ಶಾಲಾ ಪ್ರಾರಂಭೋತ್ಸವಕ್ಕೆ ಎತ್ತಿನಗಾಡಿಯಲ್ಲಿ ಶಾಲೆಗೆ ಬಂದ ಮಕ್ಕಳು
ಚಿತ್ರದುರ್ಗ, ಮೇ 16 : ರಾಜ್ಯಾದ್ಯಂತ ಸೋಮವಾರ ಶಾಲಾ ಪ್ರಾರಂಭೋತ್ಸವಕ್ಕೆ ಸರ್ಕಾರ ವಿದ್ಯುಕ್ತವಾಗಿ ಚಾಲನೆ ದೊರೆತಿದ್ದು, ಇತ್ತ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸಹ ಮಕ್ಕಳು ಎತ್ತಿನಗಾಡಿಯಲ್ಲಿ ಶಾಲೆಗೆ ಬಂದು ಎಲ್ಲರ ಗಮನ ಸೆಳೆದರು.
ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಗ್ಗನಡು ಗ್ರಾಮದಲ್ಲಿ ಗ್ರಾಮದ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಚಾಲನೆ ನೀಡಿ, ಎತ್ತಿನಗಾಡಿಯಲ್ಲಿ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬಂದರು.
ಇನ್ನು ಕಾರ್ಯಕ್ರಮ ಕುರಿತು ಮಾತನಾಡಿದ ಶಾಸಕಿ ಕೆ. ಪೂರ್ಣಿಮಾ ಕಳೆದ ಎರಡು ವರ್ಷಗಳಿಂದ ಕೊರೋನಾ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡವು. ಕೋವಿಡ್ ಹಿನ್ನೆಲೆಯಲ್ಲಿ ಕಲಿಕಾ ನಷ್ಟ ಸರಿದೂಗಿಸಲು ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ವರ್ಷ ಕಲಿಕಾ ಚೇತರಿಕೆ ವರ್ಷ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಪೋಷಕರು ಕನ್ನಡ ಭಾಷೆಯ ಶಾಲೆಗಳ ಬಗ್ಗೆ ಕೀಳರಿಮೆ ಬೇಡ, ಕನ್ನಡ ಭಾಷೆಗೆ ಒತ್ತು ನೀಡಬೇಕು. ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಕನ್ನಡ ಭಾಷೆಗೆ ಆದ್ಯತೆ ನೀಡಿ ಎಂದರು.

ರಾಜ್ಯದಲ್ಲಿ ಸರ್ಕಾರದಿಂದ ಈ ವರ್ಷ 7 ಸಾವಿರ ಕೊಠಡಿಗಳನ್ನು ಕೊಡಲು ಸರ್ಕಾರ ಮುಂದಾಗಿದೆ. ನಾನು ಸಹ ಶಿಕ್ಷಣ ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದೇನೆ. ಬಗ್ಗನಡು ಶಾಲೆಗೆ ಶೀಘ್ರದಲ್ಲೇ ಬೋರ್ ವೆಲ್ ಕೊರೆಸಿ ನಂತರ ವೈಯಕ್ತಿಕವಾಗಿ ಒಂದು ತಿಂಗಳೊಳಗೆ ಸ್ಮಾರ್ಟ್ ಕ್ಲಾಸ್ ಕೊಡಲಾಗುತ್ತದೆ ಎಂದು ಭರವಸೆ ನೀಡಿದರು.
ಹೂ ನೀಡಿ ಸ್ವಾಗತ :
ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮದಲ್ಲಿ ಸಹ ವಿದ್ಯಾರ್ಥಿಗಳಿಗೆ ಶಿಕ್ಷಕರು ಹೂವು ನೀಡಿ ಸ್ವಾಗತಿಸಲಾಯಿತು. ಉಳಿದಂತೆ ತಾಲ್ಲೂಕಿನ ಇತರೆ ಗ್ರಾಮೀಣ ಭಾಗದ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಮಕ್ಕಳನ್ನು ಸ್ವಾಗತಿಸಿದರು.

ಚಳ್ಳಕೆರೆಯಲ್ಲಿ ಸ್ವಾಗತ:
ಚಳ್ಳಕೆರೆ ತಾಲೂಕಿನ ಚಿಕ್ಕ ಉಳ್ಳಾರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಮುಖ್ಯ ಶಿಕ್ಷಕ ತಿಪ್ಪೇಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಿದರು. ಉಳಿದಂತೆ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲೂ ಸಹ ಶಾಲಾ ಪ್ರಾರಂಭೋತ್ಸವಕ್ಕೆ ಅದ್ದೂರಿ ಚಾಲನೆ ದೊರೆತಿದೆ.
ಹಬ್ಬದ ವಾತಾವರಣ:
ಶಾಲಾ ಪ್ರಾರಂಭೋತ್ಸವಕ್ಕೆ ಹಿಂದೂ ಸರ್ಕಾರಿ ಶಾಲೆಗಳಲ್ಲಿ ಹಬ್ಬದ ವಾತಾವರಣ ಸೃಷ್ಠಿಯಾಗಿತ್ತು. ಬಾಳೆ ಕಂದು, ಮಾವಿನ ಸೋಪ್ಪು, ಹೀಗೆ ತಳಿರು ತೋರಣಗಳಿಂದ ಸಿಂಗರಿಸಿ, ವಿವಿಧ ವಾದ್ಯಗಳೊಂದಿಗೆ ಮಕ್ಕಳನ್ನು ಶಾಲೆಗೆ ಅದ್ದೂರಿಯಾಗಿ ಕರೆತರಲಾಯಿತು.

ಒಟ್ಟಾರೆಯಾಗಿ ಮಕ್ಕಳ ಶಿಕ್ಷಣಕ್ಕೆ ಈ ವರ್ಷ ಹೆಚ್ಚು ಆದ್ಯತೆ ನೀಡಿರುವ ಸರ್ಕಾರ ಬೇಸಿಗೆಯ ರಜೆಯನ್ನು 15 ದಿನಗಳ ಕಡಿತ ಮಾಡಿ ಇಂದು ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಶಾಲಾ ಮಕ್ಕಳು ಶಾಲೆ ಕಡೆಗೆ ಮುಖ ಮಾಡಿದ್ದಾರೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications