ಚಿತ್ರದುರ್ಗ: "90"ಗೆ ದುಡ್ಡು ಕೊಡ್ಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಮಗ
ನವೆಂಬರ್, 26: ಮಧ್ಯಪಾನ ಮಾಡಲು ಹಣ ಕೊಡಲಿಲ್ಲವೆಂದು ಕೋಪಿತಗೊಂಡು ಮಗನೊಬ್ಬ ತನ್ನ ಜನ್ಮ ನೀಡಿದ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂಜಿನಮ್ಮ (58) ವರ್ಷ ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಶಿವಾರೆಡ್ಡಿ (37) ಕೊಲೆ ಮಾಡಿದ ಪಾಪಿ ಮಗ ಎನ್ನಲಾಗಿದೆ. ಆರೋಪಿ ಶಿವಾರೆಡ್ಡಿ10 ವರ್ಷಗಳಿಂದ ಮದ್ಯಪಾನ ಮಾಡುವ ದುಶ್ಚಟವಿದ್ದು, ಕಳೆದ 8 ವರ್ಷಗಳಿಂದ ಹೆಂಡತಿಯಿಂದ ದೂರ ಉಳಿದಿದ್ದನು. ಇದರಿಂದ ಪ್ರತಿನಿತ್ಯವೂ ಕುಡಿತಕ್ಕೆ ದಾಸನಾಗಿದ್ದನು.

ಇದರಿಂದ ತಾಯಿಯೊಂದಿಗೆ ಮದ್ಯಪಾನ ಮಾಡಲು ದುಡ್ಡು ಕೊಡುವುದಿಲ್ಲ ಎಂದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದನು. ಕುಡಿಯಲು ಹಣ ನೀಡದೆ ಇದ್ದಾಗ ಆಕ್ರೋಶಗೊಂಡ ಮಗ ಅಂಜಿನಮ್ಮ ಜೊತೆ ಜಗಳವಾಡಿ ಮನೆಯಲ್ಲಿದ್ದ ಚಾಕುವಿನಿಂದ ತಾಯಿಯ ಹೊಟ್ಟೆಯ ಬಲಭಾಗಕ್ಕೆ ಇಂದು ತಿವಿದಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಅಂಜಿನಮ್ಮ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಇನ್ನು ಘಟನೆಗೆ ಸಂಬಂಧಪಟ್ಟಂತೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಕೆ ಕೈಗೊಂಡಿದ್ದಾರೆ ಎನ್ನಲಾಗಿದೆ.
ಬಸ್ ಚಾಲಕನಿಗೆ ಹೃದಯಾಘಾತ
ಖಾಸಗಿ ಬಸ್ ಚಾಲಕ ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ, ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದ ಗಾಂಧಿ ಸರ್ಕಲ್ ನೆಹರೂ ಮಾರುಕಟ್ಟೆ ಮುಂಭಾಗದಲ್ಲಿ ನಡೆದಿದೆ. ಚಳ್ಳಕೆರೆ ತಾಲ್ಲೂಕಿನ ದೇವರಮರಿಕುಂಟೆ ಗ್ರಾಮದ ಕುಮಾರ್ (45)ಮೃತ ಬಸ್ ಚಾಲಕ ಎಂದು ಗುರುತಿಸಲಾಗಿದೆ. ರೆಡ್ಡಿಹಳ್ಳಿ ಗ್ರಾಮದ ಮಂಜುನಾಥ ಲ್ಲಿ ಹಲವಾರು ವರ್ಷಗಳಿಂದ ಬಸ್ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇಂದು ಹಿರಿಯೂರು ನಗರದ ಖಾಸಗಿ ಬಸ್ ನಿಲ್ದಾಣದಿಂದ ಹೇಮದಳ, ರಂಗೇನಹಳ್ಳಿ, ಬೆಳಗೆರೆ ಕಡೆ ಹೋರಾಟಾಗ ನಗರದಲ್ಲಿದ್ದಾಗ ಚಾಲಕನಿಗೆ ಹಠಾತ್ ಹೃದಯಘಾತ ಸಂಭವಿಸಿದೆ. ಇದರಿಂದ ದೊಡ್ಡ ದುರಂತ ತಪ್ಪಿದೆ. ನಿಯಂತ್ರಣ ಇಲ್ಲದ ಬಸ್ ರಸ್ತೆ ಪಕ್ಕದಲಿದ್ದ ಟೆಲಿಪೋನ್ ಕಂಬಕ್ಕೆ ಗುದ್ದಿದೆ. ಅಲ್ಲಿದ್ದ ಫರ್ನಿಚರ್ ಅಂಗಡಿಯ ಮುಂಭಾಗದಲ್ಲಿದ್ದ ಚೇರ್ ಸೇರಿದಂತೆ ಕೆಲವು ವಸ್ತುಗಳು ಮುರಿದು ಬಿದ್ದು ದೊಡ್ಡ ಅನಾಹುತ ತಪ್ಪಿದೆ. ಸದ್ಯ ಈ ಪ್ರಕರಣ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications