ಚಿತ್ರದುರ್ಗದ ಶಿಕ್ಷಕ ಉಮೇಶ್ಗೆ ರಾಷ್ಟ್ರಮಟ್ಟದ ಪ್ರಶಸ್ತಿ
ಚಿತ್ರದುರ್ಗ, ಆಗಸ್ಟ್ 26 : ಕೇಂದ್ರ ಶಿಕ್ಷಣ ಸಚಿವಾಲಯವು ನೀಡುವ ರಾಷ್ಟ್ರೀಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಕೋಟೆ ನೋಡಿನ ಶಿಕ್ಷಕರೊಬ್ಬರು ಆಯ್ಕೆಯಾಗಿದ್ದಾರೆ. ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಮೃತಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಉಮೇಶ್ ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಒಟ್ಟು ದೇಶಾದ್ಯಂತ 46 ಶಿಕ್ಷಕರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ನಡೆಯಲಿದೆ. ಅಂದಿನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಎಲ್ಲಾ ಶಿಕ್ಷಕರಿಗೆ ಪ್ರಶಸ್ತಿ ನೀಡಲಿದ್ದಾರೆ.
ಮೂಲತಃ ಉಮೇಶ್ ಅವರು 2004ರಲ್ಲಿ ಶಿಕ್ಷಕ ವೃತ್ತಿಗೆ ಪಾದರ್ಪಣೆ ಮಾಡಿದರು. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಚಿಕ್ಕ ಬಳ್ಳಾರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೃತ್ತಿ ಆರಂಭಿಸಿದ ಇವರು, 2006ರಲ್ಲಿ ಕೇಶವಪುರ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ, ನಂತರ 2009 ರಿಂದ ಹೊಳಲ್ಕೆರೆ ತಾಲ್ಲೂಕಿನ ಅಮೃತಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ.

ಮಕ್ಕಳ ಕಲಿಕೆಯಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಲು ಶಿಕ್ಷಕ ಉಮೇಶ್ ವಿನೂತನ ಹೆಜ್ಜೆ ಇಟ್ಟಿದ್ದಾರೆ. ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದಾರೆ. ಗ್ರಾಮದ ಶಾಲೆಯಲ್ಲಿ ಮಕ್ಕಳ ದಾಖಲಾತಿ ಕಡಿಮೆ ಇದ್ದುದ್ದನ್ನು ಗಮನಿಸಿದ ಶಿಕ್ಷಕ ಮಕ್ಕಳ ಹಾಜರಾತಿ ಪ್ರಮಾಣಕ್ಕೆ ಶ್ರಮಿಸಿದರು. ಆರಂಭದಲ್ಲಿ 39 ವಿದ್ಯಾರ್ಥಿಗಳ ಸಂಖ್ಯೆ ಇದ್ದನ್ನು ಕಂಡು ತನ್ನ ಶಾಲೆಯನ್ನು ಬದಲಾವಣೆ ಮಾಡಿ, ವಿದ್ಯಾರ್ಥಿಗಳ ಸಂಖ್ಯೆಯನ್ನು 80ಕ್ಕೆ ಹೆಚ್ಚಿಸಿ ಗಮನ ಸೆಳೆದರು. ಜೊತೆಗೆ ದಾನಿಗಳ ನೆರವಿನಿಂದ ಶಾಲೆಯಲ್ಲಿ ಮೂಲ ಸೌಕರ್ಯ ಒದಗಿಸಿಕೊಟ್ಟರು.
ಶಾಲೆಯಲ್ಲಿ ಶಿಕ್ಷಕ ಉಮೇಶ್ ಅವರು ಕೇವಲ ಶಿಕ್ಷಕನಾಗದೆ ಸಾಹಿತಿಯಾಗಿ ಹೊರಹೊಮ್ಮಿದ್ದಾರೆ. ಶಾಲೆಯಲ್ಲಿ ನಲಿಕಲಿ, ಪ್ರಯೋಗಾಲಯ, ಕಂಪ್ಯೂಟರ್, ಚರ್ಚಾಸ್ಪರ್ಧೆ, ಗುಂಪು ಓದುಗಾರಿಕೆ, ಗೋಡೆ ಬರಹ, ಚಿತ್ರ ಬರವಣಿಗೆ, ಸಂಗೀತ, ಶಾಲಾ ಸ್ವಚ್ಛತೆ, ಹೀಗೆ ವಿವಿಧ ರೀತಿಯಲ್ಲಿ ಮಕ್ಕಳು ಓದಿನ ಕಡೆಗೆ ಗಮನ ಸೆಳೆಯುವಂತೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲೂ ಸಾಧನೆ
ಉಮೇಶ್ ಅವರು ಪಾಠ ಬೋಧನೆಗೆ ಸಿಮೀತವಾಗದೆ ಸಾಹಿತ್ಯ ಕ್ಷೇತ್ರದಲ್ಲೂ ಕವಿಯಾಗಿ ಹೊರಹೊಮ್ಮಿದ್ದಾರೆ. ವಚನಾಂಜಲಿ, ದೇವರಿಗೆ ಬೀಗ, ಪೋಟೋಕ್ಕೊಂದು ಪ್ರೇಮ್, ಅಪ್ಪನು ಕೊಡಿಸಿದ ಮೊದಲ ಪುಸ್ತಕ, ವಚನವಾಣಿ ಸೇರಿದಂತೆ ಇತರೆ ಕೃತಿಗಳನ್ನು ರಚಿಸಿ ಹೊರತಂದಿದ್ದಾರೆ ಎನ್ನಲಾಗಿದೆ.

ರಾಷ್ಟ್ರ ಪ್ರಶಸ್ತಿಗೆ ಶಿಕ್ಷಕ ಉಮೇಶ್ ಆಯ್ಕೆಯಾಗುತ್ತಿದ್ದಂತೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಹಾಗೂ ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ ಸೇರಿದಂತೆ ಉಮೇಶ್ ರನ್ನು ಅಭಿನಂದಿಸಿದರು.
ಜೀವಶಾಸ್ತ್ರ ಶಿಕ್ಷಕಿ ವಿ. ಪೊನಶಂಕರಿಗೂ ಪ್ರಶಸ್ತಿ
ಕಳೆ 27 ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿರುವ ಪೊನಶಂಕರಿ ಪ್ರಸ್ತುತ ತುಮಕೂರಿನಲ್ಲಿ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಮೂಲತಃ ತಮಿಳುನಾಡಿನವರಾಗಿರುವ ಇವರು ಗುಜರಾತ್ನಲ್ಲೂ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನ ಯಶವಂತಪುರದ ಐಐಎಸ್ಸಿಯಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ 12 ವರ್ಷ ಕೆಲಸ ಮಾಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications