ಟಿಪ್ಪು ಜಯಂತಿ ಆಚರಣೆಯಿಂದ ದಲಿತರಿಗೆ ಅವಮಾನ: ಆರ್ ಎಸ್ ಎಸ್
ಚಿತ್ರದುರ್ಗ, ನವೆಂಬರ್, 3: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವುದರ ಮೂಲಕ ದಲಿತರನ್ನು ಸ್ವಾಭಿಮಾನವನ್ನು ಅವಮಾನಿಸಲು ಮುಂದಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ತಿಳಿಸಿದ್ದಾರೆ.
ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಆರ್ ಎಸ್ ಎಸ್ ಮತ್ತು ಇತರೆ ಸಂಘಟನೆಗಳು ಬುಧವಾರ ಚಿತ್ರದುರ್ಗದ್ಲಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರು ಈ ರೀತಿಯ ಹೇಳಿಕೆ ನೀಡುವುದರ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ. [ಕನ್ನಡ ವಿರೋಧಿ ಟಿಪ್ಪು ಜಯಂತಿ ಏಕೆ?: ಚಿಮೂ ಆಕ್ರೋಶ]

ಟಿಪ್ಪು ಜಯಂತಿಯನ್ನು ಆಚರಿಸುವುದು 'ಒನಕೆ ಓಬವ್ವ' ಅವರನ್ನು ಹಿಯಾಳಿಸಿದಂತೆ ಆ ಮೂಲಕ ಇಡೀ ಒನಕೆ ಓಬವ್ವ ಅವರ ಇಡೀ ದಲಿತ ಸಮುದಾಯವನ್ನೇ ರಾಜ್ಯ ಸರ್ಕಾರ ಅವಮಾನಿಸಲು ಮುಂದಾಗಿದೆ ಎಂದು ಸಂಘ ಪರಿವಾರ ಕಾರ್ಯಕರ್ತರು ಹೇಳಿದರು.
ಒನಕೆ ಓಬವ್ವ ಅವರು ಟಿಪ್ಪುವಿನ ತಂದೆ ಹೈದರಾಲಿ ಅವರು ಚಿತ್ರದುರ್ಗ ಕೋಟೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಓಬವ್ವ ಅವರ ವಿರುದ್ಧ ವಿರೋಚಿತವಾಗಿ ಹೋರಾಟಿ ಪ್ರಾಣ ತ್ಯಜಿಸಿದ್ದಳು ಎಂದು ಅವರು ಹೇಳಿದರು. [ಟಿಪ್ಪು ಜಯಂತಿ ಆಚರಿಸುವ ಉದ್ದೇಶವೇನು: ಹೈಕೋರ್ಟ್ ಪ್ರಶ್ನೆ]
ಟಿಪ್ಪು ಜಯಂತಿ ಆಚರಿಸುವುದರಿಂದ ಪರಿಶಿಷ್ಟ ಸಮುದಾಯದ ಚಿತ್ರದುರ್ಗ ದೊರೆ ಮದಕರಿನಾಯಕ ಮತ್ತು ದಲಿತ ಮಹಿಳೆ ಒನಕೆ ಓಬವ್ವ ಅವರನ್ನು ಅವಮಾನಿಸಿದಂತೆ ಆಗುತ್ತದೆ ಎಂದು ಆರ್ ಎಸ್ ಎಸ್ ನಾಯಕರು ಹೇಳಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ, ಭಜರಂಗ ದಳ, ಆರ್ ಎಸ್ ಎಸ್, ನಾಯಕ ಸಮುದಾಯದ 1500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಪ್ತತಿಭಟನೆಯಲ್ಲಿ ಮದಕರಿ ನಾಯಕ ಸಂರಕ್ಷಣ ವೇದಿಕೆಯ ಹಲವು ಮಹಿಳೆಯರು ಒನಕೆ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
ಟಿಪ್ಪು ಒಬ್ಬ ಹಿಂದೂ ವಿರೋಧಿಯಾಗಿದ್ದು, ಕೊಡಗಿನಲ್ಲಿ ಹಲವಾರು ಕೊಡವರನ್ನು ಹತ್ಯೆ ಮಾಡಿದ್ದಾನೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಟಿಪ್ಪು ಜಯಂತಿ ಆಚರಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ಕೊಡಗಿನಲ್ಲಿ ಕಳೆದ ವರ್ಷ ಪ್ರತಿಭಟನೆ ಹಮ್ಮಿಕೊಂಡಿರದ್ದರು.
ಕೊಡಗಿನಲ್ಲಿ ಅಂದು ನಡೆದ ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಮುಖಂಡರೊಬ್ಬರು ಮೃತಪಟ್ಟಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications