Vani Vilasa Sagara Dam: ವಿವಿ ಸಾಗರ ಜಲಾಶಯದ ಒಳಹರಿವು ಹೆಚ್ಚಳ, 2022ರ ದಾಖಲೆ ಉಡೀಸ್ ಆಗುತ್ತಾ?
Vani Vilasa Sagara Dam: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇತ್ತ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಾದ್ಯಂತ ಕೃತಿಕಾ ಮಳೆ ಅಬ್ಬರ ಮುಂದುವರೆದಿದ್ದು, ಈ ಹಿನ್ನೆಲೆ ಜಿಲ್ಲೆಯ ಜೀವನಾಡಿಯಾದ ಹಿರಿಯೂರು ತಾಲೂಕಿನ ವಾಣಿ ವಲಾಸ ಸಾಗರ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹಾಗಾದರೆ ಇದೀಗ ಇಂದು (ಮೇ 21) ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ಗಮನಿಸಿ.
ಸೋಮವಾರ (ಮೇ 20) ಸಂಜೆಯಿಂದ ಆರಂಭವಾದ ಮಳೆ ಸಮಯ ಕಳೆದಂತೆ ಬಿರುಸು ಪಡೆಯಿತು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿ ಕಾಲುವೆಗಳು, ಸಣ್ಣಪುಟ್ಟ ಕೆರೆಕಟ್ಟೆಗಳು ತುಂಬಿ ಹರಿದವು. ಇನ್ನು ನಗರದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರಗಳು ಕೂಡ ಸೃಷ್ಟಿಯಾಗಿವೆ.

ಒಳಹರಿವು ಹೆಚ್ಚಳ: ಜಿಲ್ಲೆಯ ಜೀವನಾಡಿಯಾಗಿರಯವ ಹಿರಿಯೂರು ತಾಲೂಕಿನ ವಾಣಿವಿಲಾಸ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಲೇ ಇದೆ. ವಿವಿ ಸಾಗರಕ್ಕೆ 5,100 ಕ್ಯೂಸೆಕ್ ಒಳಹರಿವು ನೀರು ಸಂಗ್ರಹವಾಗಿದ್ದು, ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 112,70 ಅಡಿ ಇದೆ. ಪ್ರಸಕ್ತ ಸಾಲಿನಲ್ಲಿ ಜಲಾಶಯಕ್ಕೆ 1 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಇನ್ನು ಹೀಗೆ ಮಳೆ ಮುಂದುವರೆದರೆ, ಈ ವರ್ಷ ಡ್ಯಾಂ ಕೋಡಿ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
3,800 ಕ್ಯೂಸೆಕ್ ಒಳಹರಿವು: ಮೊನ್ನೆಯಷ್ಟೇ ಜಿಲ್ಲೆಯಲ್ಲಿ ಅಬ್ಬರಿಸಿದ ಕೃತಿಕಾ ಮಳೆಯಿಂದ ಹೊಸದುರ್ಗ ತಾಲೂಕಿನ ಕೆಲ್ಲೋಡ್ ಚೆಕ್ ಡ್ಯಾಂ ಒಂದೇ ದಿನಕ್ಕೆ ಭರ್ತಿಯಾಗಿ ನೀರು ವಿವಿ ಸಾಗರ ಜಲಾಶಯದ ಕಡೆಗೆ ಹರಿದು ಬಂದಿತ್ತು. ಈ ನಿಟ್ಟಿನಲ್ಲಿ ಜಲಾಶಯಕ್ಕೆ 3,800 ಕ್ಯೂಸೆಕ್ ಒಳಹರಿವು ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 112 ಅಡಿ ನೀರು ತಲುಪಿದೆ. 0.55 ಅರ್ಧ ಅಡಿ ನೀರು ಸಂಗ್ರಹವಾಗಿದೆ. ಇನ್ನು ವಿವಿ ಸಾಗರ ಡ್ಯಾಂ 30 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ.
ಕಳೆದ 2022ರಲ್ಲಿ ಜಲಾಶಯಕ್ಕೆ 135 ಅಡಿಗೂ ಹೆಚ್ಚು ನೀರು ಸಂಗ್ರಹವಾಗುವ ಮೂಲಕ ಎರಡನೇ ಬಾರಿಗೆ ಜಲಾಶಯ ಕೊಡಿ ಬಿದ್ದಿತ್ತು. 2023ರಲ್ಲಿ ಮಳೆ ಇಲ್ಲದ ಕಾರಣ ಜಲಾಶಯಕ್ಕೆ ಯಾವುದೇ ಹೇಳಿಕೊಳ್ಳುವಂತಹ ಒಳಹರಿವು ನೀರು ಸಂಗ್ರಹವಾಗಿರಲಿಲ್ಲ. ಇದೀಗ ಆರಂಭದಲ್ಲಿಯೇ ಜಲಾಶಯಕ್ಕೆ ಒಳಹರಿವು ಹರಿದು ಬರುತ್ತಿದ್ದು, ಈ ಭಾಗದ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ಇದೇ ರೀತಿ ಇನ್ನೊಂದು ವಾರದಲ್ಲಿ ಹೆಚ್ಚು ಮಳೆ ಬಂದು ಜಲಾಶಯಕ್ಕೆ ನೀರು ಹರಿದು ಬಂದರೆ ಜಲಾಶಯದ ನೀರಿನ ಮಟ್ಟ 120 ಅಡಿ ತಲುಪುವ ಸಾಧ್ಯತೆ ಇರುತ್ತದೆ.
ಇತ್ತ ಹಿರಿಯೂರು ತಾಲೂಕಿನಲ್ಲಿ ಅಬ್ಬರದ ಮಳೆಯಾಗಿದ್ದು, ಧರ್ಮಪುರ ಹೋಬಳಿಯಿಂದ ಅರಳಿಕೆರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿದಿದ್ದು, ಈ ರಸ್ತೆಯಲ್ಲಿ ಪ್ರಯಾಣಿಸಿದ ಕಾರೊಂದು ಗುಂಡಿಯಲ್ಲಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಈ ವೇಳೆ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 5 ಸೆಂಟಿ ಮೀಟರ್ ಮಳೆ, ಹೊಳಲ್ಕೆರೆ ಚಿಕ್ಕಜಾಜೂರಿನಲ್ಲಿ 3 ಸೆಂಟಿ ಮೀಟರ್ ಸುರಿದೆ ಎಂದು ತಿಳಿದುಬಂದಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications