Vani Vilasa Sagara Dam: ಅಬ್ಬರಿಸಿದ ಕೃತಿಕಾ ಮಳೆಯಿಂದ ವಿವಿ ಸಾಗರ ಜಲಾಶಯಕ್ಕೆ ಜೀವಕಳೆ: ನೀರಿನ ಮಟ್ಟ ಎಷ್ಟಿದೆ?
ಚಿತ್ರದುರ್ಗ, ಮೇ, 19: ಇದೀಗ ರಾಜ್ಯಾದ್ಯಂತ ಕೃತಿಕಾ ಮಳೆಯದ್ದೇ ಅಬ್ಬರ ಜೋರಾಗಿದೆ. ಅದರಲ್ಲೂ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮತ್ತೊಂದೆಡೆ ಭಾರೀ ಮಳೆಯಿಂದ ಇದೀಗ ವಿವಿ ಸಾಗರ ಡ್ಯಾಂಗೆ ಜೀವಕಳೆ ಬಂದಂತಾಗಿದೆ. ಹಾಗಾದರೆ ಇದೀಗ ಪ್ರಸ್ತುತ ಇಂದು (ಮೇ 19) ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಉತ್ತಮ ಮಳೆಯಾಗಿದ್ದರಿಂದ ಹೊಸದುರ್ಗ ತಾಲ್ಲೂಕಿನ ಕೆಲ್ಲೋಡ್ ಚೆಕ್ ಡ್ಯಾಂ ಭರ್ತಿಯಾಗಿ ಮೈದುಂಬಿ ಹರಿದು, ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯದ ಕಡೆ ನೀರು ಹರಿದು ಬರುತ್ತಿದೆ. ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೆಲ್ಲೋಡ್ ಚೆಕ್ ಡ್ಯಾಂ ಇದೀಗ ಒಂದೇ ದಿನದಲ್ಲಿ ಮೈದುಂಬಿ ಹರಿಯುತ್ತಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿಸಿದೆ.

ಪ್ರಸಕ್ತ ಸಾಲಿನಲ್ಲಿ ಆರಂಭದಲ್ಲಿ ಮುಂಗಾರು ಮಳೆ ಅಬ್ಬರಿಸಿದ್ದು, ರೈತರು ಉತ್ತಮ ಬೆಳೆ ಬೆಳೆಯುವ ನಿರೀಕ್ಷೆಯಲ್ಲಿದ್ದಾರೆ. 2022ರಲ್ಲಿ ಎರಡನೇ ಬಾರಿಗೆ ಭರ್ತಿಯಾಗಿ ಕೋಡಿ ಬಿದ್ದಿದ್ದ ವಿವಿ ಸಾಗರ ಡ್ಯಾಂಗೆ ಕಳೆದ ವರ್ಷ ಮಳೆ ಇಲ್ಲದ ಕಾರಣ ನೀರು ಹರಿದು ಬಂದಿರಲಿಲ್ಲ. ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 300 ರಿಂದ 500 ಕ್ಯೂಸೆಕ್ ನೀರು ಹರಿದು ಬರುತ್ತಿದೆ ಎನ್ನಬಹುದು.
ಇನ್ನು ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇನ್ನು ಒಂದು ವಾರ ಹೀಗೆ ಮಳೆ ಮುಂದುವರೆದರೆ ವಿವಿ ಸಾಗರಕ್ಕೆ ಅರ್ಧದಷ್ಟು ನೀರು ಬರುವುದರದಲ್ಲಿ ಯಾವುದೇ ಅನುಮಾನವಿಲ್ಲ.
ತಾಲೂಕುವಾರು ಮಳೆ ವಿವರ
* ಚಿತ್ರದುರ್ಗ -1ರಲ್ಲಿ 24.0, ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ -9.3, ಹೀರೆಗುಂಟನೂರು -4.5, ತುರುವನೂರು -13.4, ಸಿರಿಗೆರೆ -12.0, ಐನಹಳ್ಳಿಯಲ್ಲಿ 35.4 ಮಿಲಿ ಮೀಟರ್ ಮಳೆಯಾಗಿದೆ.
* ಹಿರಿಯೂರು-18.2,ಇಕ್ಕನೂರು-35.2, ಈಶ್ವರಗೆರೆ-16.0, ಬಬ್ಬೂರು-24.8 ಮಿಲಿ ಮೀಟರ್ ಮಳೆಯಾಗಿದ್ದು, ಸೂಗೂರಿನಲ್ಲಿ ಮಳೆಯಾದ ಬಗ್ಗೆ ವರದಿಯಾಗಿಲ್ಲ.
* ಹೊಸದುರ್ಗ -120.6, ಬಾಗೂರು -40.3, ಮಡದಕೆರೆ-51.2, ಮತ್ತೊಡ್-14.4, ಶ್ರೀರಾಂಪುರ -15.0 ಮಿಮೀ ಮಳೆಯಾಗಿದೆ.
* ಚಳ್ಳಕೆರೆ ತಾಲೂಕಿನಲ್ಲೂ ಮಳೆಯಾಗಿದ್ದು, ಚಳ್ಳಕೆರೆ -5.2, ನಾಯಕನಹಟ್ಟಿ -6.4, ತಳುಕು -4.2 ಹಾಗೂ ಡಿ.ಮರಿಕುಂಟೆಯಲ್ಲಿ 2.4 ಮಿಲಿ ಮೀಟರ್ ಮಳೆಯಾಗಿದೆ.
* ಇನ್ನು ಅರೆ ಮಲೆನಾಡು ಹೊಳಲ್ಕೆರೆ ಭಾಗದಲ್ಲೂ ಸಹ ಕೃತಿಕಾ ಮಳೆಯಾಗಿದೆ. ಹೊಳಲ್ಕೆರೆ -16.8, ರಾಮಗಿರಿ -25.4, ಚಿಕ್ಕಜಜೂರು -29.7, ಬಿ.ದುರ್ಗ -26.0, ಹೆಚ್.ಡಿ.ಪುರ -24.4 ಹಾಗೂ ತಾಳ್ಯದಲ್ಲಿ 3.2 ಮಿಲಿ ಮೀಟರ್ ಮಳೆಯಾಗಿದೆ.
* ಮೊಳಕಾಲ್ಮುರಿನ ರಾಯಾಪುರ- 2.2, ಬೀಜಿಕೆರೆ-2.5, ರಾಂಪುರ-3.2 ಮಿಲಿ ಮೀಟರ್ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications