Vani Vilasa Sagara Dam: ಇತಿಹಾಸ ಪ್ರಸಿದ್ಧ ವಾಣಿ ವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ ಎಷ್ಟಿದೆ?
Vani Vilasa Sagara Dam: ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ತಾಲೂಕಿನ ವಾಣಿ ವಿಲಾಸ ಸಾಗರ ಡ್ಯಾಂ ರಾಜ್ಯದ ಹಳೇ ಅಣೆಕಟ್ಟುಗಳಲ್ಲಿ ಒಂದಾಗಿದೆ. ಈಗಾಗಲೇ ವರ್ಷದಲ್ಲೇ ಎರಡು ಬಾರಿ ಭರ್ತಿಯಾಗಿ ಡ್ಯಾಂ ಹೊಸ ಇತಿಹಾಸವನ್ನು ನಿರ್ಮಿಸಿದೆ. ಹಾಗಾದ್ರೆ ಇಂದು (ನವೆಂಬರ್ 2) ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೋಟೆನಾಡು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನಲ್ಲಿರುವ ಈ ಜಲಾಶಯ ಈಗಾಗಲೇ 2025ರ ಜನವರಿಯಲ್ಲಿ ಮೊದಲ ಬಾರಿಗೆ ಭರ್ತಿಯಾಗಿತ್ತು. ಮತ್ತೆ ಅಕ್ಟೋಬರ್ನಲ್ಲಿ ಮತ್ತೆ ಕೋಡಿ ಬಿದ್ದಿದ್ದು, ಈ ಮೂಲಕ ಇದೇ ವರ್ಷದಲ್ಲಿ ಎರಡನೇ ಬಾರಿ ತುಂಬಿದೆ. ಮತ್ತೊಂದೆಡೆ, ಇದುವರೆಗೆ ನಾಲ್ಕನೇ ಬಾರಿಗೆ ಕೋಡಿ ಬಿದ್ದ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಾಜ್ಯದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿರುವ ವಾಣಿ ವಿಲಾಸ ಸಾಗರ ಜಲಾಶಯವನ್ನು 'ಮಾರಿಕಣಿವೆ' ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. ಇದನ್ನು ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿದೆ. ಇದೀಗ ಈ ಜಲಾಶಯ ಇದುವರೆಗೂ ನಾಲ್ಕನೇ ಬಾರಿಗೆ ಭರ್ತಿಯಾಗಿ ಹೊಸ ಇತಿಹಾಸ ಸೃಷ್ಟಿದೆ.
2025ರ ಆರಂಭದಲ್ಲಿ ಅಂದರೆ ಜನವರಿಯಲ್ಲಿ ವಾಣಿ ವಿಲಾಸ ಜಲಾಶಯ ಕೋಡಿ ಬಿದ್ದಿತ್ತು. ಅದು ಮಳೆ ನೀರಿನಿಂದಲ್ಲ, ಭದ್ರ ಡ್ಯಾಂನಿಂದ ಬಿಟ್ಟ ನೀರಿನಿಂದ. ಇನ್ನೂ ಇತ್ತೀಚೆಗಷ್ಟೇ ಮತ್ತೆ ಭರ್ತಿಯಾಗಿ ಕೋಡಿ ಬಿದ್ದಿದೆ. ಪ್ರಸ್ತುತ ನೀರಿನ ಮಟ್ಟ 132.60 ಅಡಿಯಿದೆ. ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯ 30 ಟಿಎಂಸಿ ಆಗಿದೆ. ಒಳಹರಿವು 652 ಕ್ಯೂಸೆಕ್ ಇದ್ದರೆ, 4,488 ಕ್ಯೂಸೆಕ್ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಡ್ಯಾಂ ಯಾವ್ಯಾವಾಗ ಭರ್ತಿ?: 1933ರಲ್ಲಿ ಜಲಾಶಯಕ್ಕೆ 135.25 ಅಡಿ ನೀರು ಸಂಗ್ರಹ ಆಗುವ ಮೂಲಕ ಮೊದಲ ಬಾರಿಗೆ ಕೋಡಿ ಬಿದ್ದು, ಇತಿಹಾಸ ಸೃಷ್ಟಿಸಿತ್ತು. ಬಳಿಕ 2022ರಲ್ಲಿ 135, 2025ರ ಜನವರಿ ತಿಂಗಳಲ್ಲಿ 130 ಅಡಿ ನೀರು ಬಂದಿದ್ದು, ಈ ವೇಳೆ ಕೋಡಿ ಬಿದ್ದು ಮೂರನೇ ಬಾರಿ ದಾಖಲೆ ಸೃಷ್ಟಿಸಿತ್ತು. ಇದೀಗ ಮತ್ತೆ ಇದೇ ವರ್ಷದ ಅಕ್ಟೋಬರ್ನಲ್ಲಿ ಭರ್ತಿಯಾಗಿದೆ. ಈ ಮೂಲಕ ಇದೇ ವರ್ಷದಲ್ಲಿ ಎರಡು ಬಾರಿ ಕೋಡಿ ಬಿದ್ದ ಹೆಗ್ಗಳಿಗೆ ಪಡೆದುಕೊಂಡಿದೆ.
ಯಾವ್ಯಾವ ವರ್ಷ ನೀರಿನ ಮಟ್ಟ ಎಷ್ಟು?: 1917ರಲ್ಲಿ 120.60 ಅಡಿ, 1918 - 121.30, 1919-128.30, 1920 - 125.50, 1932 - 125.50, ಅಡಿ, 1933 - 135.25 ಅಡಿ, 1934 - 130.24 ಅಡಿ, 1935 - 123.22 ಅಡಿ, 1956 - 125 ಅಡಿ, 1957 - 125.05 ಅಡಿ, 1958 - 124.50 ಅಡಿ, 2000 - 122.50 ಅಡಿ, 2021 - 125.50 ಅಡಿ, 2022 - 135 ಅಡಿ, 2024ರಲ್ಲಿ 128.40 ಅಡಿ, 2025 ಜನವರಿಯಲ್ಲಿ 130 ಅಡಿ, 2025ರ ಅಕ್ಟೋಬರ್ನಲ್ಲಿ 132 ಅಡಿ ನೀರು ಸಂಗ್ರವಾಗಿ ದಾಖಲೆ ನಿರ್ಮಿಸಿದೆ.
1907ರಲ್ಲಿ ನಿರ್ಮಾಣ ಆಗಿರುವ ಈ ಡ್ಯಾಂಗೆ ಸುಮಾರು 117 ವರ್ಷಗಳ ಕಾಲ ಇತಿಹಾಸ ಇದೆ. ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಹುಟ್ಟುವ "ವೇದಾ" ನದಿ ಕಡೂರಿನ ಬಳಿ "ಅವತಿ" ಎಂಬ ನದಿಯನ್ನು ಸೇರಿ ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ. ಇದು ಕೋಟೆನಾಡು ಚಿತ್ರದುರ್ಗ ಜಿಲ್ಲೆ ಜನರ ಜೀವನಾಡಿ ಅಂತಲೂ ಹೇಳಲಾಗುತ್ತದೆ. ಸದ್ಯ ಇದೀಗ ಮಳೆರಾಯನ ಆರ್ಭಟ ತಗ್ಗಿದೆ. ಒಟ್ಟಿನಲ್ಲಿ ಜಲಾಶಯ ಕೋಡಿಬಿದ್ದ ಹಿನ್ನೆಲೆ ಜಿಲ್ಲೆ ಜನರಿಗೆ ಸಂತಸ ಮೂಡಿಸಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications