ಮೊಳಕಾಲ್ಮೂರು: ಶ್ರೀರಾಮುಲು ವಿರುದ್ಧ ಆಪ್ತರಿಂದಲೇ ಬಂಡಾಯ
ಮೊಳಕಾಲ್ಮೂರು, ಏಪ್ರಿಲ್ 09: ಕರ್ನಾಟಕ ವಿಧಾನಸಭೆ ಚುನಾವಣೆ 2018ಗಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) 73 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆ
'ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ. ಕಾಲಕಾಲಕ್ಕೆ ತಕ್ಕಂತೆ ಬದಲಾವಣೆ ಅಗತ್ಯ' ಎಂಬ ಮಾತಿದೆ. ಸದ್ಯಕ್ಕೆ ಬಡವರ, ಶ್ರಮಿಕರ ಮುಖಂಡ ಬಿ. ಶ್ರೀರಾಮುಲುಗೆ ತಮ್ಮ ಆಪ್ತರಿಂದಲೇ ಬಂಡಾಯ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ.
ಮೊಳಕಾಲ್ಮೂರು ಕ್ಷೇತ್ರದಿಂದ ಸಂಸದ ಶ್ರೀರಾಮುಲು ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಈ ಕ್ಷೇತ್ರ ಹಾಲಿ ಶಾಸಕ ಬಿಎಸ್ ಆರ್ ಕಾಂಗ್ರೆಸ್ ನ ಎಸ್ ತಿಪ್ಪೇಸ್ವಾಮಿ ಮುನಿಸಿಕೊಂಡಿದ್ದಾರೆ.
ಟಿಕೆಟ್ ತಪ್ಪಿದ ಸುದ್ದಿ ಹಬ್ಬುತ್ತಿದ್ದಂತೆ ತಿಪ್ಪೇಸಾಮಿ ಅವರ ಸ್ವಗ್ರಾಮ ನೇರಲಗುಂಟೆಯಲ್ಲಿ ಬೆಂಬಲಿಗರು ಸಭೆ ನಡೆಸಿದ್ದಾರೆ. ಸೋಮವಾರದ ಅಂತ್ಯಕ್ಕೆ ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ.
ಬಿಎಸ್ ಆರ್ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಿದ್ದರಿಂದಾಗಿ, ಅವರೀಗ ಬಿಜೆಪಿ ಬೆಂಬಲಿತ ಶಾಸಕರಷ್ಟೆ. ಹಾಗಾಗಿ, ಸರಿಯಾದ ಅನುದಾನವಿಲ್ಲದೆ ಕ್ಷೇತ್ರಕ್ಕೆ ಏನನ್ನೂ ಮಾಡಿಲ್ಲ ಎನ್ನಲಾಗುತ್ತಿದೆ. ಇದು ಅರ್ಥವಾಗದ ಜನತೆ ಇವರ ಬಗ್ಗೆ ಕೊಂಚ ಅಸಮಾಧಾನ ಹೊಂದಿದ್ದಾರೆ ಎನ್ನಲಾಗುತ್ತಿದೆ.

ಎಸ್. ತಿಪ್ಪೇಸ್ವಾಮಿ ಟಿಕೆಟ್ ಕೈತಪ್ಪಿದ್ದೇಕೆ?
ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೂ ಬಿಎಸ್ಆರ್ ಕಾಂಗ್ರಸ್ ನ ಎಸ್. ತಿಪ್ಪೇಸ್ವಾಮಿ ನಂತರ ಬಿಜೆಪಿ ಸೇರಬೇಕಾಯಿತು. ಈ ಬಾರಿ ಟಿಕೆಟ್ ಪಡೆಯುವುದೇ ಅನುಮಾನ ಎಂಬ ಸುದ್ದಿ ಅನೇಕ ತಿಂಗಳುಗಳಿಂದ ಹರಿದಾಡುತ್ತಲೇ ಇತ್ತು.
ಬಳ್ಳಾರಿ ಮಾಜಿ ಸಂಸದೆ ಜೆ. ಶಾಂತ ಬಿಜೆಪಿಯಿಂದ ಸ್ಪರ್ಧೆ ಸಾಧ್ಯತೆ ಬಗ್ಗೆ ಕೇಳಿ ಬಂದಿತ್ತು. ನಾಯಕ ಜನಾಂಗದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಬಳ್ಳಾರಿಯಿಂದ ಬಿ. ಶ್ರೀರಾಮುಲುಗೆ ಇಲ್ಲಿಂದ ಸ್ಪರ್ಧಿಸಿ ಎಂದು ಸೂಚಿಸಿದೆ.

2013 ಮತಗಳಿಕೆ. ಫಲಿತಾಂಶ
ಬಿಎಸ್ಆರ್ ಕಾಂಗ್ರೆಸ್ : ಎಸ್ ತಿಪ್ಪೇಸ್ವಾಮಿ 76827
ಕಾಂಗ್ರೆಸ್ ಎನ್.ವೈ ಗೋಪಾಲಕೃಷ್ಣ 69658
ಜೆಡಿಎಸ್ ನ ಡಾ. ಒಬಣ್ಣ ಪೂಜಾರ್ 4226 ಗಳಿಸಿ ಮೂರನೇ ಸ್ಥಾನ ಗಳಿಸಿದರೆ, ದಾಸರಿ ಕೀರ್ತಿ ಕುಮಾರ್ ಬಿಜೆಪಿಯಿಂದ ಸ್ಪರ್ಧಿಸಿ ಗಳಿಸಿದ್ದು 3221 ಮತಗಳು, ಕೆಜೆಪಿಯಿಂದ ಸ್ಪರ್ಧಿಸಿದ್ದ ದ್ರಾಕ್ಷಾಯಣ್ಣ 1826 ಮತಗಳನ್ನು ಗಳಿಸಿದ್ದರು. ಶೇ 79.41ರಷ್ಟು ಮತದಾನವಾಗಿತ್ತು. ಶೇ 4.36ರಷ್ಟು ಮತ ಗಳಿಸಿ ಎಸ್ ತಿಪ್ಪೇಸ್ವಾಮಿ ಗೆಲುವು ಸಾಧಿಸಿದ್ದರು.

ಟಿಕೆಟ್ ಆಕಾಂಕ್ಷಿಗಳು
ಕಾಂಗ್ರೆಸ್ : ಎನ್.ವೈ ಗೋಪಾಲಕೃಷ್ಣ(ಕಳೆದ ಬಾರಿ ಶೇ 4.63 (7163 ಮತಗಳು) ಅಂತರದಿಂದ ಸೋಲು ಕಂಡಿದ್ದರು, ನಟ ಶಶಿಕುಮಾರ್ ಸಂಸದರಾಗಿ ಅನುಭವ ಹೊಂದಿದ್ದು, ಅಸೆಂಬ್ಲಿಗೆ ಪ್ರವೇಶ ಬಯಸಿದ್ದಾರೆ, ಯೋಗೀಶ್ ಬಾಬು, ಕರಣ್ ಬೋರಯ್ಯ
ಬಿಜೆಪಿ : ಎಸ್, ತಿಪ್ಪೇಸ್ವಾಮಿ, ಸಂಸದರಾಗಿ ಅನುಭವವುಳ್ಳ ಜೆ.ಶಾಂತಾ ಅವರಿಗೆ ಬಳ್ಳಾರಿ ಬದಲಿಗೆ ಇಲ್ಲಿ ಟಿಕೆಟ್ ಸಿಗುವ ಬಗ್ಗೆ ಚರ್ಚೆ ನಡೆದಿತ್ತು, ಪ್ರಭಾಕರ ಮ್ಯಾಸನಾಯಕ
ಜೆಡಿಎಸ್ : ಪಟೇಲ್ ಜಿ.ಎಂ ತಿಪ್ಪೇಸ್ವಾಮಿ

ಬಿಜೆಪಿ ಬೆಂಬಲಿತ ಶಾಸಕ ತಿಪ್ಪೇಸ್ವಾಮಿ
ಬಿಎಸ್ ಆರ್ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಿದ್ದರಿಂದಾಗಿ, ಅವರೀಗ ಬಿಜೆಪಿ ಬೆಂಬಲಿತ ಶಾಸಕರಷ್ಟೆ. ಹಾಗಾಗಿ, ಸರಿಯಾದ ಅನುದಾನವಿಲ್ಲದೆ ಕ್ಷೇತ್ರಕ್ಕೆ ಏನನ್ನೂ ಮಾಡಿಲ್ಲ ಎನ್ನಲಾಗುತ್ತಿದೆ. ಇದು ಅರ್ಥವಾಗದ ಜನತೆ ಇವರ ಬಗ್ಗೆ ಕೊಂಚ ಅಸಮಾಧಾನ ಹೊಂದಿದ್ದಾರೆ ಎನ್ನಲಾಗುತ್ತಿದೆ. ಬಿಎಸ್ ಆರ್ ಕಾಂಗ್ರೆಸ್ ನಿಂದ ಸ್ಪರ್ಧಿಸಿ, ಶ್ರೀರಾಮುಲು ಬೆನ್ನ ಹಿಂದಿದ್ದ ತಿಪ್ಪೇಸ್ವಾಮಿ ಅವರು ಇಂದು ಶ್ರೀರಾಮುಲು ಅವರ ವಿರುದ್ಧವೇ ನಿಂತಿದ್ದಾರೆ, ಪಕ್ಷೇತರರಾಗಿ ಸ್ಪರ್ಧಿಸುತ್ತಾರೋ, ಅಥವಾ ರಾಮುಲು ಪರ ಪ್ರಚಾರಕ್ಕಿಳಿಯುತ್ತಾರೋ ಕಾದು ನೋಡಬೇಕಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications