ಕೊರೊನಾ ಕೊಟ್ಟ ಕಷ್ಟ; ತಾಯಿ ಉಳಿಸಿಕೊಳ್ಳಲು ಶಿಕ್ಷಕಿಯ ಹೋರಾಟ
ಚಿತ್ರದುರ್ಗ, ಸೆಪ್ಟೆಂಬರ್ 14: ವಾಸಿಸಲು ಸರಿಯಾದ ಸೂರಿಲ್ಲ, ಕೈಯಲ್ಲಿ ಕೆಲಸವಿಲ್ಲ, ಜೀವನ ನಿರ್ವಹಣೆಗೂ ಹೆಣಗಾಟ, ಕ್ಯಾನ್ಸರ್ ಪೀಡಿತ ತಾಯಿಯನ್ನು ಉಳಿಸಿಕೊಳ್ಳಲು ಇವರ ಇನ್ನಿಲ್ಲದ ಹೋರಾಟ... ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗದ ಮಧು ಎಂಬ ಯುವತಿಗೆ ಕೊರೊನಾ ಲಾಕ್ ಡೌನ್ ಕೊಟ್ಟ ಹೊಡೆತ ಜೀವನವನ್ನೇ ಸಂಕಷ್ಟಕ್ಕೆ ದೂಡಿದೆ.
ಕೊರೊನಾ ಹಿನ್ನೆಲೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾದ ಪರಿಣಾಮ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಅರೆಹಳ್ಳಿಯ ನಿವಾಸಿ ಮಧು ಅವರಿಗೆ ಕೆಲಸವಿಲ್ಲದಂತಾಗಿದೆ. ಅನಾರೋಗ್ಯಪೀಡಿತ ತಾಯಿಯ ಜವಾಬ್ದಾರಿಯೂ ಇವರ ಹೆಗಲ ಮೇಲಿದ್ದು, ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಮಧು, ಅವರ ತಾಯಿ, ದೊಡ್ಡಮ್ಮ, ಈ ಮೂವರೂ ಒಂದೇ ಮನೆಯಲ್ಲಿದ್ದು, ಕಷ್ಟದಲ್ಲೇ ಜೀವನ ಸಾಗಿಸುತ್ತಿದ್ದರು. ಇದೀಗ ಕೊರೊನಾ ಪರಿಣಾಮ ಸುಮಾರು ಆರು ತಿಂಗಳಿನಿಂದ ದುಡಿಮೆಯಿಲ್ಲದೇ ಕೈಚೆಲ್ಲಿದ್ದಾರೆ.

ಅತಿಥಿ ಶಿಕ್ಷಕಿಯಾಗಿದ್ದ ಮಧು
ಮಧು ಅವರು ಬಿಎಸ್ಸಿ ಪದವಿ ಮುಗಿಸಿದ್ದು, ಖಾಸಗಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಂಡಿದ್ದಾರೆ. ಶಾಲೆಗಳು ಕೂಡ ಇನ್ನೂ ಪ್ರಾರಂಭವಾಗಿಲ್ಲ. ದುಡಿಯಲು ಬೇರೆ ಯಾವುದೇ ಕೆಲಸವಿಲ್ಲ. ಮತ್ತೊಂದು ಕಡೆ ತಾಯಿ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಮನೆಯಲ್ಲಿ ದುಡಿಯುವವರು ಯಾರೂ ಇಲ್ಲ. ವಾಸಿಸಲು ಯೋಗ್ಯವಾದ ಮನೆಯೂ ಇಲ್ಲ. ಸರ್ಕಾರದಿಂದ ಯಾವುದೇ ಸಹಾಯ ದೊರೆತಿಲ್ಲ. ಈ ಸಂಕಷ್ಟದ ನಡುವೆಯೇ ಮೂವರೂ ಜೀವನ ಸಾಗಿಸಿದ್ದಾರೆ.

ವಾಸಿಸಲು ಮನೆ ಇಲ್ಲ
ವಾಸಕ್ಕೆ ಯೋಗ್ಯವಾದ ಮನೆ ಇಲ್ಲ, ಬೆಳೆದು ತಿನ್ನಲು ಒಂದು ಗೇಣು ಭೂಮಿ ಕೂಡ ಇಲ್ಲ. ಯಾರೋ ತಾತ್ಕಾಲಿಕವಾಗಿ ಸಣ್ಣ ಸೂರು ನೀಡಿದ್ದರು. ಈಗ ಗೋಡೆ ಕುಸಿದು ಮನೆ ಬಿದ್ದಿದೆ. ಮನೆಯ ಸುತ್ತಮುತ್ತಲೂ ಟಾರ್ಪಲ್ ಹೊದಿಸಿಕೊಂಡು ಜೀವನ ನಡೆಸುತ್ತಿದ್ದೇವೆ. ನಿರಾಶ್ರಿತರಾದ ನಾವು ಬೇರೆಯವರ ಜಾಗದಲ್ಲಿ ಬದುಕುತ್ತಿದ್ದೇವೆ. ನಮಗೆ ಯಾರ ಕಡೆಯಿಂದಲೂ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಎರಡು ತಿಂಗಳ ಹಿಂದೆ ನಮ್ಮ ತಾಯಿಯ ಹೆಸರಿಗೆ ಅರೆನಹಳ್ಳಿ ಪಂಚಾಯಿತಿಯಿಂದ ಮನೆ ಕಟ್ಟಿಸಿಕೊಳ್ಳಲು ಜಾಗ ಮಂಜೂರು ಮಾಡಿ ಕೊಟ್ಟಿದ್ದಾರೆ. ಅಮ್ಮನ ಹತ್ತಿರ ಇದ್ದ ಸ್ವಲ್ಪ ದುಡ್ಡಿನಲ್ಲಿ ಅಡಿಪಾಯ ಹಾಕಿದ್ದೆವು. ಆದರೆ ಈಗ ದುಡ್ಡಿಲ್ಲದೆ ಅರ್ಧಕ್ಕೆ ಕೈ ಬಿಡಲಾಗಿದೆ ಎಂದು ಬೇಸರಗೊಂಡರು ಮಧು

"ಕೊರೊನಾದಿಂದ ಕೆಲಸ ಹೋಯ್ತು"
ನನ್ನ ಸಂಬಳದಲ್ಲಿ ಅಮ್ಮನ ಆರೈಕೆ ನಡೆಯುತಿತ್ತು. ಆದರೆ ನನ್ನ ಕೆಲಸ ಹೋಗಿ ಆರೇಳು ತಿಂಗಳು ಕಳೆದಿವೆ. ನಮ್ಮ ಮನೆಯಲ್ಲಿ ದುಡಿಯುವವರು ಯಾರೂ ಇಲ್ಲ. ಅಮ್ಮ ಎರಡು ವರ್ಷಗಳಿಂದ ಕ್ಯಾನ್ಸರ್ ಗೆ ತುತ್ತಾಗಿದ್ದಾರೆ. ಅವರು ಎದ್ದೇಳುವ ಸ್ಥಿತಿಯಲ್ಲಿ ಇಲ್ಲ. ಅವರು ಕುಳಿತಲ್ಲೇ ಎಲ್ಲವು ನಡೆಯಬೇಕಿದೆ. ನಮಗೆ ಬದುಕಲು ಬೇರೆ ಏನಾದರೂ ವ್ಯವಸ್ಥೆ ಮಾಡಿಕೊಡಿ ಎಂದು ತನ್ನ ನೋವು ತೋಡಿಕೊಂಡಿದ್ದಾರೆ ಮಧು.
Recommended Video

ನೆರವಿಗಾಗಿ ಮೊರೆಹೋದ ಕುಟುಂಬ
ಕ್ಯಾನ್ಸರ್ ನಿಂದ ಬಳಲುತ್ತಿರುವ ತಾಯಿಯ ಚಿಕಿತ್ಸೆಗೆ ಹಾಗೂ ಜೀವನ ನಿರ್ವಹಣೆಗೆ ಸಹಾಯ ಮಾಡಿ ಎಂದು ನೆರವು ಕೇಳಿದ್ದಾರೆ ಮಧು. ಸಹಾಯಕ್ಕಾಗಿ ಅಂಗಲಾಚುತ್ತಿರುವ ಈ ಕುಟುಂಬವನ್ನು ನೋಡಿ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳುವರೇ? ಇವರ ಸಂಕಷ್ಟಕ್ಕೆ ಸ್ಥಳೀಯ ಪ್ರತಿನಿಧಿಗಳು ಸ್ಪಂದಿಸುವರೇ? ಕಾದು ನೋಡಬೇಕಿದೆ...
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications