Vani Vilasa Sagara Dam: ಇದೇ ಮೊಟ್ಟ ಮೊದಲ ಬಾರಿ ಹೊಸ ಇತಿಹಾಸ ಸೃಷ್ಟಿಸಲು ವಾಣಿ ವಿಲಾಸ ಡ್ಯಾಂ ಸಜ್ಜು
Vani Vilasa Sagara Dam: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಪರಿಣಾಮ ಈಗಾಗಲೇ ಹಲವು ಜಲಾಶಯಗಳು ಭರ್ತಿಯಾಗಿದೆ. ಹಾಗೆಯೇ ರಾಜ್ಯದ ಹಳೇ ಅಣೆಕಟ್ಟುಗಳಲ್ಲಿ ಒಂದಾದ ಹಿರಿಯೂರಿನ ತಾಲೂಕಿನ ವಾಣಿ ವಿಲಾಸ ಇದೇ ಮೊಟ್ಟ ಮೊಟ್ಟ ಮೊದಲ ಬಾರಿ ಇತಿಹಾಸವೊಂದನ್ನು ಸೃಷ್ಟಿಸಲು ಸಜ್ಜಾಗಿದೆ. ಹಾಗಾದ್ರೆ ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ಕಣ್ಣಾಡಿಸಿ.
ಚಿತ್ತದುರ್ಗ ಜಿಲ್ಲೆಯ, ಹಿರಿಯೂ ತಾಲ್ಲೂಕಿನಲ್ಲಿರುವ ಮಾರಿಕಣಿವೆ ಅಥವಾ ವಾಣಿ ವಿಲಾಸ ಸಾಗರ ಜಲಾಶಯ ಭರ್ತಿಯಾಗುವ ಸನಿಹದಲ್ಲಿದೆ. ಇದು ನೆರವೇರಿದರೆ, ಹೊಸ ಇತಿಹಾಸ ಸೃಷ್ಟಿಸಿದಂತಾಗಲಿದೆ. ವರ್ಷದಲ್ಲಿ ಎರಡನೇ ಭಾರೀ ಭರ್ತಿಯಾದ್ರೆ, ಮತ್ತೊಂದೆಡೆ ಇದುವರೆಗೂ ನಾಲ್ಕನೇ ಬಾರಿಗೆ ಕೋಡಿ ಬೀಳಲು ಸಜ್ಜಾಗಿದೆ. ಹಾಗಾದ್ರೆ, ಇದೀಗ ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ತಿಳಿಯಿರಿ.

ವಾಣಿ ವಿಲಾಸ ಸಾಗರವನ್ನ ಮಾರಿಕಣಿವೆ ಅಂತಲೂ ಕರೆಯುತ್ತಾರೆ. ಇದು ರಾಜ್ಯದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿದ್ದು, ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿದೆ. ಇದೀಗ ಈ ಜಲಾಶಯ ಇದುವರೆಗೂ ನಾಲ್ಕನೇ ಬಾರಿಗೆ ಭರ್ತಿಯಾಗಿ ದಾಖಲೆ ಸೃಷ್ಟಿಸಲು ಸಜ್ಜಾಗಿದೆ. ಮತ್ತೊಂದೆಡೆ ಈಗಾಗಲೇ ಇದೇ ವರ್ಷದ ಜನವರಿಯಲ್ಲಿ ಕೋಡಿ ಬಿದ್ದಿದ್ದು, ಮತ್ತೊಮ್ಮೆ ಇದೀಗ ಕೋಡಿ ಬೀಳುವ ಸಹಿಹದಲ್ಲಿದೆ. ಇದು, ನೆರವೇರಿದರೆ ವರ್ಷದಲ್ಲಿ ಎರಡು ಬಾರಿ ಕೋಡಿ ಬಿದ್ದ ಹೊಸ ಇತಿಹಾಸವನ್ನು ನಿರ್ಮಿಸಲಿದೆ.
ಈ ವರ್ಷದ ಆರಂಭದಲ್ಲಿ ವಾಣಿ ವಿಲಾದ ಜಲಾಶಯದ ಕೋಡಿ ಬಿದ್ದಿತ್ತು. ಅದು ಮಳೆ ನೀರಿನಿಂದಲ್ಲ, ಬದಲಾಗಿ ಭದ್ರ ಜಲಾಶಯದಿಂದ ಬಂದ ನೀರಿನಿಂದ. ಇನ್ನೂ ಇದೀಗ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಪ್ರಸ್ತುತ ಇದೀಗ ನೀರಿನ ಮಟ್ಟ 124.80 ಅಡಿ ತಲುಪಿದ್ದು, ಭರ್ತಿಯಾಗಲು ಕೇವಲ 6 ಅಡಿಯಷ್ಟೇ ಬಾಕಿಯಿದೆ. ಭಾರೀ ಮಳೆ ಮುಂದುವರೆದರೆ, ಆಗಸ್ಟ್ನಲ್ಲೇ ಭರ್ತಿಯಾಗುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ.
ವಾಣಿ ವಿಲಾಸ ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯ 130 ಅಡಿ (30 ಟಿಎಂಸಿ) ಆಗಿದ್ದು, ಇದೀಗ ನೀರಿನ ಮಟ್ಟ 124.80 ಇದ್ದರೆ, 600 ಕ್ಯುಸೆಕ್ ಒಳಹರಿವಿದೆ. ಆದರೆ, ಹೊರಹರಿವಿಲ್ಲ. ಇನ್ನೂ ಕೇವಲ 6 ಅಡಿ ನೀರು ಬಂದ್ರೆ ಮತ್ತೆ ಭರ್ತಿಯಾಗಲಿದೆ. ಈ ಮೂಲಕ ಇದುವರೆಗೂ ನಾಲ್ಕೂ ಬಾರಿ ಕೋಡಿ ಬಿದ್ದ ಇತಿಹಾಸ ನಿರ್ಮಾಣ ಆದಂತಾಗಲಿದೆ.
ಯಾವ್ಯಾವಾಗ ಭರ್ತಿ?: 1933ರಲ್ಲಿ ಜಲಾಶಯಕ್ಕೆ 135.25 ಅಡಿ ನೀರು ಸಂಗ್ರಹವಾಗುವ ಮೂಲಕ ಮೊದಲ ಬಾರಿಗೆ ಡ್ಯಾಂ ಕೋಡಿ ಬಿದ್ದು, ಇತಿಹಾಸ ಸೃಷ್ಟಿಸಿತ್ತು. ಬಳಿಕ 2022 135, 2025ರ ಜನವರಿ ತಿಂಗಳಲ್ಲಿ 130 ಅಡಿ ನೀರು ಬಂದಿದ್ದು, ಈ ವೇಳೆ ಕೋಡಿ ಬಿದ್ದು ಮೂರನೇ ಬಾರಿ ದಾಖಲೆ ಸೃಷ್ಟಿಸಿತ್ತು. ಇದೀಗ ಮತ್ತೆ ಭರ್ತಿಯಾದ್ರೆ, ಇದು ನಾಲ್ಕನೇ ಬಾರಿಯಾಗಲಿದೆ.
ಯಾವ ವರ್ಷ ಎಷ್ಟು ನೀರು ಸಂಗ್ರಹ?: 1917ರಲ್ಲಿ 120.60 ಅಡಿ, 1918 - 121.30, 1919 - 128.30, 1920 - 125.50, 1932 - 125.50, ಅಡಿ, 1933 - 135.25 ಅಡಿ, 1934 - 130.24 ಅಡಿ, 1935 - 123.22 ಅಡಿ, 1956 - 125 ಅಡಿ, 1957 - 125.05 ಅಡಿ, 1958 - 124.50 ಅಡಿ, 2000 - 122.50 ಅಡಿ, 2021 - 125.50 ಅಡಿ, 2022 - 135 ಅಡಿ, 2024ರಲ್ಲಿ 128.40 ಅಡಿ, 2025 ಜನವರಿಯಲ್ಲಿ 130 ಅಡಿ ನೀರು ಸಂಗ್ರವಾಗಿತ್ತು.
ಡ್ಯಾಂ ನಿರ್ಮಾಣ ಇತಿಹಾಸ: 1907ರಲ್ಲಿ ನಿರ್ಮಾಣ ಆಗಿರುವ ಈ ಡ್ಯಾಂಗೆ ಸುಮಾರು 117 ವರ್ಷಗಳ ಕಾಲ ಇತಿಹಾಸವಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಜನಿಸುವ "ವೇದಾ" ನದಿ ಕಡೂರಿನ ಬಳಿ "ಅವತಿ" ಎಂಬ ನದಿಯನ್ನು ಸೇರಿ ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications