ಪಠ್ಯ ಪುಸ್ತಕಗಳಲ್ಲಿ ರಾಜಕೀಯ ಸೇರಿಸಬೇಡಿ: ಸಲೀಂ ಅಹ್ಮದ್
ಚಿತ್ರದುರ್ಗ, ಮೇ 29: "ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಸರ್ಕಾರ ಅಭಿವೃದ್ಧಿ, ಬಡತನ, ಯುವಕರಿಗೆ ಉದ್ಯೋಗ ನೀಡುವ ಬಗ್ಗೆ ಚಿಂತನೆ ಮಾಡಬೇಕು" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸರ್ಕಾರವನ್ನು ಒತ್ತಾಯಿಸಿದರು.
ಚಿತ್ರದುರ್ಗದ ಹಿರಿಯೂರಿನಲ್ಲಿ ಮಾತನಾಡಿದ ಅವರು, "ಈಗಾಗಲೇ ಶಾಲಾ ಮಕ್ಕಳ ಪಠ್ಯಪುಸ್ತಕದ ಪರಿಷ್ಕರಣೆ ನಡೆಯುತ್ತಿದೆ. ಭಗತ್ ಸಿಂಗ್, ನಾರಾಯಣ ಗುರು, ಟಿಪ್ಪು ಸುಲ್ತಾನ್ ಇರಬಹುದು ಪಠ್ಯದ ಬಗ್ಗೆ ಚರ್ಚೆ ನಡೆಯುತ್ತಿದೆ. ಮಕ್ಕಳ ಪಠ್ಯಪುಸ್ತಕದಲ್ಲಿ ರಾಜಕೀಯ ವಿಷಯಗಳನ್ನು ಬೆರೆಸಬಾರದು" ಎಂದರು.
ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, "ಹೈಕೋರ್ಟ್ ತೀರ್ಪನ್ನು ನಾವೆಲ್ಲರೂ ಗೌರವಿಸಬೇಕು" ಎಂದು ಹೇಳಿದರು.

ಲೂಟಿ ಸರ್ಕಾರ; "ರಾಜ್ಯದ ಆಡಳಿತದ ಚುಕ್ಕಾಣಿಯಲ್ಲಿರುವ ಬಿಜೆಪಿ ಸರ್ಕಾರ ಲೂಟಿ ಸರ್ಕಾರವಾಗಿದೆ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಚುನಾವಣೆ ನಡೆದರೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಬಿಜೆಪಿ ಸೋಲಿನ ಭಯದಿಂದ ಕೆಲವು ಸಂಘಟನೆಗಳ ಮೂಲಕ ಕೋಮು ಭಾವನೆ ಕೆರಳಿಸಲು ಪ್ರೇರಣೆ ನೀಡುತ್ತಿದೆ" ಎಂದು ಆರೋಪಿಸಿದರು.
"ಕೋಮು ಭಾವನೆ ಕೆರಳಿಸುವ ಪ್ರಯತ್ನಕ್ಕೆ ರಾಜ್ಯದ ಜನರು ಬೆಂಬಲ ನೀಡುವುದಿಲ್ಲ. ಸರ್ವಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಅವರ ಮಾತಿನಂತೆ ನಾಡಿನಲ್ಲಿ ಕೋಮು ಸಾಮರಸ್ಯ ಕದಡಲು, ಯಾವುದೇ ಸಹಕಾರ ನೀಡುವುದಿಲ್ಲ" ಎಂದರು.

ಹೊರಟ್ಟಿ ಬಿಜೆಪಿ ಸೇರಿರುವುದು ದುರ್ದೈವ; "7 ಬಾರಿ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆಲುವು ಕಂಡು ಈ ಬಾರಿ ಸೋಲಿನ ಭಯದಿಂದ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶೇ 40 ಕಮೀಷನ್ ಸರ್ಕಾರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಹೊರಟ್ಟಿ ಬಿಜೆಪಿ ಪಕ್ಷ ಯಾಕೆ ಸೇರಿಕೊಂಡರು?" ಎಂದು ಸಲೀಂ ಅಹ್ಮದ್ ಪ್ರಶ್ನಿಸಿದರು.
"ಅಧಿಕಾರ ಹಾಗೂ ಖುರ್ಚಿಯ ಆಸೆಯಿಂದ ಬಿಜೆಪಿಗೆ ಸೇರಿದ್ದಾರೆ. ಬೆಲೆ ಏರಿಕೆ, ದುರಾಡಳಿತ, ಭ್ರಷ್ಟಾಚಾರ ತುಂಬಿದ ಪಕ್ಷಕ್ಕೆ ಬಸವರಾಜ ಹೊರಟ್ಟಿ ಸೇರಿರುವುದು ದುರ್ದೈವ. ಹಾವೇರಿ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಗೆಲುವು ಖಚಿತ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ -
ಡೂನ್ ಲಿಟ್ ಫೆಸ್ಟ್ 2026: ಸಾಹಿತಿ -ಚಿಂತಕರ ಸಮಾಗಮ; ಸಾಹಿತ್ಯ, ಸಿನಿಮಾ, ಇತಿಹಾಸ, AI ಚರ್ಚೆಗಳಿಗೆ ಸಾಕ್ಷಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ








Click it and Unblock the Notifications