ಹೊಳಲ್ಕೆರೆ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಇಬ್ಬರ ಸಾವು

ಚಿತ್ರದುರ್ಗ, ನವೆಂಬರ್, 17: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದ ಅತ್ತೆ, ಸೊಸೆ ಸಾವನ್ನಪ್ಪಿದ್ದು, ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೃತರನ್ನು ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ನಿವಾಸಿಗಳಾದ ಅನಿತಾ (30) ಮತ್ತು ರತ್ನಮ್ಮ (55) ಎಂದು ಗುರುತಿಸಲಾಗಿದೆ.

Two death due to Car Falls into Lake near Bommanakatte village

ಹೊಸದುರ್ಗದಿಂದ ಹೊಳಲ್ಕೆರೆ ಕಡೆಗೆ ಮಂಜುನಾಥ್ ಎನ್ನುವರು ಕಾರು ಚಲಾಯಿಸುತ್ತಿದ್ದರು. ಬೊಮ್ಮನಕಟ್ಟೆ ಕೆರೆ ಏರಿ ಮೇಲೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಕಾರು ಕೆರೆಯೊಳಗೆ ಬಿದ್ದಿದ್ದು, ಈ ವೇಳೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಇಬ್ಬರು ಕುರಿ ವ್ಯಾಪಾರಿಗಳ ಸಾವು: ಮುಂದೆ ಚಲಿಸುತ್ತಿದ್ದ ಲಾರಿಗೆ ಕುರಿ ತುಂಬಿದ್ದ ಅಶೋಕ್ ಲೈಲಾಂಡ್ ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದ ಹೊರವಲಯದ ಆರ್.ಕೆ.ಪವರ್ ಜಿನ್ ಬಳಿ ಘಟನೆ ಇತ್ತೀಚೆಗಷ್ಟೇ ನಡೆದಿತ್ತು.

ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್(55) ಹಾಗೂ ಬೆಳೆಗೆರೆ ಶಿವಲಿಂಗಪ್ಪ (65) ಮೃತರು ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಚಳ್ಳಕೆರೆಯ ತಾಲೂಕಿನ ತನ್ನ ಗ್ರಾಮದಿಂದ ಹಿರಿಯೂರು ಕುರಿ ಸಂತೆಗೆ ಕುರಿ ವ್ಯಾಪಾರ ಮಾಡಲು ಅಶೋಕ್ ಲೈಲ್ಯಾಂಡ್ ಗಾಡಿಯಲ್ಲಿ ಕುರಿ ತುಂಬಿಕೊಂಡು ಬರುತ್ತಿರುವಾಗ ಮುಂದೆ ಚಲಿಸುತ್ತಿದ್ದ ಲಾರಿಗೆ ಅಶೋಕ್ ಲೈಲಾಂಡ್ ಗಾಡಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಅಸುನೀಗಿದ್ದಾರೆ.

ಇನ್ನು ಅಪಘಾತದ ರಭಸಕ್ಕೆ ಅಶೋಕ್ ಲೈಲ್ಯಾಂಡ್ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಹಳ್ಳಕ್ಕೆ ಇಳಿದ ಕಾರು: ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಇಳಿದ ಘಟನೆ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗೇಟ್‌ನಲ್ಲಿ ನಡೆದಿದ್ದು, ದಂಪತಿ ಸೇರಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ ನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ಮೂಲದ ಪೀಯುಶ್ ಸಿಂಘಲ್, ಪತ್ನಿ ರಾಧಿಕಾ ಹಾಗೂ ಮಕ್ಕಳಾದ ಅದಿಲ್ ಮತ್ತು ಮಾನ್ಯ ಎಂಬವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಊಟಿ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಾಸ್ ಆಗುವ ವೇಳೆ ಕಾರು ರಸ್ತೆ ಬದಿಯ 10 ಅಡಿ ಆಳದ ಹಳ್ಳಕ್ಕೆ ಇಳಿದಿ ಪರಿಣಾಮ ನಾಲ್ವರಿಗೆ ಗಂಭೀರ ಪೆಟ್ಟುಗಳಾಗಿದೆ. ಅಪಘಾತ ಮಾಹಿತಿ ತಿಳಿಯುತ್ತಿದ್ದಂತೆ ಹೈವೆ ಗಸ್ತು ಸಿಬ್ಬಂದಿ ನಾಗೇಂದ್ರ ಹಾಗೂ ಖಾಸಗಿ ಆಂಬುಲೆನ್ಸ್ ಚಾಲಕ ರಾಜೀವ್ ಕೂಡಲೇ ಸ್ಥಳಕ್ಕೆ ಧಾವಿಸಿ ಪ್ರಥಮ ಚಿಕಿತ್ಸೆ ಕೊಟ್ಟಿದ್ದಾರೆ. ಇನ್ನು ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+