ಹೊಳಲ್ಕೆರೆ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಇಬ್ಬರ ಸಾವು
ಚಿತ್ರದುರ್ಗ, ನವೆಂಬರ್, 17: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದ ಅತ್ತೆ, ಸೊಸೆ ಸಾವನ್ನಪ್ಪಿದ್ದು, ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೃತರನ್ನು ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ನಿವಾಸಿಗಳಾದ ಅನಿತಾ (30) ಮತ್ತು ರತ್ನಮ್ಮ (55) ಎಂದು ಗುರುತಿಸಲಾಗಿದೆ.

ಹೊಸದುರ್ಗದಿಂದ ಹೊಳಲ್ಕೆರೆ ಕಡೆಗೆ ಮಂಜುನಾಥ್ ಎನ್ನುವರು ಕಾರು ಚಲಾಯಿಸುತ್ತಿದ್ದರು. ಬೊಮ್ಮನಕಟ್ಟೆ ಕೆರೆ ಏರಿ ಮೇಲೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಕಾರು ಕೆರೆಯೊಳಗೆ ಬಿದ್ದಿದ್ದು, ಈ ವೇಳೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಇಬ್ಬರು ಕುರಿ ವ್ಯಾಪಾರಿಗಳ ಸಾವು: ಮುಂದೆ ಚಲಿಸುತ್ತಿದ್ದ ಲಾರಿಗೆ ಕುರಿ ತುಂಬಿದ್ದ ಅಶೋಕ್ ಲೈಲಾಂಡ್ ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದ ಹೊರವಲಯದ ಆರ್.ಕೆ.ಪವರ್ ಜಿನ್ ಬಳಿ ಘಟನೆ ಇತ್ತೀಚೆಗಷ್ಟೇ ನಡೆದಿತ್ತು.
ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್(55) ಹಾಗೂ ಬೆಳೆಗೆರೆ ಶಿವಲಿಂಗಪ್ಪ (65) ಮೃತರು ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಚಳ್ಳಕೆರೆಯ ತಾಲೂಕಿನ ತನ್ನ ಗ್ರಾಮದಿಂದ ಹಿರಿಯೂರು ಕುರಿ ಸಂತೆಗೆ ಕುರಿ ವ್ಯಾಪಾರ ಮಾಡಲು ಅಶೋಕ್ ಲೈಲ್ಯಾಂಡ್ ಗಾಡಿಯಲ್ಲಿ ಕುರಿ ತುಂಬಿಕೊಂಡು ಬರುತ್ತಿರುವಾಗ ಮುಂದೆ ಚಲಿಸುತ್ತಿದ್ದ ಲಾರಿಗೆ ಅಶೋಕ್ ಲೈಲಾಂಡ್ ಗಾಡಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಅಸುನೀಗಿದ್ದಾರೆ.
ಇನ್ನು ಅಪಘಾತದ ರಭಸಕ್ಕೆ ಅಶೋಕ್ ಲೈಲ್ಯಾಂಡ್ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಹಳ್ಳಕ್ಕೆ ಇಳಿದ ಕಾರು: ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಇಳಿದ ಘಟನೆ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗೇಟ್ನಲ್ಲಿ ನಡೆದಿದ್ದು, ದಂಪತಿ ಸೇರಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ ನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ಮೂಲದ ಪೀಯುಶ್ ಸಿಂಘಲ್, ಪತ್ನಿ ರಾಧಿಕಾ ಹಾಗೂ ಮಕ್ಕಳಾದ ಅದಿಲ್ ಮತ್ತು ಮಾನ್ಯ ಎಂಬವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಊಟಿ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಾಸ್ ಆಗುವ ವೇಳೆ ಕಾರು ರಸ್ತೆ ಬದಿಯ 10 ಅಡಿ ಆಳದ ಹಳ್ಳಕ್ಕೆ ಇಳಿದಿ ಪರಿಣಾಮ ನಾಲ್ವರಿಗೆ ಗಂಭೀರ ಪೆಟ್ಟುಗಳಾಗಿದೆ. ಅಪಘಾತ ಮಾಹಿತಿ ತಿಳಿಯುತ್ತಿದ್ದಂತೆ ಹೈವೆ ಗಸ್ತು ಸಿಬ್ಬಂದಿ ನಾಗೇಂದ್ರ ಹಾಗೂ ಖಾಸಗಿ ಆಂಬುಲೆನ್ಸ್ ಚಾಲಕ ರಾಜೀವ್ ಕೂಡಲೇ ಸ್ಥಳಕ್ಕೆ ಧಾವಿಸಿ ಪ್ರಥಮ ಚಿಕಿತ್ಸೆ ಕೊಟ್ಟಿದ್ದಾರೆ. ಇನ್ನು ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications