ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗದಲ್ಲಿ ಕುರಿ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಅಜ್ಜ ಮೊಮ್ಮಗ ಸಾವು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮೇ 31: ಕೆರೆಯಲ್ಲಿ ಕುರಿಗಳ ಮೈ ತೊಳೆಯಲು ಹೋಗಿ ಅಜ್ಜ ಮೊಮ್ಮಗ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬೇಟೆಮರದಹಟ್ಟಿ ಗ್ರಾಮದಲ್ಲಿ ನಡೆದಿದೆ.

ಸೀಗಣ್ಣ (65), ಪ್ರತಾಪ್ (24) ಎಂಬುವರೇ ಮೃತಪಟ್ಟವರು. ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಉಳುವಿನಹಾಳು ಕೆರೆಯಲ್ಲಿ ಕುರಿ ತೊಳೆಯಲು ಹೋದಾಗ ಈ ದುರ್ಘಟನೆ ನಡೆದಿದೆ. ಮೊದಲು ಪ್ರತಾಪ್ ಎನ್ನುವ ಯುವಕ ಕೆರೆಗೆ ಇಳಿದಾಗ, ಆತನ ಕಾಲು ನೀರಿನಲ್ಲಿ ಸಿಲುಕಿಕೊಂಡು ಮುಳುಗಿದ್ದಾನೆ. ಎಷ್ಟು ಹೊತ್ತಾದರೂ ಮೇಲೆ ಬಾರದ ಕಾರಣ ಅನುಮಾನಗೊಂಡ ಸೀಗಣ್ಣ ಎಂಬುವರು ಕೂಡ ನೀರಿಗೆ ಇಳಿದಿದ್ದಾರೆ. ಅವರೂ ನೀರಿನೊಳಗೆ ಸಿಲುಕಿಕೊಂಡು ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ. ಇಬ್ಬರ ಮೃತದೇಹವನ್ನೂ ನೀರಿನಿಂದ ಮೇಲೆತ್ತಲಾಗಿದೆ.

Two Men Died By Drowning In Lake In Chitradurga

 ಲಾಕ್ ಡೌನ್ ಸರಣಿ ರಜೆ: ತುಂಗಭದ್ರಾ ನದಿಯಲ್ಲಿ ಈಜಲು ಹೋದ ಮೂವರು ನೀರುಪಾಲು ಲಾಕ್ ಡೌನ್ ಸರಣಿ ರಜೆ: ತುಂಗಭದ್ರಾ ನದಿಯಲ್ಲಿ ಈಜಲು ಹೋದ ಮೂವರು ನೀರುಪಾಲು

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

English summary
Two men who went to wash their sheeps died by drowning in lake at hiriyur of chitradurga district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X