ಟಿಪ್ಪು ಜಯಂತಿ ಆಚರಣೆಯಿಂದ ದಲಿತರಿಗೆ ಅವಮಾನ: ಆರ್ ಎಸ್ ಎಸ್
ಚಿತ್ರದುರ್ಗ, ನವೆಂಬರ್, 3: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವುದರ ಮೂಲಕ ದಲಿತರನ್ನು ಸ್ವಾಭಿಮಾನವನ್ನು ಅವಮಾನಿಸಲು ಮುಂದಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ತಿಳಿಸಿದ್ದಾರೆ.
ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಆರ್ ಎಸ್ ಎಸ್ ಮತ್ತು ಇತರೆ ಸಂಘಟನೆಗಳು ಬುಧವಾರ ಚಿತ್ರದುರ್ಗದ್ಲಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರು ಈ ರೀತಿಯ ಹೇಳಿಕೆ ನೀಡುವುದರ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ. [ಕನ್ನಡ ವಿರೋಧಿ ಟಿಪ್ಪು ಜಯಂತಿ ಏಕೆ?: ಚಿಮೂ ಆಕ್ರೋಶ]

ಟಿಪ್ಪು ಜಯಂತಿಯನ್ನು ಆಚರಿಸುವುದು 'ಒನಕೆ ಓಬವ್ವ' ಅವರನ್ನು ಹಿಯಾಳಿಸಿದಂತೆ ಆ ಮೂಲಕ ಇಡೀ ಒನಕೆ ಓಬವ್ವ ಅವರ ಇಡೀ ದಲಿತ ಸಮುದಾಯವನ್ನೇ ರಾಜ್ಯ ಸರ್ಕಾರ ಅವಮಾನಿಸಲು ಮುಂದಾಗಿದೆ ಎಂದು ಸಂಘ ಪರಿವಾರ ಕಾರ್ಯಕರ್ತರು ಹೇಳಿದರು.
ಒನಕೆ ಓಬವ್ವ ಅವರು ಟಿಪ್ಪುವಿನ ತಂದೆ ಹೈದರಾಲಿ ಅವರು ಚಿತ್ರದುರ್ಗ ಕೋಟೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಓಬವ್ವ ಅವರ ವಿರುದ್ಧ ವಿರೋಚಿತವಾಗಿ ಹೋರಾಟಿ ಪ್ರಾಣ ತ್ಯಜಿಸಿದ್ದಳು ಎಂದು ಅವರು ಹೇಳಿದರು. [ಟಿಪ್ಪು ಜಯಂತಿ ಆಚರಿಸುವ ಉದ್ದೇಶವೇನು: ಹೈಕೋರ್ಟ್ ಪ್ರಶ್ನೆ]
ಟಿಪ್ಪು ಜಯಂತಿ ಆಚರಿಸುವುದರಿಂದ ಪರಿಶಿಷ್ಟ ಸಮುದಾಯದ ಚಿತ್ರದುರ್ಗ ದೊರೆ ಮದಕರಿನಾಯಕ ಮತ್ತು ದಲಿತ ಮಹಿಳೆ ಒನಕೆ ಓಬವ್ವ ಅವರನ್ನು ಅವಮಾನಿಸಿದಂತೆ ಆಗುತ್ತದೆ ಎಂದು ಆರ್ ಎಸ್ ಎಸ್ ನಾಯಕರು ಹೇಳಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ, ಭಜರಂಗ ದಳ, ಆರ್ ಎಸ್ ಎಸ್, ನಾಯಕ ಸಮುದಾಯದ 1500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಪ್ತತಿಭಟನೆಯಲ್ಲಿ ಮದಕರಿ ನಾಯಕ ಸಂರಕ್ಷಣ ವೇದಿಕೆಯ ಹಲವು ಮಹಿಳೆಯರು ಒನಕೆ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
ಟಿಪ್ಪು ಒಬ್ಬ ಹಿಂದೂ ವಿರೋಧಿಯಾಗಿದ್ದು, ಕೊಡಗಿನಲ್ಲಿ ಹಲವಾರು ಕೊಡವರನ್ನು ಹತ್ಯೆ ಮಾಡಿದ್ದಾನೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಟಿಪ್ಪು ಜಯಂತಿ ಆಚರಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ಕೊಡಗಿನಲ್ಲಿ ಕಳೆದ ವರ್ಷ ಪ್ರತಿಭಟನೆ ಹಮ್ಮಿಕೊಂಡಿರದ್ದರು.
ಕೊಡಗಿನಲ್ಲಿ ಅಂದು ನಡೆದ ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಮುಖಂಡರೊಬ್ಬರು ಮೃತಪಟ್ಟಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications