ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ನಂಬರ್ 1ನಲ್ಲಿದ್ದ ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನಕ್ಕೆ ಕುಸಿತ-ಕಾರಣ ಏನು?
ಹಿರಿಯೂರು, ಮೆ, 09: ಇಂದು (ಮೇ 09) 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ಪ್ರಥಮ ಸ್ಥಾನದಲ್ಲಿದ್ದ ಚಿತ್ರದುರ್ಗ ಜಿಲ್ಲೆ ಈ ಬಾರಿ 21ನೇ ಸ್ಥಾನಕ್ಕೆ ಕುಸಿದಿದೆ.
ಕೋಟೆ ನಾಡು ಚಿತ್ರದುರ್ಗ ಜಿಲ್ಲೆಗೆ 72.85%ರಷ್ಟು ಫಲಿತಾಂಶ ಲಭಿಸಿದ್ದು, ಈ ಮೂಲಕ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನಪಡೆದುಕೊಂಡಿದ್ದು, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಹಾಗೂ ಯಾದಗಿರಿ ಜಿಲ್ಲೆ ಕೊನೇ ಸ್ಥಾನ ಪಡೆದಿದೆ. ಇದರ ಮಧ್ಯೆ ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ.

ಜಿಲ್ಲೆಯಲ್ಲಿ 22,275 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 16,227 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಿಂದ ರಾಜ್ಯದ ಫಲಿತಾಂಶದಲ್ಲಿ ಜಿಲ್ಲೆ 21ನೇ ಸ್ಥಾನಕ್ಕೆ ಕುಸಿದಿದೆ. ಇನ್ನು 2023ರ ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದ ಜಿಲ್ಲೆ, ಈ ಬಾರಿ 21ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ವರ್ಷ ಫಲಿತಾಂಶಕ್ಕಿಂತ ಜಿಲ್ಲೆಗೆ ಈ ವರ್ಷದ ಫಲಿತಾಂಶದಲ್ಲಿ ಸಾಕಷ್ಟು ಹಿನ್ನಡೆಯಾಗಿದೆ ಎನ್ನಬಹುದು.
620 ಅಂಕ ಪಡೆದ ವಿದ್ಯಾರ್ಥಿನಿ: ಇನ್ನು ಮತ್ತೊಂದೆಡೆ 625ಕ್ಕೆ 620 ಅಂಕ ಪಡೆಯುವ ಮೂಲಕ ತನುಶ್ರೀ ಹಾಗೂ ಹಿರಣ್ಮಯಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ನಗರದ ರಾಷ್ಟ್ರೀಯ ಅಕಾಡೆಮಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳಾದ ತನುಶ್ರೀ ಹಾಗೂ ಹಿರಣ್ಮಯಿ ಇವರು ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ ಸನ್ಮಾನ ಮಾಡಿ ಗೌರವಿಸಿದರು.
ಈ ಕುರಿತು ಮಾತನಾಡಿದ ಕ್ಷೇತ್ರಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ ಅವರು, ತಾಲೂಕಿನಲ್ಲಿ 14 ಶಾಲೆಗಳಿಗೆ ನೂರಕ್ಕೆ ನೂರರಷ್ಟು ಫಲಿತಾಂಶ ಲಭಿಸಿದೆ. ಇದರಿಂದ ಜಿಲ್ಲೆಯ ವ್ಯಾಪ್ತಿಯಲ್ಲಿ ತಾಲೂಕಿಗೆ ಶೇಕಡಾ 75.04ರಷ್ಟು ಫಲಿತಾಂಶ ಬಂದಿದ್ದು, ಜಿಲ್ಲೆಯಲ್ಲಿ ಹಿರಿಯೂರು 2ನೇ ಸ್ಥಾನ ಗಳಿಸಿದೆ ಎಂದು ತಿಳಿಸಿದರು.
ಹಿರಿಯೂರು ತಾಲೂಕಿನಲ್ಲಿ ಫಲಿತಾಂಶ ಉತ್ತಮಪಡಿಸಲು ವ್ಯವಸ್ಥಿತವಾದ ಕ್ರಿಯೆಯನ್ನು ಅನುಸರಿಸಲಾಗಿತ್ತು. ಅದರಲ್ಲಿ ಎರಡ್ಮೂರು ಶಾಲೆಗಳು ಒಂದೆಡೆ ಸೇರಿ ಹಮ್ಮಿಕೊಳ್ಳುತ್ತಿದ್ದ ಅಂತರ ಶಾಲಾ ಶೈಕ್ಷಣಿಕ ಸ್ಪರ್ಧಾ ಕಾರ್ಯಕ್ರಮಗಳು ಅತ್ಯಂತ ಪರಿಣಾಮಕಾರಿಯಾಗಿ ಮಕ್ಕಳ ಶೈಕ್ಷಣಿಕ ಮಟ್ಟವನ್ನು ಉತ್ತಮಗೊಳಿಸಿದವು.
ಇದಲ್ಲದೆ ಪ್ರತಿ ಶಾಲೆಗಳಲ್ಲೂ ಪೋಷಕರ ಸಭೆಗಳನ್ನು ಹಮ್ಮಿಕೊಂಡು, ಪ್ರತಿ ವಿದ್ಯಾರ್ಥಿಯ ಪ್ರಗತಿಯನ್ನು ಪೋಷಕರೊಂದಿಗೆ ಚರ್ಚಿಸಿದ್ದು ಕೂಡ ಉತ್ತಮ ಪರಿಣಾಮ ಬೀರಿತು. ಶಾಲಾ ಶಿಕ್ಷಕರು ನಿಗದಿತವಾಗಿ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಅವರ ಕಲಿಕೆಯನ್ನು ಪರಿಶೀಲಿಸಿದ್ದರು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ದತ್ತು ಪಡೆದು ಅವರ ಕಲಿಕೆ ಉತ್ತಮ ಪಡಿಸಲು ವೈಯಕ್ತಿಕ ಗಮನವನ್ನು ಶಿಕ್ಷಕರು ನೀಡಿದ್ದರಿಂದ ಉತ್ತಮ ಫಲಿತಾಂಶ ಸಾಧ್ಯವಾಯಿತು ಎಂದರು.
ಜೊತೆಗೆ ಪ್ರತಿ ತಿಂಗಳು ತಾಲೂಕು ಹಂತದಲ್ಲಿ ಮುಖ್ಯ ಶಿಕ್ಷಕರ ಸಭೆಗಳನ್ನು ನಡೆಸಿದ್ದು, ಪ್ರತಿ ಶಾಲೆಯ ಕಲಿಕಾ ಪ್ರಗತಿಯನ್ನು ಪರಾಮರ್ಶಿಸಿ ಸಲಹೆಗಳನ್ನು ಮತ್ತು ಗುರಿಗಳನ್ನು ನೀಡಲಾಗುತ್ತಿತ್ತು. ಇದರಿಂದಾಗಿ ತಾಲೂಕಿನ ಫಲಿತಾಂಶ ಉತ್ತಮವಾಯಿತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ ತಿಳಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications