Vani vilasa Sagara Dam: ವಾಣಿ ವಿಲಾಸ ಸಾಗರ ಡ್ಯಾನಿಂದ ಕುಡಿಯುವ ನೀರು ಕೊಡದಿದ್ರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಹಿರಿಯೂರು, ಮಾರ್ಚ್, 22: ತಾಲೂಕಿನ ವಾಣಿ ವಿಲಾಸ ಜಲಾಶಯದಿಂದ ಭರಮಗಿರಿ ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರು ಕೊಡದಿದ್ದರೆ, ಲೋಕಸಭಾ ಚುನಾವಣೆ ಮತದಾನ ಬಹಿಷ್ಕಾರ ಮಾಡಲಾಗುವುದು ಎಂದು ಗ್ರಾಮಸ್ಥರು ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಈ ಕುರಿತು ಪ್ರತಿಭಟನೆ ನಡೆಸಿ ಮಾತನಾಡಿದ ಗ್ರಾಮಸ್ಥರು, ವಾಣಿವಿಲಾಸ ಜಲಾಶಯದಿಂದ ಮೂರ್ನಾಲ್ಕು ಕಿಲೋ ಮೀಟರ್ ದೂರದಲ್ಲಿರುವ ನಮ್ಮ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಗ್ರಾಮದಲ್ಲಿ ಕೆರೆ ಇದ್ದು, ಇದೀಗ ನೀರಿಲ್ಲದೆ ಕೆರೆ ಬತ್ತಿ ಹೋಗಿದೆ. ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಸಾವಿರಾರು ಅಡಿಗಳಷ್ಟು ಕೊಳವೆ ಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಆಳಲು ತೊಡಿಕೊಂಡಿದ್ದಾರೆ. ರೈತರು ತೋಟವನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಆತ್ಯಹತ್ಯೆ ದಾರಿ ಹಿಡಿಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ ವಾಣಿವಿಲಾಸಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಭರಮಗಿರಿ, ಬಳಘಟ್ಟ, ತಳವಾರಟ್ಟಿ, ಅಗಳೇರಹಟ್ಟಿ, ಕಕ್ಕಯ್ಯನಹಟ್ಟಿ , ಕುಂಟಪ್ಪನಹಟ್ಟಿ ಈ ಗ್ರಾಮಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತುಂಬಾ ಸಮಸ್ಯೆ ಉಂಟಾಗಿದೆ. ನಮ್ಮೂರಿನಿಂದ ಮೂರು ಕಿಲೋ ಮೀಟರ್ ಸಮೀಪದಲ್ಲಿರುವ ವಾಣಿ ವಿಲಾಸ ಜಲಾಶಯದಿಂದ ಭರಮಗಿರಿ ಕೆರೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ನೂರಾರು ಕಿಲೋ ಮೀಟರ್ ದೂರದವರೆಗೆ ನೀರು ಕೊಡಲು ಆಗುತ್ತದೆ. ಆದರೆ ಡ್ಯಾಂ ಬುಡದಲ್ಲಿರುವ ಹಳ್ಳಿಗಳಿಗೆ ನೀರು ಕೊಡಲು ಏಕೆ ಆಗುತ್ತಿಲ್ಲ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಒಂದು ವೇಳೆ ಸಚಿವರು ಗ್ರಾಮಸ್ಥರ ಮನವಿಗೆ ಸ್ಪಂದಿಸಿದಿದ್ದರೆ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications