ಚಿತ್ರದುರ್ಗದಲ್ಲಿ ಆಗಸ್ಟ್ 16 ರಂದು ರಾಜ್ಯ ಮಟ್ಟದ ಗಾಳಿಪಟ ಸ್ಪರ್ಧೆ
ಚಿತ್ರದುರ್ಗ, ಜುಲೈ 27: ರಾಜ್ಯ ಜಾನಪದ ಪರಿಷತ್ ಹಾಗೂ ಚಿತ್ರದುರ್ಗ ಜಿಲ್ಲಾ ಆಡಳಿತ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 16 ರಂದು ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಗಾಳಿಪಟ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗಾಳಿಪಟ ಸ್ಪರ್ಧೆ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಗಾಳಿಪಟ ಕ್ರೀಡೆಯು ರಚನಾತ್ಮಕ ಕ್ರೀಡೆಯಾಗಿದ್ದು ಇದನ್ನು ಉಳಿಸಬೇಕು ಮತ್ತು ಯುವ ಜನಾಂಗವನ್ನು ಇದರಲ್ಲಿ ತೊಡಗಿಸಬೇಕೆಂಬ ಹಿನ್ನೆಲೆಯಲ್ಲಿ ಜಾನಪದ ಪರಿಷತ್ತು ಪ್ರತಿ ವರ್ಷ ಇಂತಹ ಸ್ಪರ್ಧೆಯನ್ನು ನಡೆಸುತ್ತಾ ಬಂದಿದೆ. ಈ ಭಾರಿ ರಾಜ್ಯ ಮಟ್ಟದ ಸ್ಪರ್ಧೆಯನ್ನು ಚಿತ್ರದುರ್ಗದಲ್ಲಿ ನಡೆಸಲಾಗುತ್ತಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಗಾಳಿಪಟ ಸ್ಪರ್ಧೆಯಲ್ಲಿ ಭಾಗವಹಿಸುವರು," ಎಂದು ಮಾಹಿತಿ ನೀಡಿದರು.

ಸ್ಪರ್ಧೆಯಲ್ಲಿ ನಾಲ್ಕು ವಿಭಾಗಗಳಿದ್ದು 12 ವರ್ಷದೊಳಗಿನ ಮತ್ತು 12 ರಿಂದ 22 ವರ್ಷ ಮತ್ತು 22 ವರ್ಷದ ನಂತರ ಮತ್ತು ನಾಲ್ಕು, ಐದು ಜನರು ಸೇರಿದ ತಂಡ ವಿಭಾಗ ಸೇರಿ ಒಟ್ಟು ನಾಲ್ಕು ವಿಭಾಗಗಳಿರುತ್ತವೆ.
ಪ್ರತಿ ವಿಭಾಗದಲ್ಲಿಯೂ ವಿಜೇತರಾದವರಿಗೆ ಜಾನಪದ ಪರಿಷತ್ತಿನಿಂದ ನಗದು ಪ್ರಶಸ್ತಿ ಮತ್ತು ಪ್ರಶಸ್ತಿ ಪತ್ರವನ್ನು ಮೊದಲ ಮೂರು ಸ್ಥಾನಗಳಿಗೆ ಮತ್ತು ಇನ್ನೆರಡು ಸಮಾಧಾನಕರ ಬಹುಮಾನವನ್ನಾಗಿ ನೀಡಲಾಗುತ್ತದೆ.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ಮಹಿಳೆಯವರು ಸೇರಿದಂತೆ ಎಲ್ಲರೂ ಭಾಗವಹಿಸಬಹುದಾಗಿದೆ. ಒಬ್ಬ ಸ್ಪರ್ಧಿಗಳ ಜೊತೆ ಒಬ್ಬರನ್ನು ಸಹಾಯಕರನ್ನಾಗಿ ನೀಡಲಾಗುತ್ತದೆ. ಆ.16 ರಂದು ಬೆಳಗ್ಗೆ 9 ರಿಂದ ಸ್ಪರ್ಧೆ ಆರಂಭವಾಗಲಿದ್ದು ಆರಂಭಕ್ಕೂ ಮುಂಚೆ ಸ್ಪರ್ಧಾಳುಗಳು ಸ್ಥಳದಲ್ಲಿಯೇ ನೊಂದಣಿ ಮಾಡಿಸಬೇಕು. ನೊಂದಣಿಗೆ ಯಾವುದೇ ಶುಲ್ಕವಿರುವುದಿಲ್ಲ. ಸ್ಪರ್ಧೆಯಲ್ಲಿ ಗ್ರಾಮೀಣ ಪ್ರದೇಶದವರು ಮತ್ತು ನಗರ, ಪಟ್ಟಣದವರು ಸಹ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಪರ್ಧೆಯಲ್ಲಿ ಸುಮಾರು 500 ಕ್ಕಿಂತ ಹೆಚ್ಚು ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದ್ದು ಅವರೆಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಜಿಲ್ಲಾ ಆಡಳಿತದಿಂದ ಕಲ್ಪಿಸಲಾಗುತ್ತದೆ ಎಂದರು.
ಜಾನಪದ ಲೋಕದ ಸಮನ್ವಯಾಧಿಕಾರಿ ಡಾ. ಕುರುವ ಬಸವರಾಜ್ ಮಾತನಾಡಿ ಜಾನಪದ ಪರಿಷತ್ತಿನಿಂದ ಪ್ರತಿ ವರ್ಷ ರಾಜ್ಯ ಮಟ್ಟದ ಗಾಳಿಪಟ ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು ಈ ವರ್ಷ ಚಿತ್ರದುರ್ಗದಲ್ಲಿ ಆಯೋಜಿಸಲಾಗುತ್ತಿದೆ. ಸ್ಪರ್ಧೆಯಲ್ಲಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು, ಮಹಿಳೆಯವರು ಭಾಗವಹಿಸಬಹುದಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಅವರಿಗೆ ಬೇಕಾದ ಗಾಳಿಪಟವನ್ನು ತಯಾರು ಮಾಡಿಕೊಂಡು ಬರಬಹುದು. ಮತ್ತು ಗಾಳಿಪಟದಲ್ಲಿ ಜಾಗೃತಿ ಮೂಡಿಸುವಂತಹ ವಿಷಯಗಳನ್ನು ಅಳವಡಿಸಿಕೊಂಡು ಹಾರಾಟ ನಡೆಸಬಹುದಾಗಿದೆ ಎಂದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications