ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರೋಗ್ಯ ಸಚಿವರಿಂದಲೇ ಸಾಮಾಜಿಕ ಅಂತರ ಉಲ್ಲಂಘನೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 29: ಆರೋಗ್ಯ ಸಚಿವ ಬಿ ಶ್ರೀರಾಮುಲು ಕೋವಿಡ್ 19 ತಡೆ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಭೇಟಿಯಾಗಿದ್ದ ವೇಳೆ ಸಾಮಾಜಿಕ ಅಂತರದ ಮಾನದಂಡಗಳನ್ನು ಮೀರಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಮಂಗಳವಾರ ಬಿ.ಶ್ರೀರಾಮುಲು ಚಿತ್ರದುರ್ಗದ ಮೊಳಕಾಲ್ಮುರಿನಲ್ಲಿ ಪಡಿತರ ಪೂರೈಕೆಗೆ ಚಾಲನೆ ನೀಡುವ ವೇಳೆ ಈ ಘಟನೆ ನಡೆದಿದೆ.

ಸಚಿವರು ಪಡಿತರ ಸರಬರಾಜು ಕಿಟ್‌ಗಳನ್ನು ವಿತರಿಸುತ್ತಿದ್ದಂತೆ, ಜನರು ಹತ್ತಿರದಲ್ಲಿ ಬಂದು ನಿಂತು ಸಚಿವರ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಈ ವೇಳೆ ಅನೇಕರು ಮುಖವಾಡಗಳನ್ನು ಸಹ ಧರಿಸಲಿಲ್ಲದಿರುವುದು ಕಂಡು ಬಂದಿತು.

ವಿಪರ್ಯಾಸವೆಂದರೆ, ಅವರು ತಮ್ಮ ಈ ಭೇಟಿಯ ಸಮಯದಲ್ಲಿ ಮುಖವಾಡಗಳನ್ನು ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಅಭ್ಯಾಸ ಮಾಡುವುದು ಬಗ್ಗೆ ಹಾಗೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಬಗ್ಗೆ ಸಚಿವರು ಜನರಿಗೆ ತಿಳಿವಳಿಕೆ ನೀಡಿದ್ದಾರೆ.

Social Distance Rule Violation By Health Minister In Karnataka

ತುಮಕೂರಿನಲ್ಲಿ ಬುಧವಾರ 73 ವರ್ಷದ ಕೋವಿಡ್ -19 ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ, ಸೋಂಕಿನಿಂದಾಗಿ ಕರ್ನಾಟಕದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ ಮತ್ತು 12 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಒಟ್ಟು 535 ಕೋವಿಡ್ -19 ಧನಾತ್ಮಕ ಪ್ರಕರಣಗಳು ರಾಜ್ಯದಲ್ಲಿ ದೃಢಪಟ್ಟಿವೆ.

English summary
Social Distance Rule Violation By Health Minister In Karnataka. B sriramulu Violation the rule.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X