ಚಿತ್ರದುರ್ಗದ ಕಾದಂಬರಿಕಾರನ ಮೇಲೆ ಕೋವಿಡ್-19 ಲಸಿಕೆ ಪ್ರಯೋಗ
ಚಿತ್ರದುರ್ಗ, ಆಗಸ್ಟ್ 18: ಪ್ರಪಂಚದಾದ್ಯಂತ ಮಹಾಮಾರಿ ಕೊರೊನಾ ವೈರಸ್ ಆರ್ಭಟ ಮುಂದುವರೆದಿದ್ದು, ಕೊರೊನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಲಸಿಕೆ ಪ್ರಯೋಗ ಭರದಿಂದ ಸಾಗುತ್ತಿದೆ.
Recommended Video
ಕೊರೊನಾ ವೈರಸ್ ಗೆ ಭಾರತದಲ್ಲಿ ಸಹ ವ್ಯಾಕ್ಸಿನ್ ಕಂಡುಹಿಡಿಯುವ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಕಾದಂಬರಿಕಾರ ಡಿ.ಸಿ ಪಾಣಿ ಅವರ ಮೇಲೆ ವ್ಯಾಕ್ಸಿನ್ ಪ್ರಯೋಗ ಮಾಡಲಾಗಿದೆ. ಬೆಳಗಾವಿಯ ಜೀವನ್ ರೇಖಾ ಆಸ್ಪತ್ರೆಯಲ್ಲಿ ಮೊದಲನೇ ಹಂತದ ಪ್ರಾಯೋಗಿಕ ಲಸಿಕೆಯನ್ನು ಡಿ.ಸಿ ಪಾಣಿಯವರು ಸ್ವಯಂ ಪ್ರೇರಿತರಾಗಿ ಈ ಲಸಿಕೆ ಪಡೆದುಕೊಂಡು ಬಂದಿದ್ದಾರೆ.
ಡಿ.ಸಿ ಪಾಣಿಯವರಿಗೆ ಡಾ.ಪಾರಿತೋಷ್ ವಿ. ದೇಸಾಯಿ ಅವರು ವಿಶೇಷ ಫಾರ್ಮಜೆಟ್ ಮೆಷಿನ್ ಮೂಲಕ ಪ್ರಾಯೋಗಿಕ ಲಸಿಕೆಯನ್ನು ನೀಡಿರುವುದು ವಿಶೇಷವಾಗಿದೆ. ಈ ಕಾದಂಬರಿಕಾರನ ಮೇಲೆ ಮಾಡಿರುವ ಪ್ರಯೋಗ ಯಶಸ್ವಿಯಾಗುತ್ತಾ ನಡೆಯುತ್ತಿದೆ ಎನ್ನಬಹುದು.

ಡಿ.ಸಿ ಪಾಣಿಯವರು ಆಗಸ್ಟ್ 03 ರಂದು ಪಾಲ್ಗೊಂಡಿದ್ದರು
ಹೈದರಾಬಾದ್ ನ ಭಾರತ ಬಯೋಟೆಕ್ ಕೋವ್ಯಾಕ್ಸಿನ್ ಸಂಸ್ಥೆ ಈ ಲಸಿಕೆ ಸಿದ್ಧಪಡಿಸಿದ್ದು, ದೇಶದ ವಿವಿಧ ಭಾಗಗಳಲ್ಲಿ ಪ್ರಯೋಗ ನಡೆಸುತ್ತಿದೆ. ಇದರ ಭಾಗವಾಗಿ ರಾಜ್ಯದಲ್ಲಿ ಸಹ ಪ್ರಯೋಗ ನಡೆಸಿದೆ. ಡಿ.ಸಿ ಪಾಣಿಯವರು ಆಗಸ್ಟ್ 03 ರಂದು ಮೊದಲ ಹಂತದ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ನಂತರ ಜುಲೈ 23 ಹಾಗೂ ಆಗಸ್ಟ್ 01 ರಂದು ಬೆಳಗಾವಿಯಿಂದ ಕರೆ ಬಂದಿದ್ದು, ರಕ್ತದೊತ್ತಡ, ಹೃದಯ ಬಡಿತ, ಮೂತ್ರ ಹಾಗೂ ರಕ್ತಪರೀಕ್ಷೆ ಮಾಡಿದರು. ಸಂಪೂರ್ಣವಾಗಿ ಆರೋಗ್ಯ ಇದ್ದರಿಂದ ಟ್ರಯಲ್ ಗೆ ಆಯ್ಕೆ ಆಗುವ ಮೂಲಕ ಲಸಿಕೆ ಪಡೆದುಕೊಂಡು ಯಶಸ್ವಿಯಾಗಿ ಹೊರ ಬಂದಿದ್ದಾರೆ.

ಲಸಿಕೆ ಪಡೆಯುವಾಗ ನನಗೆ ಯಾವುದೇ ಭಯವಾಗಲಿಲ್ಲ
ವ್ಯಾಕ್ಸಿನ್ ಪ್ರಯೋಗಕ್ಕೆ ಒಳಗಾಗಿರುವ ಡಿ.ಸಿ ಪಾಣಿಯವರು ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ದೇಶದಲ್ಲೇ ಲಸಿಕೆ ಉತ್ಪಾದನೆಯಾಗುವ ಮೂಲಕ ಶೀಘ್ರದಲ್ಲೇ ಕೋವಿಡ್ ಅಂತ್ಯವಾಗಲಿ ಎಂಬ ಉದ್ದೇಶದಿಂದ ಈ ಪ್ರಯೋಗಕ್ಕೆ ಒಳಗಾಗಿದ್ದೇನೆ. ಲಸಿಕೆ ಪಡೆಯುವಾಗ ನನಗೆ ಯಾವುದೇ ಭಯವಾಗಲಿಲ್ಲ ಎಂದರು.

ತಡವಾದರೂ ನಮ್ಮ ದೇಶದಲ್ಲೇ ಕೊರೊನಾ ಲಸಿಕೆ ಸಿಗುತ್ತದೆ
ಅಲ್ಲದೆ ಈ ಪ್ರಾಯೋಗಿಕ ಲಸಿಕೆ ಯಶಸ್ವಿಯಾದರೆ ನಮ್ಮ ದೇಶಕ್ಕೆ ಬಂದಿರುವ ಮಹಾಮಾರಿ ಕೊರೊನಾ ವೈರಸ್ ಕಂಟಕ ದೂರವಾಗಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಒಂದೆರಡು ತಿಂಗಳು ತಡವಾದರೂ ಸಹ ನಮ್ಮ ದೇಶದಲ್ಲೇ ಕೊರೊನಾ ಲಸಿಕೆ ಸಿಗುತ್ತದೆ. ಯಾರೂ ಕೂಡ ಕೊರೊನಾ ಸೋಂಕಿಗೆ ಭಯಪಡುವ ಅಗತ್ಯವಿಲ್ಲ, ಧೈರ್ಯವಾಗಿ ಎದುರಿಸಲು ಸಿದ್ಧವಾಗಿರಬೇಕು ಎಂದು ತಿಳಿಸಿದರು.

ಲಸಿಕೆ ಯಶಸ್ವಿಯಾಗಿ ಪ್ರಯೋಗವಾಗಲಿದೆ
61 ವರ್ಷದ ನನ್ನ ಮೇಲೆ ಪ್ರಯೋಗ ನಡೆದಿದ್ದು, ನಾನು ಆರೋಗ್ಯವಾಗಿ ಇದ್ದೇನೆ. ಲಸಿಕೆ ಯಶಸ್ವಿಯಾಗಿ ಪ್ರಯೋಗವಾಗಲಿದೆ. ವಯಸ್ಸಾದ ನನ್ನ ಮೇಲೆ ಪ್ರಯೋಗ ನಡೆದಿದೆ, ಗಟ್ಟಿಮುಟ್ಟಾಗಿರುವ ಯುವಕರು ಸಹ ಧೈರ್ಯವಾಗಿ ಎದುರಿಸಲು ಸಿದ್ಧವಾಗಿರಬೇಕು ಯಾರೂ ಸಹ ಧೃತಿಗೆಡುವಂತಿಲ್ಲ ಎಂದು ಕೊರೊನಾ ಸೋಂಕಿತರಿಗೆ ಸಂದೇಶ ನೀಡುವ ಮೂಲಕ ಅಭಿಪ್ರಾಯಪಟ್ಟರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications