ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ಎಲ್ಲೆಂದರಲ್ಲಿ ಬಿಸಾಡಿರುವ ಪಿಪಿಇ ಕಿಟ್ ಗಳು
ಚಿತ್ರದುರ್ಗ, ಆಗಸ್ಟ್ 04: ಕೊರೊನಾ ವೈರಸ್ ಮಹಾಸ್ಫೋಟಕ್ಕೆ ಕರ್ನಾಟಕಕ್ಕೆ ಕರ್ನಾಟಕವೇ ತತ್ತರಿಸಿ ಹೋಗುತ್ತಿದೆ. ಇದರ ನಡುವೆಯೇ ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆಯ ಆವರಣದಲ್ಲಿ ಪಿಪಿಇ ಕಿಟ್ ಗಳನ್ನು ಬಿಸಾಡಿದ್ದು, ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಗಳ ಬೇಜವಾಬ್ದಾರಿತನ ಬಯಲಾಗಿದೆ.
Recommended Video
Siddaramaiah Covid : ಮಾಜಿ ಹಾಗು ಹಾಲಿ ಮುಖ್ಯಮಂತ್ರಿಗಳು ಒಂದೇ ಆಸ್ಪತ್ರೆಯಲ್ಲಿ | Oneindia Kannada
ಈಗಾಗಲೇ ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹಚ್ಚಾಗುತ್ತಲೇ ಇದ್ದು, ಈಗ ಜಿಲ್ಲಾಸ್ಪತ್ರೆ ಆವರಣದ ಎಲ್ಲೆಂದರಲ್ಲಿ ಪಿಪಿಇ ಕಿಟ್ ಗಳನ್ನು ಬಿಸಾಡಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 800 ರ ಗಡಿ ದಾಟಿದ್ದು, ಈ ನಡುವೆ ಬಳಸಿದ ಪಿಪಿಇ ಕಿಟ್ ಗಳನ್ನು ಬೇಕಾಬಿಟ್ಟಿಯಾಗಿ ಆರೋಗ್ಯ ಸಿಬ್ಬಂದಿಗಳು ಬಿಸಾಡಿದ್ದಾರೆ. ರಸ್ತೆಯಲ್ಲಿ ಪಿಪಿಇ ಕಿಟ್ ನೋಡಿ ಆಸ್ಪತ್ರೆಗೆ ತೆರಳಲು ಜನರು ಭಯಪಡುತ್ತಿದ್ದಾರೆ.












Click it and Unblock the Notifications