ಸಿಎಂ ಬದಲಾವಣೆ ವಿವಾದದ ಬೆನ್ನಲ್ಲೇ ಬಿಜೆಪಿ ಮಹತ್ವದ ಸಭೆ
ಚಿತ್ರದುರ್ಗ, ಜುಲೈ 21: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಬದಲಾಯಿಸಲಾಗುತ್ತದೆ ಎನ್ನುವ ಸುದ್ದಿ ಕಳೆದ ಒಂದು ವಾರದಿಂದ ಹರಡಿದೆ. ಸದ್ಯ ಸಿಎಂ ಬದಲಾವಣೆ ವಿಚಾರ ರಾಜ್ಯ ಹಾಗೂ ರಾಷ್ಟ್ರಮಟ್ಟದ ಸುದ್ದಿಯಾಗಿದ್ದು, ಯಡಿಯೂರಪ್ಪ ಬದಲಾವಣೆಗೆ ಹಲವು ಮಠಾಧೀಶರು ವಿರೋಧ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ರಾಜ್ಯ ಬಿಜೆಪಿ ಮಹತ್ವದ ಸಭೆಯೊಂದನ್ನು ಕರೆದಿದ್ದು, "ಇದೇ ತಿಂಗಳ 24 ರಂದು ಇಂಡಿಯನ್ ಇಂಟರ್ನ್ಯಾಷನಲ್ ಕಾಲೇಜಿನಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದೆ,'' ಎಂದು ಎಂಎಲ್ಸಿ ರವಿಕುಮಾರ್ ಹೇಳಿದರು.
ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, "ಸಭೆಯಲ್ಲಿ ಜಿ.ಪಂ ಹಾಗೂ ತಾ.ಪಂ ಚುನಾವಣೆ ಕುರಿತು ಹಾಗೂ ಪಕ್ಷದ ಮುಂದಿನ ರೂಪುರೇಷಗಳ ಬಗ್ಗರ ಚರ್ಚ ನಡೆಯಲಿದೆ. ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕುರಿತು ಕೂಡಾ ಮಾತುಕತೆ ನಡೆಯಲಿದೆ,'' ಎಂದರು.

"ಬರುವ ಡಿಸೆಂಬರ್ನಲ್ಲಿ 25 ವಿಧಾನ ಪರಿಷತ್ ಚುನಾವಣೆ ಬರಲಿದ್ದು, ಈ ಚುನಾವಣೆಯ ಬಗ್ಗೆಯು ಚರ್ಚೆ ನಡೆಯಲಿದೆ. ರಾಜ್ಯದಲ್ಲಿ ಬಿಜೆಪಿ ಬೂತ್ಗಳನ್ನು ರಚಿಸಲು ಚಿಂತನೆ ಇದೆ. ಆಗಸ್ಟ್ 16ರಿಂದ 30 ಬೂತ್ ಅಧ್ಯಕ್ಷರ ಮನೆಗೆ ಬೋರ್ಡ್ ಹಾಕುವ ಮೂಲಕ ರಾಜ್ಯದಲ್ಲಿ 60 ಸಾವಿರ ಬೂತ್ಗಳಿಗೆ ನಾಮಫಲಕ ಹಾಕುತ್ತೇವೆ.''
"ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬೂತ್ ಅಧ್ಯಕ್ಷರು ಆಯೋಜಿಸುವಂತೆ ಮಾಡುತ್ತೇವೆ. ರಾಜ್ಯದಲ್ಲಿ 30 ಮನ್ ಕೀ ಬಾತ್ ಕಾರ್ಯಕ್ರಮ ನಡೆಯಲಿವೆ. ಸೆಪ್ಟಂಬರ್ 1ರಿಂದ 15 ಗ್ರಾ.ಪಂ ಸದಸ್ಯರ ಜಿಲ್ಲಾ ಸಮಾವೇಶ ನಡೆಸುತ್ತೇವೆ.''
"ಅಕ್ಟೋಬರ್ನಲ್ಲಿ ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ರಾಜ್ಯ ಮಟ್ಟದ ಸಮಾವೇಶ ನಡೆಸುತ್ತೇವೆ. ಈ ಬಾರಿ ಹೆಚ್ಚು ವಿಧಾನ ಪರಿಷತ್ ಸ್ಥಾನಗಳನ್ನು ಗೆಲ್ಲುತ್ತೇವೆ,'' ಎಂದು ರವಿಕುಮಾರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾಧ್ಯಕ್ಷ ಮುರುಳಿ, ರಾಜ್ಯ ಮುಖಂಡ ಕೆ.ಎಸ್. ನವೀನ್ ಮತ್ತಿತರರು ಉಪಸ್ಥಿತರಿದ್ದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications