Get Updates
Get notified of breaking news, exclusive insights, and must-see stories!

ಮದ್ಯಪಾನ ನಿಷೇಧಕ್ಕೆ ಒತ್ತಾಯಿಸಿ ಸಾವಿರಾರು ಮಹಿಳೆಯರಿಂದ ಪಾದಯಾತ್ರೆ

ಮದ್ಯಪಾನ ನಿಷೇಧಕ್ಕೆ ಒತ್ತಾಯಿಸಿ ಸಾವಿರಾರು ಮಹಿಳೆಯರಿಂದ ಪಾದಯಾತ್ರೆ
ಚಿತ್ರದುರ್ಗ, ಜನವರಿ 19: ಕರ್ನಾಟಕ ರಾಜ್ಯ ಲಂಚಮುಕ್ತ ವೇದಿಕೆ ಆಯೋಜಿಸಿರುವ ಮದ್ಯಪಾನ ನಿಷೇಧಕ್ಕೆ ಒತ್ತಾಯಿಸಿ ಪಾದಯಾತ್ರೆಗೆ ಇಂದು ಚಿತ್ರದುರ್ಗದಿಂದ ಚಾಲನೆ ದೊರೆತಿದೆ.

ಚಿತ್ರದುರ್ಗದ ಜಗದ್ಗುರು ಮುರುಗರಾಜೇಂದ್ರ ಕಾಲೇಜು ಕ್ರೀಡಾಂಗಣದಲ್ಲಿ ಇಂದು ಮಠದ ಶರಣರು ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.

Title: Women march in demand to ban liqueur completely in Karnataka

ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಮಹಿಳೆಯರು ಭಾಗವಹಿಸಿದ್ದಾರೆ. ಯಾದಗಿರಿ, ಬಾಗಲಕೋಟೆ, ವಿಜಯಪುರ, ಗುಲ್ಬರ್ಗ, ರಾಯಚೂರು ಸೇರಿ ಹಲವು ಜಿಲ್ಲೆಗಳ್ಳಿಂದ ಮಹಿಳೆಯರು ಈ ಪಾದಯಾತ್ರೆಗೆಂದು ಆಗಮಿಸಿದ್ದಾರೆ.

ಲಂಚಮುಕ್ತ ವೇದಿಕೆ ಸಂಘಟನೆ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ಈ ಪಾದಯಾತ್ರೆಯನ್ನು ಮುನ್ನಡೆಸುತ್ತಿದ್ದು, ರಾಜ್ಯದಲ್ಲಿ ಸಂಪೂರ್ಣ ಮದ್ಯಪಾನ ನಿಷೇಧ ಮಾಡಬೇಕೆಂದು ಒತ್ತಾಯ ಮಾಡಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಪಾದಯಾತ್ರೆ ಮೂಲಕ ಈ ಮಹಿಳೆಯರು ಬೆಂಗಳೂರು ಪ್ರವೇಶಿಸಿ ವಿಧಾನಸೌಧದ ಮುಂದೆ ಸಮಾವೇಶಗೊಳ್ಳಲಿದ್ದಾರೆ. ಅಲ್ಲಿಂದ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+