ಕನ್ನಡ ವಿರೋಧಿ ಟಿಪ್ಪು ಜಯಂತಿ ಏಕೆ?: ಚಿಮೂ ಆಕ್ರೋಶ
ಟಿಪ್ಪು ಎಲ್ಲ ರಾಜರಂತೆ ಶತ್ರುಗಳ ಜೊತೆ ಹೋರಾಡಿ 1799ರಲ್ಲಿ ಸಾವನ್ನಪ್ಪಿದನೇ ವಿನಾ ಸ್ವಾತಂತ್ರ್ಯ ಹೋರಾಟಗಾರ ಆಗಿರಲಿಲ್ಲ. ಅವನನ್ನು ಗಾಂಧೀಜಿ, ಪಟೇಲ್, ಸುಭಾಷ್ ಚಂದ್ರ ಬೋಸ್ ಜತೆ ಹೋಲಿಸಿದರೆ ಸತ್ಯಕ್ಕೆ ಅವಮಾನ ಮಾಡಿದಂತೆ ಆಗುತ್ತದೆ
ಚಿತ್ರದುರ್ಗ, ನವೆಂಬರ್ 3: ಇತಿಹಾಸದಲ್ಲಿನ ದಾಖಲೆಗಳು, ಸಂಶೋಧನೆಗಳು ಟಿಪ್ಪು ಸುಲ್ತಾನ್ ನನ್ನು ಮತಾಂಧ, ಭಾಷಾಂಧ ಎಂದು ಸಾರುತ್ತಿದೆ. ಆದರೂ ರಾಜ್ಯ ಸರಕಾರ ಟಿಪ್ಪು ಜಯಂತಿಯನ್ನು ಆಚರಿಸಲು ಮುಂದಾಗಿರುವುದು ದೊಡ್ಡ ಅಪಚಾರ ಎಂದು ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಹೇಳಿದ್ದಾರೆ.
ಇಲ್ಲಿನ ಡಿಸಿ ಕಚೇರಿ ಹತ್ತಿರ ಬುಧವಾರ ರಾಜವೀರ ಮದಕರಿನಾಯಕ ಗೌರವ ಸಂರಕ್ಷಣಾ ವೇದಿಕೆ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಆಯೋಜಿಸಿದ್ದ 'ಸಾಂಕೇತಿಕ ಒನಕೆ ಪ್ರತಿಭಟನೆ'ಯಲ್ಲಿ ಅವರು ಟಿಪ್ಪು ಬಗ್ಗೆ ತಾವು ಸಂಗ್ರಹಿಸಿದ್ದ ದಾಖಲೆ ಮಾಹಿತಿಯನ್ನು ಓದಿದರು.
ಟಿಪ್ಪು ಸುಲ್ತಾನ್ ನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ವೈಭವೀಕರಿಸಲಾಗಿದೆ ಎಂದು ಹೇಳಿದರು.[ಟಿಪ್ಪು ಜಯಂತಿ ಆಚರಣೆಗೆ ಕೊಡಗಿನಲ್ಲಿ ವಿರೋಧದ ಅಲೆ]

ಎಲ್ಲ ರಾಜರಂತೆಯೇ ಟಿಪ್ಪು: ಟಿಪ್ಪು ಎಲ್ಲ ರಾಜರಂತೆ ಶತ್ರುಗಳ ಜೊತೆ ಹೋರಾಡಿ 1799ರಲ್ಲಿ ಸಾವನ್ನಪ್ಪಿದನೇ ವಿನಾ ಸ್ವಾತಂತ್ರ್ಯ ಹೋರಾಟಗಾರ ಆಗಿರಲಿಲ್ಲ. ಅವನನ್ನು ಗಾಂಧೀಜಿ, ಪಟೇಲ್, ಸುಭಾಷ್ ಚಂದ್ರ ಬೋಸ್ ಜತೆ ಹೋಲಿಸಿದರೆ ಸತ್ಯಕ್ಕೆ ಅವಮಾನ ಮಾಡಿದಂತೆ ಆಗುತ್ತದೆ ಎಂದು ಅವರು ಹೇಳಿದರು.
ಶೃಂಗೇರಿ, ಮೇಲುಕೋಟೆ ಮಠಗಳಿಗೆ ಟಿಪ್ಪು ದತ್ತಿ ಕೊಟ್ಟಿದ್ದರೆ, ಅದೇನಿದ್ದರೂ ತನ್ನ ಅಧಿಕಾರಿಗಳ ವಿಶ್ವಾಸ ಪಡೆಯಲು ಮಾತ್ರ. ಮೇಲುಕೋಟೆ ಮತ್ತು ಶ್ರೀರಂಗಪಟ್ಟಣದ 700 ಬ್ರಾಹ್ಮಣ ಕುಟುಂಬಗಳ ಪೂರ್ವಜರನ್ನು ದೀಪಾವಳಿಯಂದೇ ಟಿಪ್ಪು ಕೊಂದ ಹಿನ್ನೆಲೆಯಲ್ಲಿ ಇವತ್ತಿಗೂ ಅಲ್ಲಿನವರು ಶೋಕದಿನವಾಗಿ ಭಾವಿಸುತ್ತಾರೆ ಎಂದರು.[ಕೊಡಗು: ಪೊಲೀಸ್ ಭದ್ರತೆಯಲ್ಲಿ ಟಿಪ್ಪು ಜಯಂತಿ]
ಕನ್ನಡ ವಿರೋಧಿ: ಮೈಸೂರು ರಾಜ್ಯದ ಆಡಳಿತ ಭಾಷೆ ಕನ್ನಡವಾಗಿತ್ತು. ಆತ ಅದನ್ನು ರದ್ದುಪಡಿಸಿ, ಪರ್ಸೋ ಅರೇಬಿಕ್ ಭಾಷೆಯನ್ನು ಆಡಳಿತ ಭಾಷೆ ಮಾಡಿದ. ಆತನ ಜಯಂತಿಯನ್ನು ಯಾವ ಕಾರಣಕ್ಕಾಗಿ ಆಚರಿಸಬೇಕು? ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗಿನ ಸಾವಿರಾರು ಜನ ಹಿಂದೂ ಮತ್ತು ಕ್ರಿಶ್ಚಿಯನ್ನರನ್ನು ಬಲವಂತವಾಗಿ ಮತಾಂತರಿಸಿ ಯುದ್ಧ ಶಿಕ್ಷಣ ನೀಡಿ, ಅದನ್ನು ಅಹಮ್ಮದೀಯ ಪಡೆ ಎಂದು ಕರೆದ.
ಟಿಪ್ಪು ತಂದೆ ಹೈದರಾಲಿಯೂ ಧರ್ಮಾಂಧ. ಮದಕರಿ ನಾಯಕರನ್ನು ಬಂಧಿಸಿ, ವಿಷ ಕುಡಿಸಿ ಕೊಂದವನು ಆತ. ಚಿತ್ರದುರ್ಗದ ಅಪಾರ ಸಂಪತ್ತಿನ ಜತೆಗೆ ಇಲ್ಲಿನ ಉಚ್ಚಂಗಿ ಎಲ್ಲಮ್ಮ, ಏಕನಾಥೇಶ್ವರಿ, ಸಂಪಿಗೆ ಸಿದ್ದೇಶ್ವರ ದೇಗುಲಗಳ ಸಂಪತ್ತನ್ನು ಲೂಟಿ ಮಾಡಿದ. ಈ ಕಾರಣಗಳಿಂದ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬಾರದು ಎಂದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications