ಪ್ರಿಯತಮೆಯ ಮಗನಿಗೆ ಬರೆ ಹಾಕಿದ ಆರೋಪಿ, ಬಂಧನ ಭೀತಿಯಿಂದ ಆತ್ಮಹತ್ಯೆಗೆ ಯತ್ನ
ಚಿತ್ರದುರ್ಗ, ನವೆಂಬರ್ 12: ತನ್ನ ಪ್ರಿಯತಮೆಯ ಮಗನಿಗೆ ಬರೆ ಹಾಕಿದ್ದ ಆರೋಪಿಯು, ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಶಿವಮೂರ್ತಿ (30) ಎಂಬಾತನೇ ಬಂಧನ ಭೀತಿಯಿಂದ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾನೆ.
ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗಟ್ಟಿ ಹೊಸಹಳ್ಳಿ ಗ್ರಾಮದ ಶಿವಮೂರ್ತಿ ಆತ್ಮಹತ್ಯೆ ಯತ್ನಿಸಿದವನು ಎಂದು ತಿಳಿದು ಬಂದಿದೆ.
ನಿಂಗಮ್ಮ (ಶೃತಿ) ಎಂಬಾಕೆ ಜಯಪ್ಪನೊಂದಿಗೆ ಮದುವೆಯಾಗಿ ಏಳು ವರ್ಷ ಕಳೆದಿದ್ದು, ಇಬ್ಬರು ದಂಪತಿಗಳಿಗೆ ಒಂದು ಮುದ್ದಾದ ಗಂಡು ಮಗು ಕೂಡ ಇತ್ತು. ಆದರೆ ನಿಂಗಮ್ಮ (ಶೃತಿ), ಯುವಕ ಶಿವಮೂರ್ತಿಯ ಪ್ರೀತಿಯ ಬಲೆಗೆ ಬಿದ್ದಿದ್ದಳು.

ಮೂಲತಃ ನಿಂಗಮ್ಮ (ಶೃತಿ) ಹೊಳಲ್ಕೆರೆ ತಾಲೂಕಿನ ತಾಳ್ಯಾ ಗ್ರಾಮದವಳು. ಇತ್ತೀಚೆಗೆ ಘಟ್ಟಿ ಹೊಸಹಳ್ಳಿ ಗ್ರಾಮದ ಶಿವಮೂರ್ತಿಯೊಂದಿಗೆ ಬೆಳೆದ ಸಲಿಗೆ, ಪ್ರೀತಿಯಾಗಿ ಆಕೆ ಮನೆ ಮತ್ತು ಗಂಡನನ್ನೇ ಬಿಟ್ಟು ಬಂದು ಆರು ವರ್ಷದ ಮಗುವಿನೊಂದಿಗೆ ಬಂದು ಶೃತಿ ಕೆಲ ದಿನಗಳಿಂದ ಗಟ್ಟಿ ಹೊಸಹಳ್ಳಿಯಲ್ಲಿ ಪ್ರಿಯಕರ ಶಿವಮೂರ್ತಿ ಜೊತೆ ವಾಸವಾಗಿದ್ದಳು ಎನ್ನಲಾಗಿದೆ.
ಏನೂ ಅರಿಯದ ಮುಗ್ಧ ಮಗುವಿಗೆ ನೀನು ನನ್ನನ್ನು ಅಪ್ಪ ಎಂದು ಕರೆಯಬೇಕು ಎಂದು ಹೇಳಿ ಆಂಧ್ರಪ್ರದೇಶಕ್ಕೆ ಕರೆದುಕೊಂಡು ಹೋಗಿ ಶಿವಮೂರ್ತಿ ಚಿತ್ರಹಿಂಸೆ ನೀಡಿದ್ದ. ಮಗುವಿನ ಕಾಲು ಹಾಗೂ ಕೈ ಮೇಲೆ ಬೆಂಕಿಯಿಂದ ಬರೆ ಹಾಕಿದ್ದನು. ಇದನ್ನು ಬಿಡಿಸಿಕೊಳ್ಳಲು ಅಡ್ಡ ಬಂದ ಪ್ರಿಯತಮೆ ಶೃತಿಗೂ ಸುಟ್ಟ ಗಾಯಗಳಾಗಿವೆ.

ಇಷ್ಟೇ ಅಲ್ಲದೆ ಚಪಾತಿ ಲಟ್ಟಿಸುವ ಲಟ್ಟಣಿಗೆಯಿಂದ ಆರೋಪಿಯು ಮಗುವಿನ ಮೇಲೆ ಹಲ್ಲೆ ಮಾಡಿದ್ದನು. ಗಾಯಗಳಿಂದ ನರಳಾಡುತ್ತಿದ್ದ ಬಾಲಕನನ್ನು ಗಮನಿಸಿದ ಗ್ರಾಮಸ್ಥರು ಮಗುವನ್ನು ರಕ್ಷಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಬಾಲಕನು ತನಗಾಗುತ್ತಿರುವ ಚಿತ್ರಹಿಂಸೆ ಬಗ್ಗೆ ಪೊಲೀಸರ ಮುಂದೆ ವಿವರವಾಗಿ ಬಿಚ್ಚಿಟ್ಟಿದ್ದ. ಆರೋಪಿ ಶಿವಮೂರ್ತಿ ವಿರುದ್ಧ ಚಿತ್ರಹಳ್ಳಿ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದಂತೆ ಮಾಹಿತಿ ತಿಳಿದು ಆತಂಕಗೊಂಡಿದ್ದ ಆರೋಪಿ ಶಿವಮೂರ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಪೊಲೀಸರ ಸಮಯ ಪ್ರಜ್ಞೆಯಿಂದ ಆರೋಪಿ ಪ್ರಾಣಾಪಾಯದಿಂದ ಪಾರಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications