ಪಠ್ಯ ಪುಸ್ತಕ ಪರಿಷ್ಕರಣೆ; ಸರ್ಕಾರದ ವಿರುದ್ಧ ರಮೇಶ್ ಕುಮಾರ್ ಗರಂ
ಚಿತ್ರದುರ್ಗ, ಜೂ 25: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಮುಂದುವರೆದಿದೆ. "ಎಳೆ ವಯಸ್ಸಿನ ಮಕ್ಕಳಿಗೆ ವಿಷ ಉಣ್ಣಿಸಲಾಗುತ್ತಿದೆ" ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ದಾರ್ಶನಿಕರಿಗೆ ಬಿಜೆಪಿ ಅಪಮಾನ ಮಾಡುತ್ತಿದೆ ಎಂಬ ಪ್ರಶ್ನೆಗೆ ಉತ್ತರ ನೀಡಿದರು.
"ಯಾವ ಮಾನವತಾವಾದಿಗಳು ಮಾರ್ಪಡಿಸಿರುವುದು. ಬುದ್ಧ, ಬಸವಣ್ಣ, ಅಂಬೇಡ್ಕರ್ ವಿಚಾರ ಬೇಡ ಅಂದರೆ ಮಕ್ಕಳಿಗೆ ಇನ್ನೇನು ಹೇಳುವುದು. ಜನ ಮೌನವಾಗಿದ್ದಾಗ ಏನು ಮಾಡಲು ಸಾಧ್ಯವಿಲ್ಲ. ಪಠ್ಯ ಪುಸ್ತಕ ಪರಿಷ್ಕರಣೆ ವಿರುದ್ಧ ಜನರು ಪ್ರತಿಭಟಿಸಿದಾಗ ಸರ್ಕಾರಗಳಿಗೆ ಭಯ ಇರುತ್ತದೆ" ಎಂದರು.

"ರೋಹಿತ್ ಚಕ್ರತೀರ್ಥರನ್ನು ಪರಿಷ್ಕರಣಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವುದು ನೋವಿನ ಸಂಗತಿ. ಮಹಾನ್ ಚೇತನ ಕುವೆಂಪು ಬಗ್ಗೆ ಅಗೌರವ ತೋರಿಸಿರುವ ಈ ವಿಕೃತರು ಸಮಿತಿಯ ಅಧ್ಯಕ್ಷರಾಗಿರುವುದು ಬೇಸರದ ವಿಷಯ. ಸಂವಿಧಾನದ ಆಶಯಗಳನ್ನು ಗೌರವಿಸುವ ದೃಷ್ಠಿಯಿಂದ ಮುಖ್ಯಮಂತ್ರಿಗಳು ಇತಿಶ್ರೀ ಹಾಡಬೇಕಿದೆ" ಎಂದು ತಿಳಿಸಿದರು.

ಆಪರೇಷನ್ ಕಮಲ; ಸಮ್ಮಿಶ್ರ ಸರ್ಕಾರ ಇರುವ ಕಡೆಗಳಲ್ಲಿ ಬಿಜೆಪಿ ವಾಮಮಾರ್ಗದಿಂದ ಅಧಿಕಾರಕ್ಕೆ ಬರುತ್ತಿರುವ ಬಗ್ಗೆ ಮಾತನಾಡಿದ ರಮೇಶ್ ಕುಮಾರ್ ಅವರು "ಕರ್ನಾಟಕ ಆಯ್ತು, ಮಧ್ಯಪ್ರದೇಶ ಆಯ್ತು ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ವಾಮಮಾರ್ಗ ಹಿಡಿದು ಆಪರೇಷನ್ ಕಮಲ ಮಾಡಿ ಸರ್ಕಾರ ಮಾಡಲು ಮುಂದಾಗುತ್ತಿದೆ" ಎಂದರು.
"ಇದಕ್ಕೆ ನಾವೇನು ಹೊಸದಾಗಿ ಹೇಳಬೇಕಾದದ್ದು ಇರುವುದಿಲ್ಲ. ಜನರೇ ಸುಮ್ಮನಿರುವಾಗ ನಾವೇನು ಹೇಳುವುದು?. ಜನ ಹೇಳಬೇಕು, ಜನರು ಪ್ರತಿಕ್ರಿಯೆ ನೀಡಬೇಕು. ನಾವು ಹೇಳಿದರೆ ಪಕ್ಷದ ಅಭಿಪ್ರಾಯವಾಗುತ್ತದೆ. ಸಹಜವಾಗಿ ನಾವು ಬೇರೆ ಪಕ್ಷದವರು ಸರಿಯಿಲ್ಲ ಎಂದು ಹೇಳಬಹುದು" ಎಂದು ತಿಳಿಸಿದರು.

"ಆದರೆ ಇಂತಹ ಬೆಳವಣಿಗೆಗೆ ಜನರೇ ಇದಕ್ಕೆ ಪ್ರತಿಕ್ರಿಯಿಸಿದಿದ್ದಾಗ ಏನು ಮಾಡುವುದು?. ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯವೇ ಅಂತಿಮವಾಗಿದ್ದಾಗ ಎಲ್ಲವನ್ನೂ ಜನರೇ ಹೇಳಬೇಕಾಗುತ್ತದೆ" ಎಂದರು.
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications