ವರದಿ ಮಾಡಿದೆ.

ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಭಕ್ತರ ವತಿಯಿಯಿಂದ ಸಭೆ ನಡೆಸಿದ್ದು, ಈ ವೇಳೆ ಸಿರಿಗೆರೆಯ ತರಳಬಾಳು ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಬೇಕೆಂಬ ಹೋರಾಟವನ್ನು ಮುಂದುವರೆಸಲು ತೀರ್ಮಾನ ಮಾಡಿದ್ದಾರೆ. ಭಕ್ತರಲ್ಲಿ ಜಾಗೃತಿ ಮೂಡಿಸಲು ತಾಲ್ಲೂಕು & ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ಆಯೋಜನೆ ಮಾಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.
1977ರಲ್ಲಿ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ರೂಪಿಸಿದ್ದ ಬೈಲಾ ರದ್ದುಪಡಿಸಿ 1990ರಲ್ಲಿ ಏಕವ್ಯಕ್ತಿ ಟ್ರಸ್ಟ್ ಡೀಡ್ ಮಾಡಿಕೊಳ್ಳಲಾಗಿದೆ. ಹಳೆಯ ಮಠವನ್ನು ಗುಳುಂ ಮಾಡಿ ಹೊಸ ನಾಮಕರಣ ಮಾಡಲಾಗಿದೆ. ಜಮೀನು, ಶಿಕ್ಷಣ ಸಂಸ್ಥೆ ಸೇರಿ ಮಠದ ಸಂಪೂರ್ಣ ಆಸ್ತಿ ಏಕವ್ಯಕ್ತಿ ಟ್ರಸ್ಟ್ಗೆ ವರ್ಗಾವಣೆಗೊಂಡಿದೆ ಎಂದು ಆರೋಪ ಮಾಡಿದ್ದಾರೆ.
ಈ ಟ್ರಸ್ಟ್ನಲ್ಲಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಪರಮಾಧಿಕಾರ ಹೊಂದಿದ್ದು, ಎಲ್ಲವೂ ಅವರ ಸ್ವತ್ತಾಗಿ ಬದಲಾವಣೆ ಆಗಿದೆ. 2,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ ನೀವು ಬಂಡವಾಳಶಾಹಿ ಅಲ್ಲವೆ? ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಮಾಡಿದರು.
ಮಠ ಹಾಗೂ ಪೀಠಾಧಿಪತಿಯನ್ನು ಭಕ್ತರು ವಿರೋಧ ಮಾಡುತ್ತಿಲ್ಲ. ಬದಲಾಗಿ ಮಠದಲ್ಲಿರುವ ಭಕ್ತರ ಆಸ್ತಿ ಉಳಿಯಬೇಕೆಂಬುದಷ್ಟೇ ನಮ್ಮ ಉದ್ದೇಶ. ಭಕ್ತರ ಮನಸಿನಲ್ಲಿ ವಿಷಬೀಜ ಬಿತ್ತಿ ಸಮಾಜವನ್ನು ಇಬ್ಭಾಗ ಮಾಡಬೇಡಿ. ಸುತ್ತೂರು ಮಠ, ಮಾದಾರ ಚನ್ನಯ್ಯ ಗುರುಪೀಠದಂತೆ ತರಳಬಾಳು ಮಠಕ್ಕೂ ಉತ್ತಾರಾಧಿಕಾರಿ ನೇಮಕ ಆಗಬೇಕು ಎಂದು ಹೇಳಿದರು.
ಉದ್ಯಮಿ ಅಣಬೇರು ರಾಜಣ್ಣ, ಅನ್ನ, ಅಕ್ಷರ ದಾಸೋಹದಲ್ಲಿ ವೀರಶೈವ ಲಿಂಗಾಯತ ಮಠಗಳು ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಸಮಾಜ ತಿದ್ದುವ, ಭಕ್ತರನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಮಠಾಧೀಶರಿಗೆ ಆಸ್ತಿ, ಹಣದ ವ್ಯಾಮೋಹ ಏಕೆ? ಭಕ್ತರು ಮಠಕ್ಕೆ ನೀಡಿದ ಕಾಣಿಕೆಯನ್ನ ಸ್ವಂತ ಆಸ್ತಿಯಾಗಿ ಪರಿವರ್ತನೆ ಮಾಡಿಕೊಳ್ಳುವುದು ತಪ್ಪಲ್ಲವೇ? ಎಂದು ಪ್ರಶ್ನಿಸಿದರು.
ಭಕ್ತರು ಹೇಳೋದೇನು?: 1990ರಲ್ಲಿ ರಚನೆಯಾದ ಏಕವ್ಯಕ್ತಿ ಟ್ರಸ್ಟ್ಡೀಡ್ ರದ್ದುಪಡಿಸಬೇಕು. 1977ರ ಬೈಲಾ ಪ್ರಕಾರ ತರಳಬಾಳು ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಬೇಕು. ಹಾಳಾಗಿರುವ ಶಾಲೆ-ಕಾಲೆಜುಗಳನ್ನು ಸರಿಪಡಿಸಿ ಅಕ್ಷರ ದಾಸೋಹ ಮುಂದುವರೆಸಬೇಕು. ಹಾಗೆಯೇ ಮಠದ ಭಕ್ತರ ಮೇಲೆ ಹಾಕಿರುವ ಪ್ರಕರಣಗಳು ಹಿಂಪಡೆಯಬೇಕು. ಸಾದರ ಸಮಾಜದಲ್ಲಿ ಮೂಡಿರುವ ಗೊಂದಲ ನಿವಾರಣೆ ಮಾಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications