ಐಟಿ ದಾಳಿ ಅನುಮಾನ ಹುಟ್ಟಿಸಿದೆ : ನ್ಯಾ. ಸಂತೋಷ್ ಹೆಗ್ಡೆ
ಚಿತ್ರದುರ್ಗ, ಆಗಸ್ಟ್ 3: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ "ಮಾಹಿತಿ ಇದ್ದಿದ್ದರೆ ಈ ಹಿಂದೆಯೇ ದಾಳಿ ಮಾಡಬೇಕಾಗಿತ್ತು. ಆದರೆ, ಈ ಸಂದರ್ಭದಲ್ಲಿ ದಾಳಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದು ಬೇರೆಯದೇ ರೀತಿಯ ಚರ್ಚೆಗೆ ಗ್ರಾಸವಾಗಿದೆ," ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಐಟಿ ದಾಳಿಯನ್ನು ವಿಶ್ಲೇಷಿಸಿದ್ದಾರೆ.
ಒಂದೊಮ್ಮೆಐ.ಟಿ ಅಧಿಕಾರಿಗಳು ಮಾಹಿತಿ ಇದ್ದು ದಾಳಿ ನಡೆಸಿದರೆ ಅದರಲ್ಲಿ ತಪ್ಪಿಲ್ಲ. ದಾಳಿ ವೇಳೆ ಕೋಟ್ಯಂತರ ರೂಪಾಯಿ ಹಣ ಸಿಕ್ಕಿದೆ. ಇದನ್ನು ನೋಡಿದರೆ ಅಧಿಕಾರಿಗಳು ಅಧಿಕೃತ ಮಾಹಿತಿಯೊಂದಿಗೇ ದಾಳಿ ನಡೆಸಿರಬಹುದು ಎಂದೂ ಸಂತೋಷ್ ಹೆಗ್ಡೆ ಡಿಕೆ ಶಿವಕುಮಾರ್ ಮೇಲಿನ ಐಟಿ ದಾಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಜಕೀಯ ಸಂಸ್ಕೃತಿ ವಿರುದ್ಧವೂ ಕಿಡಿಕಾರಿದರು. ಇವತ್ತುಶಾಸಕರ ಖರೀದಿ ಟ್ರೆಂಡ್ ಆಗಿದೆ. ಈ ರೀತಿಯ ಸಂಸ್ಕೃತಿ ಹುಟ್ಟುಹಾಕಿದವರು ಬಿಜೆಪಿಯವರು. ಇದನ್ನು ಕಾಂಗ್ರೆಸ್ ನವರು ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.
"ನಾನು ಲೋಕಾಯುಕ್ತ ನ್ಯಾಯಮೂರ್ತಿಯಾಗಿದ್ದಾಗ ಹಗರಣಗಳ ವರದಿ ಸಿದ್ಧಪಡಿಸಿದ್ದೆ. ಇದರಲ್ಲಿ ಮೂವರು ಮುಖ್ಯಮಂತ್ರಿಗಳು ಹಾಗೂ ಒಂಬತ್ತು ಸಚಿವರ ಹೆಸರುಗಳಿತ್ತು. ಆದರೆ, ಇದರ ಬಗ್ಗೆ ಸೂಕ್ತ ತನಿಖೆ ನಡೆಯಲೇ ಇಲ್ಲ' ಎಂದು ಅವರಯ ಇದೇ ಸಂದರ್ಭದಲ್ಲಿ ವಿಷಾದ ವ್ಯಕ್ತಪಡಿಸಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications