ಚಿತ್ರದುರ್ಗದಲ್ಲಿ ಆಗಸ್ಟ್ 16 ರಂದು ರಾಜ್ಯ ಮಟ್ಟದ ಗಾಳಿಪಟ ಸ್ಪರ್ಧೆ
ಚಿತ್ರದುರ್ಗ, ಜುಲೈ 27: ರಾಜ್ಯ ಜಾನಪದ ಪರಿಷತ್ ಹಾಗೂ ಚಿತ್ರದುರ್ಗ ಜಿಲ್ಲಾ ಆಡಳಿತ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 16 ರಂದು ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಗಾಳಿಪಟ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗಾಳಿಪಟ ಸ್ಪರ್ಧೆ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಗಾಳಿಪಟ ಕ್ರೀಡೆಯು ರಚನಾತ್ಮಕ ಕ್ರೀಡೆಯಾಗಿದ್ದು ಇದನ್ನು ಉಳಿಸಬೇಕು ಮತ್ತು ಯುವ ಜನಾಂಗವನ್ನು ಇದರಲ್ಲಿ ತೊಡಗಿಸಬೇಕೆಂಬ ಹಿನ್ನೆಲೆಯಲ್ಲಿ ಜಾನಪದ ಪರಿಷತ್ತು ಪ್ರತಿ ವರ್ಷ ಇಂತಹ ಸ್ಪರ್ಧೆಯನ್ನು ನಡೆಸುತ್ತಾ ಬಂದಿದೆ. ಈ ಭಾರಿ ರಾಜ್ಯ ಮಟ್ಟದ ಸ್ಪರ್ಧೆಯನ್ನು ಚಿತ್ರದುರ್ಗದಲ್ಲಿ ನಡೆಸಲಾಗುತ್ತಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಗಾಳಿಪಟ ಸ್ಪರ್ಧೆಯಲ್ಲಿ ಭಾಗವಹಿಸುವರು," ಎಂದು ಮಾಹಿತಿ ನೀಡಿದರು.

ಸ್ಪರ್ಧೆಯಲ್ಲಿ ನಾಲ್ಕು ವಿಭಾಗಗಳಿದ್ದು 12 ವರ್ಷದೊಳಗಿನ ಮತ್ತು 12 ರಿಂದ 22 ವರ್ಷ ಮತ್ತು 22 ವರ್ಷದ ನಂತರ ಮತ್ತು ನಾಲ್ಕು, ಐದು ಜನರು ಸೇರಿದ ತಂಡ ವಿಭಾಗ ಸೇರಿ ಒಟ್ಟು ನಾಲ್ಕು ವಿಭಾಗಗಳಿರುತ್ತವೆ.
ಪ್ರತಿ ವಿಭಾಗದಲ್ಲಿಯೂ ವಿಜೇತರಾದವರಿಗೆ ಜಾನಪದ ಪರಿಷತ್ತಿನಿಂದ ನಗದು ಪ್ರಶಸ್ತಿ ಮತ್ತು ಪ್ರಶಸ್ತಿ ಪತ್ರವನ್ನು ಮೊದಲ ಮೂರು ಸ್ಥಾನಗಳಿಗೆ ಮತ್ತು ಇನ್ನೆರಡು ಸಮಾಧಾನಕರ ಬಹುಮಾನವನ್ನಾಗಿ ನೀಡಲಾಗುತ್ತದೆ.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ಮಹಿಳೆಯವರು ಸೇರಿದಂತೆ ಎಲ್ಲರೂ ಭಾಗವಹಿಸಬಹುದಾಗಿದೆ. ಒಬ್ಬ ಸ್ಪರ್ಧಿಗಳ ಜೊತೆ ಒಬ್ಬರನ್ನು ಸಹಾಯಕರನ್ನಾಗಿ ನೀಡಲಾಗುತ್ತದೆ. ಆ.16 ರಂದು ಬೆಳಗ್ಗೆ 9 ರಿಂದ ಸ್ಪರ್ಧೆ ಆರಂಭವಾಗಲಿದ್ದು ಆರಂಭಕ್ಕೂ ಮುಂಚೆ ಸ್ಪರ್ಧಾಳುಗಳು ಸ್ಥಳದಲ್ಲಿಯೇ ನೊಂದಣಿ ಮಾಡಿಸಬೇಕು. ನೊಂದಣಿಗೆ ಯಾವುದೇ ಶುಲ್ಕವಿರುವುದಿಲ್ಲ. ಸ್ಪರ್ಧೆಯಲ್ಲಿ ಗ್ರಾಮೀಣ ಪ್ರದೇಶದವರು ಮತ್ತು ನಗರ, ಪಟ್ಟಣದವರು ಸಹ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಪರ್ಧೆಯಲ್ಲಿ ಸುಮಾರು 500 ಕ್ಕಿಂತ ಹೆಚ್ಚು ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದ್ದು ಅವರೆಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಜಿಲ್ಲಾ ಆಡಳಿತದಿಂದ ಕಲ್ಪಿಸಲಾಗುತ್ತದೆ ಎಂದರು.
ಜಾನಪದ ಲೋಕದ ಸಮನ್ವಯಾಧಿಕಾರಿ ಡಾ. ಕುರುವ ಬಸವರಾಜ್ ಮಾತನಾಡಿ ಜಾನಪದ ಪರಿಷತ್ತಿನಿಂದ ಪ್ರತಿ ವರ್ಷ ರಾಜ್ಯ ಮಟ್ಟದ ಗಾಳಿಪಟ ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು ಈ ವರ್ಷ ಚಿತ್ರದುರ್ಗದಲ್ಲಿ ಆಯೋಜಿಸಲಾಗುತ್ತಿದೆ. ಸ್ಪರ್ಧೆಯಲ್ಲಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು, ಮಹಿಳೆಯವರು ಭಾಗವಹಿಸಬಹುದಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಅವರಿಗೆ ಬೇಕಾದ ಗಾಳಿಪಟವನ್ನು ತಯಾರು ಮಾಡಿಕೊಂಡು ಬರಬಹುದು. ಮತ್ತು ಗಾಳಿಪಟದಲ್ಲಿ ಜಾಗೃತಿ ಮೂಡಿಸುವಂತಹ ವಿಷಯಗಳನ್ನು ಅಳವಡಿಸಿಕೊಂಡು ಹಾರಾಟ ನಡೆಸಬಹುದಾಗಿದೆ ಎಂದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications