ಸಿರಿಗೆರೆ ತರಳಬಾಳು ಮಠದ ಪ್ರೀತಿಯ 'ಗೌರಿ' ಇನ್ನು ನೆನಪು ಮಾತ್ರ
ಚಿತ್ರದುರ್ಗ, ನ 13 : ಜಿಲ್ಲೆಯ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದ, ಶಿವಮೂರ್ತಿ ಸ್ವಾಮೀಜಿ ಅವರ ಆಶ್ರಯದಲ್ಲಿ ಬೆಳದು ಮತ್ತು ಮಠದ ಎಲ್ಲ ಮಕ್ಕಳಿಗೂ ಪ್ರಿಯವಾಗಿ ಬೆಳೆದ ಆನೆ ಇನ್ನು ಮುಂದೆ ನೆನಪು ಮಾತ್ರ.
ಚಿತ್ರದುರ್ಗದ ಸುತ್ತ ಮುತ್ತ ಹಳ್ಳಿ ಹಳ್ಳಿಗಳಲ್ಲಿ ಮಕ್ಕಳಿಗೆ ಆನೆ ಎಂದರೆ ಅದು ಸಿರಿಗೆರೆ ಮಠದ ಆನೆ. ಎಲ್ಲರ ಪ್ರೀತಿಯ ಈ ಆನೆ ಕೆಲವು ದಿನಗಳ ಹಿಂದೆ ಸಾವನ್ನಪ್ಪಿದೆ, ಕಳೆದ ಭಾನುವಾರ (ನ 8) ಆಸುಪಾಸಿನ ಜನತೆ ಭಾರವಾದ ಹೃದಯದಿಂದ ಆನೆಯನ್ನು ಮಣ್ಣು ಮಾಡುವ ಸಮಯದಲ್ಲಿ ಪಾಲ್ಗೊಂಡಿದ್ದರು.
ಟಿ ಎಸ್ ನಾಗಾಭರಣ ನಿರ್ದೇಶನದ, ಭಾವೈಕ್ಯತೆಯ ಸಂದೇಶವುಳ್ಳ "ಕಲ್ಲರಳಿ ಹೂವಾಗಿ" ಚಿತ್ರದಲ್ಲಿ ಈ ಆನೆಯೂ ಒಂದು ಪಾತ್ರವನ್ನು ಮಾಡಿತ್ತು. ಚಿತ್ರತಂಡದ ಸದಸ್ಯರು ಈ ಆನೆಗೆ 'ಗೌರಿ' ಎಂದು ನಾಮಕರಣ ಮಾಡಿದ್ದರು. ಅಂದಿನಿಂದ ಈ ಆನೆ ಗೌರಿ ಎಂದೇ ಹೆಸರಾಯಿತು.

ರಾಜ್ಯ ಸಚಿವ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕಂಕಪ್ಪ ಮತ್ತು ಅವರ ಕುಟುಂಬದವರು 2002 ರಲ್ಲಿ ಶ್ರೀಮಠಕ್ಕೆ 11 ವರ್ಷ ಪ್ರಾಯದ ಗೌರಿಯನ್ನು ಭಕ್ತಿ ಕಾಣಿಕೆಯಾಗಿ ನೀಡಿದ್ದರು.
ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿಯಲ್ಲಿ ನವಂಬರ್ 1 ರಿಂದು ನಡೆದ ರಾಷ್ಟ್ರೀಯ ನಾಟಕೋತ್ಸವದಲ್ಲೂ ಗೌರಿ ಭಾಗಿಯಾಗಿದ್ದಳು. ಮಠದ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಗೌರಿ ತನ್ನ ಸೇವೆ ಸಲ್ಲಿಸುತ್ತಿದ್ದಳು.
ಅಬಾಲವೃದ್ಧರಿಂದ ಹಿಡಿದು ಎಲ್ಲರಿಗೂ ಅಚ್ಚುಮೆಚ್ಚಿನವಳಾಗಿದ್ದ ಗೌರಿಯ ಸಾವು ಸಹಸ್ರಾರು ಭಕ್ತಾದಿಗಳ ಕಣ್ಣಂಚನ್ನು ಒದ್ದೆ ಮಾಡಿದೆ.
ಜನಸಾಮಾನ್ಯರ ಜೊತೆಗೆ ಹೊಂದಿಕೊಂಡಿದ್ದ ಗೌರಿಯ ಸಾವಿಗೆ ತರಳಬಾಳು ಸ್ವಾಮೀಜಿ, ಹೊಸದುರ್ಗದ ಕುಂಚಟಿಗ ಮಠದ ಶಾಂತವೀರ ಸ್ವಾಮೀಜಿ, ಸಾಣೇಹಳ್ಳಿ ತರಳಬಾಳು ಶಾಖಾಮಠದ ಪಂಡಿತಾರಾಧ್ಯ ಸ್ವಾಮೀಜಿ, ತರಳಬಾಳು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎಸ್ ಬಿ ರಂಗನಾಥ್ ಹಾಗೂ ಮಠದ ಅಪಾರ ಭಕ್ತಾದಿಗಳು, ವಿದ್ಯಾಸಂಸ್ಥೆಯ ಸಹಸ್ರಾರು ನೌಕರರು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ. (Image : File Photo)
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications