Vani Vilasa Sagara Dam: ವಾಣಿ ವಿಲಾಸ ಸಾಗರ ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ?-ಅಂಕಿಅಂಶಗಳ ವಿವರ ಇಲ್ಲಿದೆ
Vani Vilasa Sagara Dam: ಮಧ್ಯ ಕರ್ನಾಟಕದ, ಬಯಲು ಸೀಮೆಯ ರೈತರ ಏಕೈಕ ಜೀವನಾಡಿಯಾಗಿರುವ ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸ ಜಲಾಶಯಕ್ಕೆ ಪ್ರಸ್ತುತ ಸಾಲಿನಲ್ಲಿ 1.65 ಅಡಿ ಹೊಸ ಮಳೆ ನೀರು ಸಂಗ್ರಹವಾಗಿದೆ.
ಡ್ಯಾಂ ಮೇಲ್ಭಾಗದ ಚಿಕ್ಕಮಗಳೂರು, ತರೀಕೆರೆ, ಅಜ್ಜಂಪುರ ಇನ್ನಿತರ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಿನ ಮಳೆ ನೀರು ವೇದಾವತಿ ನದಿ ಮೂಲಕ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಹರಿದು ಬರುತ್ತಿದೆ.

ಜಲಾಶಯಕ್ಕೆ ಒಳಹರಿವು ತಗ್ಗಿದೆ. ಸೋಮವಾರ ಡ್ಯಾಂಗೆ 3,800 ಕ್ಯೂಸೆಕ್ ಒಳಹರಿವು ನೀರು ಹರಿದು ಬಂದಿತ್ತು. ನಂತರ ಮಂಗಳವಾರ 5,100 ಕ್ಯೂಸೆಕ್ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿತ್ತು. ಮತ್ತೆ ಬುಧವಾರ ಡ್ಯಾಂಗೆ 4800 ಕ್ಯೂಸೆಕ್ ಒಳಹರಿವಿನಲ್ಲಿ ತಗ್ಗಿದೆ.
ಪ್ರಸ್ತುತ ಜಲಾಶಯದ ನೀರಿನ ಮಟ್ಟ 113.65 ಅಡಿ ನೀರು ಇದೆ. ಪೂರ್ವ ಹಿಂಗಾರು ಮಳೆ ಆರಂಭದಲ್ಲಿ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು, ಈ ಭಾಗದ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ಮುಂದಿನ ದಿನಗಳಲ್ಲಿ ಜಲಾಶಯ ಭರ್ತಿಯಾಗಿ ಕೋಡಿ ಬೀಳುವ ಸಾಧ್ಯತೆ ಹೆಚ್ಚಿದೆ.
ಮರೆಯಾದ ನೀರಿನ ಆತಂಕ: ಜಿಲ್ಲೆಯಲ್ಲಿ ಮಳೆಯಿಲ್ಲದೆ ರೈತರು ತತ್ತರಿಸಿ ಹೋಗಿದ್ದರು. ಅಡಿಕೆ, ತೆಂಗು, ಬಾಳೆ ಇನ್ನೀತರ ಬೆಳೆಗಳನ್ನು ಉಳಿಸಿಕೊಳ್ಳಲು ಲಕ್ಷಾಂತರ ರೂಪಾಯಿ ಖರ್ಚ್ ಮಾಡಿ ಟ್ಯಾಂಕರ್ ನೀರಿನ ಮೊರೆ ಹೋಗಿದ್ದರು. ಇದೀಗ ಮಳೆ ಬಂದಿರುವುದರಿಂದ ಸದ್ಯಕ್ಕೆ ನೀರಿನ ಆತಂಕ ದೂರವಾಗಿದೆ.
2017ರಿಂದ 2018 ರವರೆಗೆ ಆವರಿಸಿದ್ದ ಭೀಕರ ಭರ ಜಲ ಮೂಲಗಳನ್ನು ಬರಿದಾಗಿಸಿತ್ತು. ಅಲ್ಲದೆ, 2019 ಮಾರ್ಚ್ ವೇಳೆಗೆ ಡ್ಯಾಂ ನೀರಿನ ಮಟ್ಟ ಕೇವಲ 61.5 ಅಡಿಗೆ ತಲುಪುವ ಮೂಲಕ ಅಚ್ಚುಕಟ್ಟು ಪ್ರದೇಶದ ರೈತರನ್ನು ಆತಂಕಕ್ಕೆ ತಳ್ಳಿತ್ತು. ನೀರಿನ ಕೊರತೆಯಿಂದಾಗಿ ಅಚ್ಚುಕಟ್ಟು ಪ್ರದೇಶದಲ್ಲಿ ಎರಡು, ಮೂರು ತಲೆಗಳಿಂದ ಪೋಷಿಸಿಕೊಂಡು ಬಂದಿದ್ದ ಅಡಿಕೆ ತೋಟಗಳು ಒಣಗಿ ರೈತರನ್ನ ದಿವಾಳಿಯನ್ನಾಗಿ ಮಾಡಿತ್ತು. 2022ರಲ್ಲಿ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ರೈತರ ಬದುಕು ಮುನ್ನೆಲೆಗೆ ಬಂದಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications