ಪಠ್ಯ ಪುಸ್ತಕ ಪರಿಷ್ಕರಣೆ; ಸರ್ಕಾರದ ವಿರುದ್ಧ ರಮೇಶ್ ಕುಮಾರ್ ಗರಂ
ಚಿತ್ರದುರ್ಗ, ಜೂ 25: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಮುಂದುವರೆದಿದೆ. "ಎಳೆ ವಯಸ್ಸಿನ ಮಕ್ಕಳಿಗೆ ವಿಷ ಉಣ್ಣಿಸಲಾಗುತ್ತಿದೆ" ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ದಾರ್ಶನಿಕರಿಗೆ ಬಿಜೆಪಿ ಅಪಮಾನ ಮಾಡುತ್ತಿದೆ ಎಂಬ ಪ್ರಶ್ನೆಗೆ ಉತ್ತರ ನೀಡಿದರು.
"ಯಾವ ಮಾನವತಾವಾದಿಗಳು ಮಾರ್ಪಡಿಸಿರುವುದು. ಬುದ್ಧ, ಬಸವಣ್ಣ, ಅಂಬೇಡ್ಕರ್ ವಿಚಾರ ಬೇಡ ಅಂದರೆ ಮಕ್ಕಳಿಗೆ ಇನ್ನೇನು ಹೇಳುವುದು. ಜನ ಮೌನವಾಗಿದ್ದಾಗ ಏನು ಮಾಡಲು ಸಾಧ್ಯವಿಲ್ಲ. ಪಠ್ಯ ಪುಸ್ತಕ ಪರಿಷ್ಕರಣೆ ವಿರುದ್ಧ ಜನರು ಪ್ರತಿಭಟಿಸಿದಾಗ ಸರ್ಕಾರಗಳಿಗೆ ಭಯ ಇರುತ್ತದೆ" ಎಂದರು.

"ರೋಹಿತ್ ಚಕ್ರತೀರ್ಥರನ್ನು ಪರಿಷ್ಕರಣಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವುದು ನೋವಿನ ಸಂಗತಿ. ಮಹಾನ್ ಚೇತನ ಕುವೆಂಪು ಬಗ್ಗೆ ಅಗೌರವ ತೋರಿಸಿರುವ ಈ ವಿಕೃತರು ಸಮಿತಿಯ ಅಧ್ಯಕ್ಷರಾಗಿರುವುದು ಬೇಸರದ ವಿಷಯ. ಸಂವಿಧಾನದ ಆಶಯಗಳನ್ನು ಗೌರವಿಸುವ ದೃಷ್ಠಿಯಿಂದ ಮುಖ್ಯಮಂತ್ರಿಗಳು ಇತಿಶ್ರೀ ಹಾಡಬೇಕಿದೆ" ಎಂದು ತಿಳಿಸಿದರು.

ಆಪರೇಷನ್ ಕಮಲ; ಸಮ್ಮಿಶ್ರ ಸರ್ಕಾರ ಇರುವ ಕಡೆಗಳಲ್ಲಿ ಬಿಜೆಪಿ ವಾಮಮಾರ್ಗದಿಂದ ಅಧಿಕಾರಕ್ಕೆ ಬರುತ್ತಿರುವ ಬಗ್ಗೆ ಮಾತನಾಡಿದ ರಮೇಶ್ ಕುಮಾರ್ ಅವರು "ಕರ್ನಾಟಕ ಆಯ್ತು, ಮಧ್ಯಪ್ರದೇಶ ಆಯ್ತು ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ವಾಮಮಾರ್ಗ ಹಿಡಿದು ಆಪರೇಷನ್ ಕಮಲ ಮಾಡಿ ಸರ್ಕಾರ ಮಾಡಲು ಮುಂದಾಗುತ್ತಿದೆ" ಎಂದರು.
"ಇದಕ್ಕೆ ನಾವೇನು ಹೊಸದಾಗಿ ಹೇಳಬೇಕಾದದ್ದು ಇರುವುದಿಲ್ಲ. ಜನರೇ ಸುಮ್ಮನಿರುವಾಗ ನಾವೇನು ಹೇಳುವುದು?. ಜನ ಹೇಳಬೇಕು, ಜನರು ಪ್ರತಿಕ್ರಿಯೆ ನೀಡಬೇಕು. ನಾವು ಹೇಳಿದರೆ ಪಕ್ಷದ ಅಭಿಪ್ರಾಯವಾಗುತ್ತದೆ. ಸಹಜವಾಗಿ ನಾವು ಬೇರೆ ಪಕ್ಷದವರು ಸರಿಯಿಲ್ಲ ಎಂದು ಹೇಳಬಹುದು" ಎಂದು ತಿಳಿಸಿದರು.

"ಆದರೆ ಇಂತಹ ಬೆಳವಣಿಗೆಗೆ ಜನರೇ ಇದಕ್ಕೆ ಪ್ರತಿಕ್ರಿಯಿಸಿದಿದ್ದಾಗ ಏನು ಮಾಡುವುದು?. ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯವೇ ಅಂತಿಮವಾಗಿದ್ದಾಗ ಎಲ್ಲವನ್ನೂ ಜನರೇ ಹೇಳಬೇಕಾಗುತ್ತದೆ" ಎಂದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications