ಹಿರಿಯೂರು: ಲಾರಿ & ಕುರಿ ತುಂಬಿದ್ದ ಅಶೋಕ್ ಲೇಲ್ಯಾಂಡ್ ನಡುವೆ ಭೀಕರ ಅಪಘಾತ-ಸ್ಥಳದಲ್ಲೇ ಇಬ್ಬರು ಸಾವು
ಹಿರಿಯೂರು, ಜೂನ್ 01: ಮುಂದೆ ಚಲಿಸುತ್ತಿದ್ದ ಲಾರಿಗೆ ಕುರಿ ತುಂಬಿದ್ದ ಅಶೋಕ್ ಲೈಲಾಂಡ್ ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದ ಹೊರವಲಯದ ಆರ್.ಕೆ.ಪವರ್ ಜಿನ್ ಬಳಿ ಘಟನೆ ನಡೆದಿದೆ.
ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್(55) ಹಾಗೂ ಬೆಳೆಗೆರೆ ಶಿವಲಿಂಗಪ್ಪ (65) ಮೃತರು ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಚಳ್ಳಕೆರೆಯ ತಾಲೂಕಿನ ತನ್ನ ಗ್ರಾಮದಿಂದ ಹಿರಿಯೂರು ಕುರಿ ಸಂತೆಗೆ ಕುರಿ ವ್ಯಾಪಾರ ಮಾಡಲು ಅಶೋಕ್ ಲೈಲ್ಯಾಂಡ್ ಗಾಡಿಯಲ್ಲಿ ಕುರಿ ತುಂಬಿಕೊಂಡು ಬರುತ್ತಿರುವಾಗ ಮುಂದೆ ಚಲಿಸುತ್ತಿದ್ದ ಲಾರಿಗೆ ಅಶೋಕ್ ಲೈಲಾಂಡ್ ಗಾಡಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಅಸುನೀಗಿದ್ದಾರೆ.
ಇನ್ನು ಅಪಘಾತದ ರಭಸಕ್ಕೆ ಅಶೋಕ್ ಲೈಲ್ಯಾಂಡ್ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಹಳ್ಳಕ್ಕೆ ನುಗ್ಗಿದ ಪ್ರವಾಸಿಗರ ಕಾರು: ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಇಳಿದ ಘಟನೆ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗೇಟ್ನಲ್ಲಿ ನಡೆದಿದ್ದು, ದಂಪತಿ ಸೇರಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ ನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ಮೂಲದ ಪೀಯುಶ್ ಸಿಂಘಲ್, ಪತ್ನಿ ರಾಧಿಕಾ ಹಾಗೂ ಮಕ್ಕಳಾದ ಅದಿಲ್ ಮತ್ತು ಮಾನ್ಯ ಎಂಬವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಊಟಿ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಾಸ್ ಆಗುವ ವೇಳೆ ಕಾರು ರಸ್ತೆ ಬದಿಯ 10 ಅಡಿ ಆಳದ ಹಳ್ಳಕ್ಕೆ ಇಳಿದಿ ಪರಿಣಾಮ ನಾಲ್ವರಿಗೆ ಗಂಭೀರ ಪೆಟ್ಟುಗಳಾಗಿದೆ. ಅಪಘಾತ ಮಾಹಿತಿ ತಿಳಿಯುತ್ತಿದ್ದಂತೆ ಹೈವೆ ಗಸ್ತು ಸಿಬ್ಬಂದಿ ನಾಗೇಂದ್ರ ಹಾಗೂ ಖಾಸಗಿ ಆಂಬುಲೆನ್ಸ್ ಚಾಲಕ ರಾಜೀವ್ ಕೂಡಲೇ ಸ್ಥಳಕ್ಕೆ ಧಾವಿಸಿ ಪ್ರಥಮ ಚಿಕಿತ್ಸೆ ಕೊಟ್ಟಿದ್ದಾರೆ. ಇನ್ನು ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.












Click it and Unblock the Notifications